Homeಮುಖಪುಟಮಹಾರಾಷ್ಟ್ರ: ಮಕ್ಕಳ ಅಶ್ಲೀಲ ಚಿತ್ರ ತಯಾರಿಸಿ, ಹಂಚಿಕೆ ಮಾಡಿದ್ದ 105 ಮಂದಿ ಬಂಧನ, 213 ಪ್ರಕರಣ

ಮಹಾರಾಷ್ಟ್ರ: ಮಕ್ಕಳ ಅಶ್ಲೀಲ ಚಿತ್ರ ತಯಾರಿಸಿ, ಹಂಚಿಕೆ ಮಾಡಿದ್ದ 105 ಮಂದಿ ಬಂಧನ, 213 ಪ್ರಕರಣ

- Advertisement -
- Advertisement -

ಮಕ್ಕಳ ಅಶ್ಲೀಲ, ಲೈಂಗಿಕ ಕಿರುಕುಳದ ವಿಡಿಯೊಗಳು ಮತ್ತು ಅಪ್ರಾಪ್ತ ವಯಸ್ಕರ ಛಾಯಾಚಿತ್ರಗಳನ್ನು ತಯಾರಿಸಿ, ಅಂತರ್ಜಾಲದಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ಮಹಾರಾಷ್ಟ್ರದಾದ್ಯಂತ 105 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆಪರೇಷನ್ ಬ್ಲ್ಯಾಕ್‌ಫೇಸ್’ ಅಂಗವಾಗಿ 2019 ರ ಡಿಸೆಂಬರ್‌ನಿಂದ ರಾಜ್ಯ ಸೈಬರ್ ಇಲಾಖೆಯು ಸ್ಥಳೀಯ ಪೊಲೀಸ್ ಠಾಣೆಗಳ ಸಮನ್ವಯದೊಂದಿಗೆ 213 ಎಫ್‌ಐಆರ್‌ಗಳನ್ನು ನೋಂದಾಯಿಸಿದ್ದು, 105 ಜನರನ್ನು ಬಂಧಿಸಿದೆ.

ಆರೋಪಿಗಳ ವಿರುದ್ಧ ಫೋಸ್ಕೋ ( Protection of Children from Sexual Offences Act) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಪ್ರಕರಣ ನೋಂದಾಯಿಸಲಾಗಿದೆ.

ಅಮೆರಿಕಾದ ’ಕಾಣೆಯಾದ ಮತ್ತು ಶೋಷಿತ ಮಕ್ಕಳ ರಾಷ್ಟ್ರೀಯ ಕೇಂದ್ರ’ವು, ಭಾರತದ ವಿವಿಧ ಭಾಗಗಳಿಂದ ಮಕ್ಕಳ ಅಶ್ಲೀಲ ಚಿತ್ರಗಳು, ವಿಡಿಯೋಗಳನ್ನು ಅಪ್‌ಲೋಡ್ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋಗೆ (NCRB) ತಿಳಿಸಿದ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿತ್ತು. ಎನ್‌ಸಿಆರ್‌ಬಿ ಮಾಹಿತಿಯನ್ನು ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ರವಾನಿಸಿದೆ.

ಇದನ್ನೂ ಓದಿ: ದೆಹಲಿ: ಅಶ್ಲೀಲ ಚಿತ್ರ, ವಿಡಿಯೊಗಳನ್ನು ಕಳಿಸುವಂತೆ ಒತ್ತಡ ಹೇರುತ್ತಿದ್ದ ಯುವಕನ ಬಂಧನ

2019 ರಿಂದ ಮಹಾರಾಷ್ಟ್ರದಿಂದ 15,255 ಮಕ್ಕಳ ಕಿರುಕುಳ ವಿಡಿಯೊಗಳು ಮತ್ತು ಫೋಟೋಗಳನ್ನು ವೆಬ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ. 15,255 ರಲ್ಲಿ 11,118 (ಶೇಕಡಾ 73) ಅನ್ನು ರಾಜ್ಯದ ಪ್ರಮುಖ ನಗರಗಳಿಂದ ಅಪ್‌ಲೋಡ್ ಮಾಡಲಾಗಿದೆ.

ಮುಂಬೈನಿಂದ 4,496 ಮತ್ತು ಪುಣೆಯಿಂದ 5,699 ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ಉಳಿದವುಗಳನ್ನು ಥಾಣೆ, ನಾಗಪುರ, ಹೊಸ ಮುಂಬೈ, ಪಿಂಪ್ರಿ ಚಿಂಚ್‌ವಾಡ್, ನಾಸಿಕ್, ಔರಂಗಾಬಾದ್ ಮತ್ತು ಸೊಲ್ಲಾಪುರದಿಂದ ಅಪ್‌ಲೋಡ್ ಮಾಡಲಾಗಿದೆ. ಜಿಲ್ಲೆಗಳ ಪೈಕಿ ಲಗಾಂವ್, ಥಾಣೆ ಗ್ರಾಮಾಂತರ, ಪಾಲ್ಘರ್ ಮತ್ತು ಕೊಲ್ಹಾಪುರದಿಂದ ಇಂತಹ 30 ಕ್ಕೂ ಹೆಚ್ಚು ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ.

“ಈ ವರ್ಷ ನಾವು 25 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ. ಮಹಾರಾಷ್ಟ್ರದಾದ್ಯಂತ 50 ಜನರನ್ನು ಬಂಧಿಸಿದ್ದೇವೆ. ಮಕ್ಕಳ ಅಶ್ಲೀಲತೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ನಾವು ಇನ್ನೂ ತನಿಖೆ  ಮುಂದುವರಿಸುತ್ತೇವೆ” ಎಂದು ಮಹಾರಾಷ್ಟ್ರ ಸೈಬರ್ ವಿಭಾಗದ ಅಧೀಕ್ಷಕ ಸಂಜಯ್ ಸಿಂತ್ರೆ ಹೇಳಿದ್ದಾರೆ.

ನಾಗ್ಪುರ ನಗರದಲ್ಲೇ 302 ದೂರುಗಳು ದಾಖಲಾಗಿದ್ದು, 38 ಎಫ್ಐಆರ್‌ಗಳನ್ನು ನೋಂದಾಯಿಸಿ, 14 ಜನರನ್ನು ಬಂಧಿಸಿಸಲಾಗಿದೆ. ಮುಂಬೈ ಪೋಲಿಸರು 4,496 ದೂರುಗಳನ್ನು ಸ್ವೀಕರಿಸಿದ್ದಾರೆ . ಆದರೆ, ಕೇವಲ 11 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಮೂವರನ್ನು ಬಂಧಿಸಿಸಲಾಗಿದೆ. ಇತ್ತ ಪುಣೆ ಪೊಲೀಸರು 16 ಎಫ್‌ಐಆರ್ ದಾಖಲಿಸಿದ್ದು, ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.


ಇದನ್ನೂ ಓದಿ: ಅಡುಗೆಯವನಿಂದ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...