Homeಮುಖಪುಟನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಸುಪ್ರೀಂ ಕೋರ್ಟ್‌ನ 33 ಹಾಲಿ ನ್ಯಾಯಾಧೀಶರಲ್ಲಿ 21 ನ್ಯಾಯಾಧೀಶರು ಸೋಮವಾರ (ಮೇ.5) ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಪ್ರಕಟಿಸಲಾಗಿದೆ.

ನ್ಯಾಯಾಂಗದೊಳಗಿನ ಇತ್ತೀಚಿನ ಭ್ರಷ್ಟಾಚಾರದ ಆರೋಪಗಳು, ವಿಶೇಷವಾಗಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿವಾದದ ನಂತರ, ಏಪ್ರಿಲ್ 1ರಂದು ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರ ಆಸ್ತಿ ವಿವರಗಳನ್ನು ಉನ್ನತ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಲು ನಿರ್ಧರಿಸಿತ್ತು.

ಅದರಂತೆ ನಿನ್ನೆ ವಿವರಗಳನ್ನು ಪ್ರಕಟಿಸಲಾಗಿದೆ. ಆದಾಗ್ಯೂ, 12 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ.

ಈಗಾಗಲೇ ಸ್ವೀಕರಿಸಲಾದ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ಇತರ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಮುಂದೆ ಅಪ್ಲೋಡ್ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ ಹೇಳಿದೆ.

ನ್ಯಾಯಾಧೀಶ ಆಸ್ತಿ ವಿವರಗಳನ್ನು ನೋಡಲು ಅವರ ಹೆಸರಿನ ಮುಂದಿನ ಲಿಂಕ್ ಕ್ಲಿಕ್ ಮಾಡಿ

  1. ನ್ಯಾಯಮೂರ್ತಿ ಸಂಜೀವ್ ಖನ್ನಾ, ಭಾರತದ ಮುಖ್ಯ ನ್ಯಾಯಮೂರ್ತಿ ಲಿಂಕ್
  2. ನ್ಯಾಯಮೂರ್ತಿ ಭೂಷಣ ರಾಮಕೃಷ್ಣ ಗವಾಯಿ ಲಿಂಕ್ 
  3. ನ್ಯಾಯಮೂರ್ತಿ ಸೂರ್ಯ ಕಾಂತ್ ಲಿಂಕ್
  4. ನ್ಯಾಯಮೂರ್ತಿ ಅಭಯ್ ಎಸ್. ಓಕಾ ಲಿಂಕ್ 
  5. ನ್ಯಾಯಮೂರ್ತಿ ವಿಕ್ರಮ್ ನಾಥ್ ಲಿಂಕ್  
  6. ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಲಿಂಕ್
  7. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಲಿಂಕ್
  8. ನ್ಯಾಯಮೂರ್ತಿ ಪಮಿದಿಘಂಟಂ ಶ್ರೀ ನರಸಿಂಹ ಲಿಂಕ್
  9. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಲಿಂಕ್
  10. ನ್ಯಾಯಮೂರ್ತಿ ಜಮ್ಶೆಡ್ ಬುರ್ಜೋರ್ ಪರ್ದಿವಾಲಾ ಲಿಂಕ್
  11. ನ್ಯಾಯಮೂರ್ತಿ ಪಂಕಜ್ ಮಿಥಲ್ ಲಿಂಕ್
  12. ನ್ಯಾಯಮೂರ್ತಿ ಸಂಜಯ್ ಕರೋಲ್ ಲಿಂಕ್
  13. ನ್ಯಾಯಮೂರ್ತಿ ಸಂಜಯ್ ಕುಮಾರ್ ಲಿಂಕ್
  14. ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಲಿಂಕ್
  15. ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಲಿಂಕ್
  16. ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಲಿಂಕ್ 
  17. ನ್ಯಾಯಮೂರ್ತಿ ಎಸ್.ವೆಂಕಟನಾರಾಯಣ ಭಟ್ಟಿ ಲಿಂಕ್ 
  18. ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಾಸಿಹ್ ಲಿಂಕ್
  19. ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಲಿಂಕ್
  20. ನ್ಯಾಯಮೂರ್ತಿ ಮನಮೋಹನ್ ಲಿಂಕ್
  21. ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಲಿಂಕ್ 

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ, ಬಿ.ವಿ. ನಾಗರತ್ನ, ದೀಪಂಕರ್ ದತ್ತ, ಅಹ್ಸಾನುದ್ದೀನ್ ಅಮಾನುಲ್ಲಾ, ಮನೋಜ್ ಮಿಶ್ರಾ, ಅರವಿಂದ್ ಕುಮಾರ್, ಪ್ರಶಾಂತ್ ಕುಮಾರ್ ಮಿಶ್ರಾ, ಸತೀಶ್ ಚಂದ್ರ ಶರ್ಮಾ, ಪ್ರಸನ್ನ ಭಾಲಚಂದ್ರ ವರಾಳೆ, ಎನ್. ಕೋಟಿಶ್ವರ್ ಸಿಂಗ್, ಆರ್. ಮಹಾದೇವನ್, ಜೋಯ್ಮಲ್ಯ ಬಾಗ್ಚಿ ತಮ್ಮ ಆಸ್ತಿ ವಿವರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

ಈ ಹಿಂದೆ ಸುಪ್ರೀಂ ಕೋರ್ಟ್ ವೆಬ್‌ಸೈಟ್ ಸಿಜೆಐಗೆ ಆಸ್ತಿ ಘೋಷಣೆ ಮಾಡಿದ ನ್ಯಾಯಾಧೀಶರ ಹೆಸರುಗಳನ್ನು ಮಾತ್ರ ತೋರಿಸುತ್ತಿತ್ತು. 2009ರಲ್ಲಿ, ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರು ಸಲ್ಲಿಸಿದ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ನಿರ್ಧರಿಸಿತ್ತು. ಆದಾಗ್ಯೂ, ಈ ಪ್ರಕ್ರಿಯೆಯು ಸ್ವಯಂಪ್ರೇರಿತ ಘೋಷಣೆಯನ್ನು ಒಳಗೊಂಡಿತ್ತು.

ಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ ‘ಲವ್ ಜಿಹಾದ್’ ತನಿಖೆಗೆ ಎಸ್‌ಐಟಿ ರಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...