Homeಚಳವಳಿದೆಹಲಿ ಚಲೋ- 22 ಹೋರಾಟ ನಿರತ ರೈತರು ಮೃತಪಟ್ಟಿದ್ದಾರೆ: ಸಂಯುಕ್ತ್ ಕಿಸಾನ್ ಮೋರ್ಚಾ

ದೆಹಲಿ ಚಲೋ- 22 ಹೋರಾಟ ನಿರತ ರೈತರು ಮೃತಪಟ್ಟಿದ್ದಾರೆ: ಸಂಯುಕ್ತ್ ಕಿಸಾನ್ ಮೋರ್ಚಾ

ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ನಿನ್ನೆ ಕೂಡಾ ವಿವಾದಿತ ಕಾನೂನನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನಿನ ವಿರುದ್ದ ಕಳೆದ 21 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಲ್ಲಿ, ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ.

ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಇಪ್ಪತ್ತು ರೈತರು ಸಾವನ್ನಪ್ಪಿದ್ದಾರೆ ಮತ್ತು ಇದಕ್ಕೆ ಕಾರಣವಾಗಿರುವ ಸರ್ಕಾರವು ಬೆಲೆ ತೆರಬೇಕಾಗುತ್ತದೆ ಎಂದು ರೈತ ಮುಖಂಡರು ಸಿಂಘೂ ಗಡಿಯಿಂದ ಘೋಷಿಸಿದ್ದಾರೆ. ಡಿಸೆಂಬರ್ 20 ಅನ್ನು ”ಶೋಕ ದಿನ” ಎಂದು ಘೋಷಿಸಲಾಗಿದೆ ಮತ್ತು “ಪ್ರತಿ ಹಳ್ಳಿಯ ಹುತಾತ್ಮರಿಗೆ ಗೌರವ ಸಲ್ಲಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ತಾಪಮಾನ ನಿನ್ನೆ 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು ಇದು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿತ್ತು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಇದುವರೆಗೂ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ.

ಇದನ್ನೂ ಓದಿ: ಅಂಬೇಡ್ಕರ್ ಚಿಂತನೆಗಳನ್ನು ತಿರುಚುವ ಕುತ್ಸಿತ ಶಕ್ತಿಗಳು ಮತ್ತು ಅವರ ಆಶಯಗಳನ್ನು ಮಣ್ಣುಗೂಡಿಸುವ ಕಾನೂನುಗಳು

ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜಾರಿಗೆ ತಂದಿರುವ ಕಾನೂನುಗಳು ಕಾರ್ಪೋರೇಟ್ ವಲಯಕ್ಕೆ ಪ್ರಯೋಜನವನ್ನು ನೀಡುತ್ತದೆ ಹೊರತು ರೈತರಿಗಲ್ಲ ಎಂದು ಪ್ರತಿಭಟನಾ ನಿರತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನವು ಸೋಮವಾರದಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದರು. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ ಎಂದಿದ್ದರು. ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ನಿನ್ನೆ ಕೂಡಾ ವಿವಾದಿತ ಕಾನೂನನ್ನು ಸಮರ್ಥಿಸಿಕೊಂಡಿದ್ದು, “ವಿಪಕ್ಷಗಳು ಹೋರಾಟ ನಿರತ ರೈತರನ್ನು ದಾರಿ ತಪ್ಪಿಸುತ್ತಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...