Homeಮುಖಪುಟಮಹಾರಾಷ್ಟ್ರ: ಮಕ್ಕಳ ಅಶ್ಲೀಲ ಚಿತ್ರ ತಯಾರಿಸಿ, ಹಂಚಿಕೆ ಮಾಡಿದ್ದ 105 ಮಂದಿ ಬಂಧನ, 213 ಪ್ರಕರಣ

ಮಹಾರಾಷ್ಟ್ರ: ಮಕ್ಕಳ ಅಶ್ಲೀಲ ಚಿತ್ರ ತಯಾರಿಸಿ, ಹಂಚಿಕೆ ಮಾಡಿದ್ದ 105 ಮಂದಿ ಬಂಧನ, 213 ಪ್ರಕರಣ

- Advertisement -
- Advertisement -

ಮಕ್ಕಳ ಅಶ್ಲೀಲ, ಲೈಂಗಿಕ ಕಿರುಕುಳದ ವಿಡಿಯೊಗಳು ಮತ್ತು ಅಪ್ರಾಪ್ತ ವಯಸ್ಕರ ಛಾಯಾಚಿತ್ರಗಳನ್ನು ತಯಾರಿಸಿ, ಅಂತರ್ಜಾಲದಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ಮಹಾರಾಷ್ಟ್ರದಾದ್ಯಂತ 105 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆಪರೇಷನ್ ಬ್ಲ್ಯಾಕ್‌ಫೇಸ್’ ಅಂಗವಾಗಿ 2019 ರ ಡಿಸೆಂಬರ್‌ನಿಂದ ರಾಜ್ಯ ಸೈಬರ್ ಇಲಾಖೆಯು ಸ್ಥಳೀಯ ಪೊಲೀಸ್ ಠಾಣೆಗಳ ಸಮನ್ವಯದೊಂದಿಗೆ 213 ಎಫ್‌ಐಆರ್‌ಗಳನ್ನು ನೋಂದಾಯಿಸಿದ್ದು, 105 ಜನರನ್ನು ಬಂಧಿಸಿದೆ.

ಆರೋಪಿಗಳ ವಿರುದ್ಧ ಫೋಸ್ಕೋ ( Protection of Children from Sexual Offences Act) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಪ್ರಕರಣ ನೋಂದಾಯಿಸಲಾಗಿದೆ.

ಅಮೆರಿಕಾದ ’ಕಾಣೆಯಾದ ಮತ್ತು ಶೋಷಿತ ಮಕ್ಕಳ ರಾಷ್ಟ್ರೀಯ ಕೇಂದ್ರ’ವು, ಭಾರತದ ವಿವಿಧ ಭಾಗಗಳಿಂದ ಮಕ್ಕಳ ಅಶ್ಲೀಲ ಚಿತ್ರಗಳು, ವಿಡಿಯೋಗಳನ್ನು ಅಪ್‌ಲೋಡ್ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋಗೆ (NCRB) ತಿಳಿಸಿದ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿತ್ತು. ಎನ್‌ಸಿಆರ್‌ಬಿ ಮಾಹಿತಿಯನ್ನು ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ರವಾನಿಸಿದೆ.

ಇದನ್ನೂ ಓದಿ: ದೆಹಲಿ: ಅಶ್ಲೀಲ ಚಿತ್ರ, ವಿಡಿಯೊಗಳನ್ನು ಕಳಿಸುವಂತೆ ಒತ್ತಡ ಹೇರುತ್ತಿದ್ದ ಯುವಕನ ಬಂಧನ

2019 ರಿಂದ ಮಹಾರಾಷ್ಟ್ರದಿಂದ 15,255 ಮಕ್ಕಳ ಕಿರುಕುಳ ವಿಡಿಯೊಗಳು ಮತ್ತು ಫೋಟೋಗಳನ್ನು ವೆಬ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ. 15,255 ರಲ್ಲಿ 11,118 (ಶೇಕಡಾ 73) ಅನ್ನು ರಾಜ್ಯದ ಪ್ರಮುಖ ನಗರಗಳಿಂದ ಅಪ್‌ಲೋಡ್ ಮಾಡಲಾಗಿದೆ.

ಮುಂಬೈನಿಂದ 4,496 ಮತ್ತು ಪುಣೆಯಿಂದ 5,699 ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ಉಳಿದವುಗಳನ್ನು ಥಾಣೆ, ನಾಗಪುರ, ಹೊಸ ಮುಂಬೈ, ಪಿಂಪ್ರಿ ಚಿಂಚ್‌ವಾಡ್, ನಾಸಿಕ್, ಔರಂಗಾಬಾದ್ ಮತ್ತು ಸೊಲ್ಲಾಪುರದಿಂದ ಅಪ್‌ಲೋಡ್ ಮಾಡಲಾಗಿದೆ. ಜಿಲ್ಲೆಗಳ ಪೈಕಿ ಲಗಾಂವ್, ಥಾಣೆ ಗ್ರಾಮಾಂತರ, ಪಾಲ್ಘರ್ ಮತ್ತು ಕೊಲ್ಹಾಪುರದಿಂದ ಇಂತಹ 30 ಕ್ಕೂ ಹೆಚ್ಚು ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ.

“ಈ ವರ್ಷ ನಾವು 25 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ. ಮಹಾರಾಷ್ಟ್ರದಾದ್ಯಂತ 50 ಜನರನ್ನು ಬಂಧಿಸಿದ್ದೇವೆ. ಮಕ್ಕಳ ಅಶ್ಲೀಲತೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ನಾವು ಇನ್ನೂ ತನಿಖೆ  ಮುಂದುವರಿಸುತ್ತೇವೆ” ಎಂದು ಮಹಾರಾಷ್ಟ್ರ ಸೈಬರ್ ವಿಭಾಗದ ಅಧೀಕ್ಷಕ ಸಂಜಯ್ ಸಿಂತ್ರೆ ಹೇಳಿದ್ದಾರೆ.

ನಾಗ್ಪುರ ನಗರದಲ್ಲೇ 302 ದೂರುಗಳು ದಾಖಲಾಗಿದ್ದು, 38 ಎಫ್ಐಆರ್‌ಗಳನ್ನು ನೋಂದಾಯಿಸಿ, 14 ಜನರನ್ನು ಬಂಧಿಸಿಸಲಾಗಿದೆ. ಮುಂಬೈ ಪೋಲಿಸರು 4,496 ದೂರುಗಳನ್ನು ಸ್ವೀಕರಿಸಿದ್ದಾರೆ . ಆದರೆ, ಕೇವಲ 11 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಮೂವರನ್ನು ಬಂಧಿಸಿಸಲಾಗಿದೆ. ಇತ್ತ ಪುಣೆ ಪೊಲೀಸರು 16 ಎಫ್‌ಐಆರ್ ದಾಖಲಿಸಿದ್ದು, ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.


ಇದನ್ನೂ ಓದಿ: ಅಡುಗೆಯವನಿಂದ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...