Homeಮುಖಪುಟಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

ಕುವೈತ್‌ ಅಗ್ನಿ ದುರಂತದಲ್ಲಿ 21 ಕೇರಳಿಗರು ಸಾವು: ದೃಢಪಡಿಸಿದ ಸರಕಾರ

- Advertisement -
- Advertisement -

ದಕ್ಷಿಣ ಕುವೈತ್‌ನ ಮಂಗಾಫ್‌ನಲ್ಲಿ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ 49 ಮಂದಿಯಲ್ಲಿ 21 ಮಲಯಾಳಿಗಳು ಸೇರಿದ್ದಾರೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯ್‌ ವಿಜಯನ್‌ ದೃಢಪಡಿಸಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕುರಿತು ಸಹಕರಿಸಲು ಮತ್ತು ಶವಗಳನ್ನು ಮನೆಗೆ ತರಲು ಸಹಾಯ ಮಾಡಲು ಕುವೈತ್‌ಗೆ ತೆರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕೇರಳ ಸರ್ಕಾರದ ಅಧೀನದ ಅನಿವಾಸಿ ಕೇರಳೀಯರ(ಎನ್‌ಆರ್‌ಕೆ) ವೆಲ್‌ಫೇರ್ ಏಜೆನ್ಸಿಯ ಮೂಲಗಳು ಹಲವು ಮೃತದೇಹಗಳನ್ನು ಇನ್ನೂ ಗುರುತಿಸಬೇಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಲಯಾಳಿಗಳು ಕೂಡ ಸೇರಿದ್ದಾರೆ.

ಈ ಕುರಿತು ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ಸಂಪುಟ ಸಭೆಯನ್ನು ಕರೆದಿದ್ದಾರೆ. ಇದಲ್ಲದೆ ಜಗತ್ತಿನಾದ್ಯಂತ ಇದ್ದ ಅನಿವಾಸಿ ಕೇರಳಿಯರ ವೆಲ್‌ಫೇರ್ ಏಜೆನ್ಸಿಯ ಪ್ರತಿನಿಧಿಗಳ ಸಮಾವೇಶ ‘ಲೋಕ ಕೇರಳ ಸಭೆ’ ಯನ್ನು ಗುರುವಾರದಿಂದ ಶನಿವಾರದವರೆಗೆ ತಿರುವನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಅವಘಡದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಸ್ಥಳೀಯ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೊಟ್ಟಾಯಂನ ಚಂಗನಾಶ್ಸೆರಿಯ ಶ್ರೀಹರಿ ಪಿ(27), ಮಲಪ್ಪುರಂನ ಪೆರಿಂತಲ್ಮನ್ನ ಬಾಹುಲೇಯನ್(36), ಕೊಲ್ಲಂನ ಶಮೀರ್ ಉಮರುದ್ದೀನ್(30) ಚೆಂಗಳದ ಕೆ ರೆಂಜಿತ್(34), ಕಾಸರಗೋಡಿನ ಪಿಲಿಕೋಡುವಿನ ಕೇಲು (58) ಕೊಟ್ಟಾಯಂನ ಸ್ಟೆಫಿನ್ ಅಬ್ರಹಾಂ ಸಾಬು(29), ಪತ್ತನಂತಿಟ್ಟದ ಪಂದಳಂನ ಆಕಾಶ್ ಶಶಿಧರನ್(31), ಕೊಲ್ಲಂನ ಪುನಲೂರಿನ ಸಾಜನ್ ಜಾರ್ಜ್(29), ಪತ್ತನಂತಿಟ್ಟಾದಲ್ಲಿ ಸಾಜು ವರ್ಗೀಸ್ (56),  ಪತ್ತನಂತಿಟ್ಟದ ಪಿ ವಿ ಮುರಳೀಧರನ್(68), ಕೊಲ್ಲಂನ ಲುಕೋಸ್(48), ತಿರುವಲ್ಲಾದ ಥಾಮಸ್ ಉಮ್ಮನ್(37)  ಮತ್ತು ಮಲಪ್ಪುರಂನ ನೂಹು ಮೃತರು ಎಂದು ಹೇಳಲಾಗಿದೆ.

ಕುವೈತ್ ನಗರದ ದಕ್ಷಿಣ ಭಾಗದಲ್ಲಿರುವ ಮಂಗಾಫ್ ಪ್ರದೇಶದ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ತೆರಳಿದ್ದಾರೆ.

ಸಂತ್ರಸ್ತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅನೇಕ ದೇಹಗಳು ತೀವ್ರವಾಗಿ ಸುಟ್ಟುಹೋಗಿವೆ ಮತ್ತು ಗುರುತಿಸಲಾಗದಷ್ಟು ಸುಟ್ಟುಹೋಗಿವೆ, ಮೃತದೇಹಗಳ ಗುರುತಿಸುವಿಕೆಗಾಗಿ ಡಿಎನ್‌ಎ ಪರೀಕ್ಷೆಗಳ ಅಗತ್ಯವಿದೆ. ವಾಯುಪಡೆಯ ವಿಮಾನವು ಸಿದ್ಧವಾಗಿದೆ. ಮೃತದೇಹ ಗುರುತು ಪತ್ತೆಯಾದ ತಕ್ಷಣ ಭಾರತಕ್ಕೆ ಮೃತದೇಹವನ್ನು ತಂದು ಕುಟುಂಬಕ್ಕೆ ಹಸ್ತಾಂತರ ಮಾಡುವ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ದುರಂತಕ್ಕೆ ಕಾರಣವಾದ ಸಂದರ್ಭಗಳನ್ನು ಬಹಿರಂಗಪಡಿಸಲು ತನಿಖೆಯನ್ನು ನಡೆಸಲಾಗುತ್ತಿದೆ. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದ ಕುವೈತ್‌ನ ರಕ್ಷಣಾ ಮತ್ತು ಆಂತರಿಕ ಸಚಿವ ಶೇಖ್ ಫಹಾದ್ ಅಲ್-ಯೂಸೆಫ್ ಅಲ್-ಸಾಬಾ ಕಟ್ಟಡದ  ಮಾಲಕರನ್ನು ಮತ್ತು ಕಟ್ಟಡದ ಸಿಬ್ಬಂದಿಯನ್ನು ಬಂಧಿಸುವಂತೆ ಆದೇಶಿಸಿರುವುದಾಗಿ ಹೇಳಿದ್ದಾರೆ.

ಇಲ್ಲಿಯವರೆಗೆ ಅಗ್ನಿ ದುರಂತಕ್ಕೆ ಕಾರಣವೇನು ಎಂಬುದರ ಕುರಿತು ಯಾವುದೇ ಅಧಿಕೃತ ದೃಢೀಕರಣವಿಲ್ಲ. ಅಗ್ನಿ ದುರಂತ ಹೆಚ್ಚಿನ ಹೊಗೆ ಹೊರ ಸೂಸಲು ಕಾರಣವಾಗಿದೆ. ಹೊಗೆ ತುಂಬಿದ್ದರಿಂದ ಮೆಟ್ಟಿಲುಗಳ ಕೆಳಗೆ ಓಡಲು ಪ್ರಯತ್ನಿಸುತ್ತಿರುವಾಗ ಅನೇಕ ಜನರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ಪತ್ತೆ ಹಚ್ಚಲಾಗಿದೆ.

ಇದನ್ನು ಓದಿ: ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...