Homeಚಳವಳಿದೆಹಲಿ ಚಲೋ- 22 ಹೋರಾಟ ನಿರತ ರೈತರು ಮೃತಪಟ್ಟಿದ್ದಾರೆ: ಸಂಯುಕ್ತ್ ಕಿಸಾನ್ ಮೋರ್ಚಾ

ದೆಹಲಿ ಚಲೋ- 22 ಹೋರಾಟ ನಿರತ ರೈತರು ಮೃತಪಟ್ಟಿದ್ದಾರೆ: ಸಂಯುಕ್ತ್ ಕಿಸಾನ್ ಮೋರ್ಚಾ

ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ನಿನ್ನೆ ಕೂಡಾ ವಿವಾದಿತ ಕಾನೂನನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನಿನ ವಿರುದ್ದ ಕಳೆದ 21 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಲ್ಲಿ, ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ.

ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಇಪ್ಪತ್ತು ರೈತರು ಸಾವನ್ನಪ್ಪಿದ್ದಾರೆ ಮತ್ತು ಇದಕ್ಕೆ ಕಾರಣವಾಗಿರುವ ಸರ್ಕಾರವು ಬೆಲೆ ತೆರಬೇಕಾಗುತ್ತದೆ ಎಂದು ರೈತ ಮುಖಂಡರು ಸಿಂಘೂ ಗಡಿಯಿಂದ ಘೋಷಿಸಿದ್ದಾರೆ. ಡಿಸೆಂಬರ್ 20 ಅನ್ನು ”ಶೋಕ ದಿನ” ಎಂದು ಘೋಷಿಸಲಾಗಿದೆ ಮತ್ತು “ಪ್ರತಿ ಹಳ್ಳಿಯ ಹುತಾತ್ಮರಿಗೆ ಗೌರವ ಸಲ್ಲಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ತಾಪಮಾನ ನಿನ್ನೆ 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು ಇದು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿತ್ತು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಇದುವರೆಗೂ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ.

ಇದನ್ನೂ ಓದಿ: ಅಂಬೇಡ್ಕರ್ ಚಿಂತನೆಗಳನ್ನು ತಿರುಚುವ ಕುತ್ಸಿತ ಶಕ್ತಿಗಳು ಮತ್ತು ಅವರ ಆಶಯಗಳನ್ನು ಮಣ್ಣುಗೂಡಿಸುವ ಕಾನೂನುಗಳು

ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜಾರಿಗೆ ತಂದಿರುವ ಕಾನೂನುಗಳು ಕಾರ್ಪೋರೇಟ್ ವಲಯಕ್ಕೆ ಪ್ರಯೋಜನವನ್ನು ನೀಡುತ್ತದೆ ಹೊರತು ರೈತರಿಗಲ್ಲ ಎಂದು ಪ್ರತಿಭಟನಾ ನಿರತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನವು ಸೋಮವಾರದಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದರು. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ ಎಂದಿದ್ದರು. ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ನಿನ್ನೆ ಕೂಡಾ ವಿವಾದಿತ ಕಾನೂನನ್ನು ಸಮರ್ಥಿಸಿಕೊಂಡಿದ್ದು, “ವಿಪಕ್ಷಗಳು ಹೋರಾಟ ನಿರತ ರೈತರನ್ನು ದಾರಿ ತಪ್ಪಿಸುತ್ತಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...