Homeಮುಖಪುಟಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

ಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

- Advertisement -
- Advertisement -

ದಕ್ಷಿಣ ಕುವೈತ್‌ನ ಮಂಗಾಫ್‌ನಲ್ಲಿ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ 49 ಮಂದಿಯಲ್ಲಿ 21 ಮಲಯಾಳಿಗಳು ಸೇರಿದ್ದಾರೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯ್‌ ವಿಜಯನ್‌ ದೃಢಪಡಿಸಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕುರಿತು ಸಹಕರಿಸಲು ಮತ್ತು ಶವಗಳನ್ನು ಮನೆಗೆ ತರಲು ಸಹಾಯ ಮಾಡಲು ಕುವೈತ್‌ಗೆ ತೆರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕೇರಳ ಸರ್ಕಾರದ ಅಧೀನದ ಅನಿವಾಸಿ ಕೇರಳೀಯರ(ಎನ್‌ಆರ್‌ಕೆ) ವೆಲ್‌ಫೇರ್ ಏಜೆನ್ಸಿಯ ಮೂಲಗಳು ಹಲವು ಮೃತದೇಹಗಳನ್ನು ಇನ್ನೂ ಗುರುತಿಸಬೇಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಲಯಾಳಿಗಳು ಕೂಡ ಸೇರಿದ್ದಾರೆ.

ಈ ಕುರಿತು ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ಸಂಪುಟ ಸಭೆಯನ್ನು ಕರೆದಿದ್ದಾರೆ. ಇದಲ್ಲದೆ ಜಗತ್ತಿನಾದ್ಯಂತ ಇದ್ದ ಅನಿವಾಸಿ ಕೇರಳಿಯರ ವೆಲ್‌ಫೇರ್ ಏಜೆನ್ಸಿಯ ಪ್ರತಿನಿಧಿಗಳ ಸಮಾವೇಶ ‘ಲೋಕ ಕೇರಳ ಸಭೆ’ ಯನ್ನು ಗುರುವಾರದಿಂದ ಶನಿವಾರದವರೆಗೆ ತಿರುವನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಅವಘಡದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಸ್ಥಳೀಯ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೊಟ್ಟಾಯಂನ ಚಂಗನಾಶ್ಸೆರಿಯ ಶ್ರೀಹರಿ ಪಿ(27), ಮಲಪ್ಪುರಂನ ಪೆರಿಂತಲ್ಮನ್ನ ಬಾಹುಲೇಯನ್(36), ಕೊಲ್ಲಂನ ಶಮೀರ್ ಉಮರುದ್ದೀನ್(30) ಚೆಂಗಳದ ಕೆ ರೆಂಜಿತ್(34), ಕಾಸರಗೋಡಿನ ಪಿಲಿಕೋಡುವಿನ ಕೇಲು (58) ಕೊಟ್ಟಾಯಂನ ಸ್ಟೆಫಿನ್ ಅಬ್ರಹಾಂ ಸಾಬು(29), ಪತ್ತನಂತಿಟ್ಟದ ಪಂದಳಂನ ಆಕಾಶ್ ಶಶಿಧರನ್(31), ಕೊಲ್ಲಂನ ಪುನಲೂರಿನ ಸಾಜನ್ ಜಾರ್ಜ್(29), ಪತ್ತನಂತಿಟ್ಟಾದಲ್ಲಿ ಸಾಜು ವರ್ಗೀಸ್ (56),  ಪತ್ತನಂತಿಟ್ಟದ ಪಿ ವಿ ಮುರಳೀಧರನ್(68), ಕೊಲ್ಲಂನ ಲುಕೋಸ್(48), ತಿರುವಲ್ಲಾದ ಥಾಮಸ್ ಉಮ್ಮನ್(37)  ಮತ್ತು ಮಲಪ್ಪುರಂನ ನೂಹು ಮೃತರು ಎಂದು ಹೇಳಲಾಗಿದೆ.

ಕುವೈತ್ ನಗರದ ದಕ್ಷಿಣ ಭಾಗದಲ್ಲಿರುವ ಮಂಗಾಫ್ ಪ್ರದೇಶದ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ತೆರಳಿದ್ದಾರೆ.

ಸಂತ್ರಸ್ತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅನೇಕ ದೇಹಗಳು ತೀವ್ರವಾಗಿ ಸುಟ್ಟುಹೋಗಿವೆ ಮತ್ತು ಗುರುತಿಸಲಾಗದಷ್ಟು ಸುಟ್ಟುಹೋಗಿವೆ, ಮೃತದೇಹಗಳ ಗುರುತಿಸುವಿಕೆಗಾಗಿ ಡಿಎನ್‌ಎ ಪರೀಕ್ಷೆಗಳ ಅಗತ್ಯವಿದೆ. ವಾಯುಪಡೆಯ ವಿಮಾನವು ಸಿದ್ಧವಾಗಿದೆ. ಮೃತದೇಹ ಗುರುತು ಪತ್ತೆಯಾದ ತಕ್ಷಣ ಭಾರತಕ್ಕೆ ಮೃತದೇಹವನ್ನು ತಂದು ಕುಟುಂಬಕ್ಕೆ ಹಸ್ತಾಂತರ ಮಾಡುವ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ದುರಂತಕ್ಕೆ ಕಾರಣವಾದ ಸಂದರ್ಭಗಳನ್ನು ಬಹಿರಂಗಪಡಿಸಲು ತನಿಖೆಯನ್ನು ನಡೆಸಲಾಗುತ್ತಿದೆ. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದ ಕುವೈತ್‌ನ ರಕ್ಷಣಾ ಮತ್ತು ಆಂತರಿಕ ಸಚಿವ ಶೇಖ್ ಫಹಾದ್ ಅಲ್-ಯೂಸೆಫ್ ಅಲ್-ಸಾಬಾ ಕಟ್ಟಡದ  ಮಾಲಕರನ್ನು ಮತ್ತು ಕಟ್ಟಡದ ಸಿಬ್ಬಂದಿಯನ್ನು ಬಂಧಿಸುವಂತೆ ಆದೇಶಿಸಿರುವುದಾಗಿ ಹೇಳಿದ್ದಾರೆ.

ಇಲ್ಲಿಯವರೆಗೆ ಅಗ್ನಿ ದುರಂತಕ್ಕೆ ಕಾರಣವೇನು ಎಂಬುದರ ಕುರಿತು ಯಾವುದೇ ಅಧಿಕೃತ ದೃಢೀಕರಣವಿಲ್ಲ. ಅಗ್ನಿ ದುರಂತ ಹೆಚ್ಚಿನ ಹೊಗೆ ಹೊರ ಸೂಸಲು ಕಾರಣವಾಗಿದೆ. ಹೊಗೆ ತುಂಬಿದ್ದರಿಂದ ಮೆಟ್ಟಿಲುಗಳ ಕೆಳಗೆ ಓಡಲು ಪ್ರಯತ್ನಿಸುತ್ತಿರುವಾಗ ಅನೇಕ ಜನರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ಪತ್ತೆ ಹಚ್ಚಲಾಗಿದೆ.

ಇದನ್ನು ಓದಿ: ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...