Homeಚಳವಳಿದೆಹಲಿ ಚಲೋ- 22 ಹೋರಾಟ ನಿರತ ರೈತರು ಮೃತಪಟ್ಟಿದ್ದಾರೆ: ಸಂಯುಕ್ತ್ ಕಿಸಾನ್ ಮೋರ್ಚಾ

ದೆಹಲಿ ಚಲೋ- 22 ಹೋರಾಟ ನಿರತ ರೈತರು ಮೃತಪಟ್ಟಿದ್ದಾರೆ: ಸಂಯುಕ್ತ್ ಕಿಸಾನ್ ಮೋರ್ಚಾ

ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ನಿನ್ನೆ ಕೂಡಾ ವಿವಾದಿತ ಕಾನೂನನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನಿನ ವಿರುದ್ದ ಕಳೆದ 21 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಲ್ಲಿ, ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ.

ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಇಪ್ಪತ್ತು ರೈತರು ಸಾವನ್ನಪ್ಪಿದ್ದಾರೆ ಮತ್ತು ಇದಕ್ಕೆ ಕಾರಣವಾಗಿರುವ ಸರ್ಕಾರವು ಬೆಲೆ ತೆರಬೇಕಾಗುತ್ತದೆ ಎಂದು ರೈತ ಮುಖಂಡರು ಸಿಂಘೂ ಗಡಿಯಿಂದ ಘೋಷಿಸಿದ್ದಾರೆ. ಡಿಸೆಂಬರ್ 20 ಅನ್ನು ”ಶೋಕ ದಿನ” ಎಂದು ಘೋಷಿಸಲಾಗಿದೆ ಮತ್ತು “ಪ್ರತಿ ಹಳ್ಳಿಯ ಹುತಾತ್ಮರಿಗೆ ಗೌರವ ಸಲ್ಲಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ತಾಪಮಾನ ನಿನ್ನೆ 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು ಇದು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿತ್ತು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಇದುವರೆಗೂ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ.

ಇದನ್ನೂ ಓದಿ: ಅಂಬೇಡ್ಕರ್ ಚಿಂತನೆಗಳನ್ನು ತಿರುಚುವ ಕುತ್ಸಿತ ಶಕ್ತಿಗಳು ಮತ್ತು ಅವರ ಆಶಯಗಳನ್ನು ಮಣ್ಣುಗೂಡಿಸುವ ಕಾನೂನುಗಳು

ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜಾರಿಗೆ ತಂದಿರುವ ಕಾನೂನುಗಳು ಕಾರ್ಪೋರೇಟ್ ವಲಯಕ್ಕೆ ಪ್ರಯೋಜನವನ್ನು ನೀಡುತ್ತದೆ ಹೊರತು ರೈತರಿಗಲ್ಲ ಎಂದು ಪ್ರತಿಭಟನಾ ನಿರತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನವು ಸೋಮವಾರದಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದರು. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ ಎಂದಿದ್ದರು. ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ನಿನ್ನೆ ಕೂಡಾ ವಿವಾದಿತ ಕಾನೂನನ್ನು ಸಮರ್ಥಿಸಿಕೊಂಡಿದ್ದು, “ವಿಪಕ್ಷಗಳು ಹೋರಾಟ ನಿರತ ರೈತರನ್ನು ದಾರಿ ತಪ್ಪಿಸುತ್ತಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...