Homeಚಳವಳಿದೆಹಲಿ ಚಲೋ- 22 ಹೋರಾಟ ನಿರತ ರೈತರು ಮೃತಪಟ್ಟಿದ್ದಾರೆ: ಸಂಯುಕ್ತ್ ಕಿಸಾನ್ ಮೋರ್ಚಾ

ದೆಹಲಿ ಚಲೋ- 22 ಹೋರಾಟ ನಿರತ ರೈತರು ಮೃತಪಟ್ಟಿದ್ದಾರೆ: ಸಂಯುಕ್ತ್ ಕಿಸಾನ್ ಮೋರ್ಚಾ

ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ನಿನ್ನೆ ಕೂಡಾ ವಿವಾದಿತ ಕಾನೂನನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನಿನ ವಿರುದ್ದ ಕಳೆದ 21 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಲ್ಲಿ, ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ.

ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಇಪ್ಪತ್ತು ರೈತರು ಸಾವನ್ನಪ್ಪಿದ್ದಾರೆ ಮತ್ತು ಇದಕ್ಕೆ ಕಾರಣವಾಗಿರುವ ಸರ್ಕಾರವು ಬೆಲೆ ತೆರಬೇಕಾಗುತ್ತದೆ ಎಂದು ರೈತ ಮುಖಂಡರು ಸಿಂಘೂ ಗಡಿಯಿಂದ ಘೋಷಿಸಿದ್ದಾರೆ. ಡಿಸೆಂಬರ್ 20 ಅನ್ನು ”ಶೋಕ ದಿನ” ಎಂದು ಘೋಷಿಸಲಾಗಿದೆ ಮತ್ತು “ಪ್ರತಿ ಹಳ್ಳಿಯ ಹುತಾತ್ಮರಿಗೆ ಗೌರವ ಸಲ್ಲಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ತಾಪಮಾನ ನಿನ್ನೆ 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು ಇದು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿತ್ತು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಇದುವರೆಗೂ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ.

ಇದನ್ನೂ ಓದಿ: ಅಂಬೇಡ್ಕರ್ ಚಿಂತನೆಗಳನ್ನು ತಿರುಚುವ ಕುತ್ಸಿತ ಶಕ್ತಿಗಳು ಮತ್ತು ಅವರ ಆಶಯಗಳನ್ನು ಮಣ್ಣುಗೂಡಿಸುವ ಕಾನೂನುಗಳು

ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜಾರಿಗೆ ತಂದಿರುವ ಕಾನೂನುಗಳು ಕಾರ್ಪೋರೇಟ್ ವಲಯಕ್ಕೆ ಪ್ರಯೋಜನವನ್ನು ನೀಡುತ್ತದೆ ಹೊರತು ರೈತರಿಗಲ್ಲ ಎಂದು ಪ್ರತಿಭಟನಾ ನಿರತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನವು ಸೋಮವಾರದಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದರು. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ ಎಂದಿದ್ದರು. ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ನಿನ್ನೆ ಕೂಡಾ ವಿವಾದಿತ ಕಾನೂನನ್ನು ಸಮರ್ಥಿಸಿಕೊಂಡಿದ್ದು, “ವಿಪಕ್ಷಗಳು ಹೋರಾಟ ನಿರತ ರೈತರನ್ನು ದಾರಿ ತಪ್ಪಿಸುತ್ತಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...