Homeಮುಖಪುಟಮಹಾರಾಷ್ಟ್ರ: ಮಕ್ಕಳ ಅಶ್ಲೀಲ ಚಿತ್ರ ತಯಾರಿಸಿ, ಹಂಚಿಕೆ ಮಾಡಿದ್ದ 105 ಮಂದಿ ಬಂಧನ, 213 ಪ್ರಕರಣ

ಮಹಾರಾಷ್ಟ್ರ: ಮಕ್ಕಳ ಅಶ್ಲೀಲ ಚಿತ್ರ ತಯಾರಿಸಿ, ಹಂಚಿಕೆ ಮಾಡಿದ್ದ 105 ಮಂದಿ ಬಂಧನ, 213 ಪ್ರಕರಣ

- Advertisement -
- Advertisement -

ಮಕ್ಕಳ ಅಶ್ಲೀಲ, ಲೈಂಗಿಕ ಕಿರುಕುಳದ ವಿಡಿಯೊಗಳು ಮತ್ತು ಅಪ್ರಾಪ್ತ ವಯಸ್ಕರ ಛಾಯಾಚಿತ್ರಗಳನ್ನು ತಯಾರಿಸಿ, ಅಂತರ್ಜಾಲದಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ಮಹಾರಾಷ್ಟ್ರದಾದ್ಯಂತ 105 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆಪರೇಷನ್ ಬ್ಲ್ಯಾಕ್‌ಫೇಸ್’ ಅಂಗವಾಗಿ 2019 ರ ಡಿಸೆಂಬರ್‌ನಿಂದ ರಾಜ್ಯ ಸೈಬರ್ ಇಲಾಖೆಯು ಸ್ಥಳೀಯ ಪೊಲೀಸ್ ಠಾಣೆಗಳ ಸಮನ್ವಯದೊಂದಿಗೆ 213 ಎಫ್‌ಐಆರ್‌ಗಳನ್ನು ನೋಂದಾಯಿಸಿದ್ದು, 105 ಜನರನ್ನು ಬಂಧಿಸಿದೆ.

ಆರೋಪಿಗಳ ವಿರುದ್ಧ ಫೋಸ್ಕೋ ( Protection of Children from Sexual Offences Act) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಪ್ರಕರಣ ನೋಂದಾಯಿಸಲಾಗಿದೆ.

ಅಮೆರಿಕಾದ ’ಕಾಣೆಯಾದ ಮತ್ತು ಶೋಷಿತ ಮಕ್ಕಳ ರಾಷ್ಟ್ರೀಯ ಕೇಂದ್ರ’ವು, ಭಾರತದ ವಿವಿಧ ಭಾಗಗಳಿಂದ ಮಕ್ಕಳ ಅಶ್ಲೀಲ ಚಿತ್ರಗಳು, ವಿಡಿಯೋಗಳನ್ನು ಅಪ್‌ಲೋಡ್ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋಗೆ (NCRB) ತಿಳಿಸಿದ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿತ್ತು. ಎನ್‌ಸಿಆರ್‌ಬಿ ಮಾಹಿತಿಯನ್ನು ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ರವಾನಿಸಿದೆ.

ಇದನ್ನೂ ಓದಿ: ದೆಹಲಿ: ಅಶ್ಲೀಲ ಚಿತ್ರ, ವಿಡಿಯೊಗಳನ್ನು ಕಳಿಸುವಂತೆ ಒತ್ತಡ ಹೇರುತ್ತಿದ್ದ ಯುವಕನ ಬಂಧನ

2019 ರಿಂದ ಮಹಾರಾಷ್ಟ್ರದಿಂದ 15,255 ಮಕ್ಕಳ ಕಿರುಕುಳ ವಿಡಿಯೊಗಳು ಮತ್ತು ಫೋಟೋಗಳನ್ನು ವೆಬ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ. 15,255 ರಲ್ಲಿ 11,118 (ಶೇಕಡಾ 73) ಅನ್ನು ರಾಜ್ಯದ ಪ್ರಮುಖ ನಗರಗಳಿಂದ ಅಪ್‌ಲೋಡ್ ಮಾಡಲಾಗಿದೆ.

ಮುಂಬೈನಿಂದ 4,496 ಮತ್ತು ಪುಣೆಯಿಂದ 5,699 ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ಉಳಿದವುಗಳನ್ನು ಥಾಣೆ, ನಾಗಪುರ, ಹೊಸ ಮುಂಬೈ, ಪಿಂಪ್ರಿ ಚಿಂಚ್‌ವಾಡ್, ನಾಸಿಕ್, ಔರಂಗಾಬಾದ್ ಮತ್ತು ಸೊಲ್ಲಾಪುರದಿಂದ ಅಪ್‌ಲೋಡ್ ಮಾಡಲಾಗಿದೆ. ಜಿಲ್ಲೆಗಳ ಪೈಕಿ ಲಗಾಂವ್, ಥಾಣೆ ಗ್ರಾಮಾಂತರ, ಪಾಲ್ಘರ್ ಮತ್ತು ಕೊಲ್ಹಾಪುರದಿಂದ ಇಂತಹ 30 ಕ್ಕೂ ಹೆಚ್ಚು ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ.

“ಈ ವರ್ಷ ನಾವು 25 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ. ಮಹಾರಾಷ್ಟ್ರದಾದ್ಯಂತ 50 ಜನರನ್ನು ಬಂಧಿಸಿದ್ದೇವೆ. ಮಕ್ಕಳ ಅಶ್ಲೀಲತೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ನಾವು ಇನ್ನೂ ತನಿಖೆ  ಮುಂದುವರಿಸುತ್ತೇವೆ” ಎಂದು ಮಹಾರಾಷ್ಟ್ರ ಸೈಬರ್ ವಿಭಾಗದ ಅಧೀಕ್ಷಕ ಸಂಜಯ್ ಸಿಂತ್ರೆ ಹೇಳಿದ್ದಾರೆ.

ನಾಗ್ಪುರ ನಗರದಲ್ಲೇ 302 ದೂರುಗಳು ದಾಖಲಾಗಿದ್ದು, 38 ಎಫ್ಐಆರ್‌ಗಳನ್ನು ನೋಂದಾಯಿಸಿ, 14 ಜನರನ್ನು ಬಂಧಿಸಿಸಲಾಗಿದೆ. ಮುಂಬೈ ಪೋಲಿಸರು 4,496 ದೂರುಗಳನ್ನು ಸ್ವೀಕರಿಸಿದ್ದಾರೆ . ಆದರೆ, ಕೇವಲ 11 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಮೂವರನ್ನು ಬಂಧಿಸಿಸಲಾಗಿದೆ. ಇತ್ತ ಪುಣೆ ಪೊಲೀಸರು 16 ಎಫ್‌ಐಆರ್ ದಾಖಲಿಸಿದ್ದು, ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.


ಇದನ್ನೂ ಓದಿ: ಅಡುಗೆಯವನಿಂದ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...