Homeಮುಖಪುಟನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಸುಪ್ರೀಂ ಕೋರ್ಟ್‌ನ 33 ಹಾಲಿ ನ್ಯಾಯಾಧೀಶರಲ್ಲಿ 21 ನ್ಯಾಯಾಧೀಶರು ಸೋಮವಾರ (ಮೇ.5) ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಪ್ರಕಟಿಸಲಾಗಿದೆ.

ನ್ಯಾಯಾಂಗದೊಳಗಿನ ಇತ್ತೀಚಿನ ಭ್ರಷ್ಟಾಚಾರದ ಆರೋಪಗಳು, ವಿಶೇಷವಾಗಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿವಾದದ ನಂತರ, ಏಪ್ರಿಲ್ 1ರಂದು ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರ ಆಸ್ತಿ ವಿವರಗಳನ್ನು ಉನ್ನತ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಲು ನಿರ್ಧರಿಸಿತ್ತು.

ಅದರಂತೆ ನಿನ್ನೆ ವಿವರಗಳನ್ನು ಪ್ರಕಟಿಸಲಾಗಿದೆ. ಆದಾಗ್ಯೂ, 12 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ.

ಈಗಾಗಲೇ ಸ್ವೀಕರಿಸಲಾದ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ಇತರ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಮುಂದೆ ಅಪ್ಲೋಡ್ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ ಹೇಳಿದೆ.

ನ್ಯಾಯಾಧೀಶ ಆಸ್ತಿ ವಿವರಗಳನ್ನು ನೋಡಲು ಅವರ ಹೆಸರಿನ ಮುಂದಿನ ಲಿಂಕ್ ಕ್ಲಿಕ್ ಮಾಡಿ

  1. ನ್ಯಾಯಮೂರ್ತಿ ಸಂಜೀವ್ ಖನ್ನಾ, ಭಾರತದ ಮುಖ್ಯ ನ್ಯಾಯಮೂರ್ತಿ ಲಿಂಕ್
  2. ನ್ಯಾಯಮೂರ್ತಿ ಭೂಷಣ ರಾಮಕೃಷ್ಣ ಗವಾಯಿ ಲಿಂಕ್ 
  3. ನ್ಯಾಯಮೂರ್ತಿ ಸೂರ್ಯ ಕಾಂತ್ ಲಿಂಕ್
  4. ನ್ಯಾಯಮೂರ್ತಿ ಅಭಯ್ ಎಸ್. ಓಕಾ ಲಿಂಕ್ 
  5. ನ್ಯಾಯಮೂರ್ತಿ ವಿಕ್ರಮ್ ನಾಥ್ ಲಿಂಕ್  
  6. ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಲಿಂಕ್
  7. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಲಿಂಕ್
  8. ನ್ಯಾಯಮೂರ್ತಿ ಪಮಿದಿಘಂಟಂ ಶ್ರೀ ನರಸಿಂಹ ಲಿಂಕ್
  9. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಲಿಂಕ್
  10. ನ್ಯಾಯಮೂರ್ತಿ ಜಮ್ಶೆಡ್ ಬುರ್ಜೋರ್ ಪರ್ದಿವಾಲಾ ಲಿಂಕ್
  11. ನ್ಯಾಯಮೂರ್ತಿ ಪಂಕಜ್ ಮಿಥಲ್ ಲಿಂಕ್
  12. ನ್ಯಾಯಮೂರ್ತಿ ಸಂಜಯ್ ಕರೋಲ್ ಲಿಂಕ್
  13. ನ್ಯಾಯಮೂರ್ತಿ ಸಂಜಯ್ ಕುಮಾರ್ ಲಿಂಕ್
  14. ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಲಿಂಕ್
  15. ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಲಿಂಕ್
  16. ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಲಿಂಕ್ 
  17. ನ್ಯಾಯಮೂರ್ತಿ ಎಸ್.ವೆಂಕಟನಾರಾಯಣ ಭಟ್ಟಿ ಲಿಂಕ್ 
  18. ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಾಸಿಹ್ ಲಿಂಕ್
  19. ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಲಿಂಕ್
  20. ನ್ಯಾಯಮೂರ್ತಿ ಮನಮೋಹನ್ ಲಿಂಕ್
  21. ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಲಿಂಕ್ 

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ, ಬಿ.ವಿ. ನಾಗರತ್ನ, ದೀಪಂಕರ್ ದತ್ತ, ಅಹ್ಸಾನುದ್ದೀನ್ ಅಮಾನುಲ್ಲಾ, ಮನೋಜ್ ಮಿಶ್ರಾ, ಅರವಿಂದ್ ಕುಮಾರ್, ಪ್ರಶಾಂತ್ ಕುಮಾರ್ ಮಿಶ್ರಾ, ಸತೀಶ್ ಚಂದ್ರ ಶರ್ಮಾ, ಪ್ರಸನ್ನ ಭಾಲಚಂದ್ರ ವರಾಳೆ, ಎನ್. ಕೋಟಿಶ್ವರ್ ಸಿಂಗ್, ಆರ್. ಮಹಾದೇವನ್, ಜೋಯ್ಮಲ್ಯ ಬಾಗ್ಚಿ ತಮ್ಮ ಆಸ್ತಿ ವಿವರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

ಈ ಹಿಂದೆ ಸುಪ್ರೀಂ ಕೋರ್ಟ್ ವೆಬ್‌ಸೈಟ್ ಸಿಜೆಐಗೆ ಆಸ್ತಿ ಘೋಷಣೆ ಮಾಡಿದ ನ್ಯಾಯಾಧೀಶರ ಹೆಸರುಗಳನ್ನು ಮಾತ್ರ ತೋರಿಸುತ್ತಿತ್ತು. 2009ರಲ್ಲಿ, ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರು ಸಲ್ಲಿಸಿದ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ನಿರ್ಧರಿಸಿತ್ತು. ಆದಾಗ್ಯೂ, ಈ ಪ್ರಕ್ರಿಯೆಯು ಸ್ವಯಂಪ್ರೇರಿತ ಘೋಷಣೆಯನ್ನು ಒಳಗೊಂಡಿತ್ತು.

ಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ ‘ಲವ್ ಜಿಹಾದ್’ ತನಿಖೆಗೆ ಎಸ್‌ಐಟಿ ರಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...