Homeಮುಖಪುಟಬಿಹಾರದಲ್ಲಿ ಎನ್‌ಡಿಎಗೆ ಭಾರೀ ಹಿನ್ನಡೆ: ಪಕ್ಷದ ತೊರೆದ ಎಲ್‌ಜೆಪಿಯ 22 ನಾಯಕರು, ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ...

ಬಿಹಾರದಲ್ಲಿ ಎನ್‌ಡಿಎಗೆ ಭಾರೀ ಹಿನ್ನಡೆ: ಪಕ್ಷದ ತೊರೆದ ಎಲ್‌ಜೆಪಿಯ 22 ನಾಯಕರು, ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ

- Advertisement -
- Advertisement -

ಲೋಕಸಭೆ ಚುನಾವಣೆಯ ಹೊಸ್ತಿಲ್ಲಲ್ಲೇ ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ಟಿಕೆಟ್ ನಿರಾಕರಿಸಿದ ಹಿನ್ನೆಲೆ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದ (ರಾಮ್‌ವಿಲಾಸ್) 22 ನಾಯಕರು ರಾಜೀನಾಮೆ ನೀಡಿದ್ದಾರೆ. ಒಬ್ಬ ನಾಯಕ ಪಾಸ್ವಾನ್ ಅವರು ‘ಹಣಕ್ಕಾಗಿ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಏಕಕಾಲಕ್ಕೆ ರಾಜೀನಾಮೆ ನೀಡಿರುವ ಎಲ್‌ಜಿಪಿ ನಾಯಕರು, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಮಹಾಘಟಬಂಧನ್ ಅನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಪಾಸ್ವಾನ್ ನೇತೃತ್ವದ ಪಕ್ಷಕ್ಕೆ ರಾಜೀನಾಮೆ ನೀಡಿದವರಲ್ಲಿ ಒಬ್ಬರಾಗಿರುವ ಮಾಜಿ ಸಂಸದ ರೇಣು ಕುಶ್ವಾಹಾ ಅವರು, “ಟಿಕೆಟ್ ಹಂಚಿಕೆಯ ವಿಷಯಕ್ಕೆ ಬಂದಾಗ, ಹೊರಗಿನವರಿಗಿಂತ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದಿದ್ದಾರೆ.

“ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ಸಮರ್ಥರು ಇಲ್ಲ ಎಂದಲ್ಲವೇ? ಹಾಗಾದರೆ, ನಾವೆಲ್ಲ ದುಡಿದು ನಿಮ್ಮನ್ನು ನಾಯಕರನ್ನಾಗಿ ಮಾಡುವ ಕಾರ್ಮಿಕರಾ? ನಾವು ಕಾರ್ಮಿಕರಾಗಿ ಸೇವೆ ಸಲ್ಲಿಸಲು ಬಂದಿಲ್ಲ” ಎಂದು ಕುಶ್ವಾಹಾ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಎಲ್‌ಜಿಪಿಯಿಂದ ನಿರ್ಗಮಿಸಿದ ಮತ್ತೋರ್ವ ನಾಯಕ, ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಸತೀಶ್ ಕುಮಾರ್ ಅವರು “ಪಾಸ್ವಾನ್ ಅವರ ನಿಲುವಿನಿಂದ ಪಕ್ಷದ ಕಾರ್ಯಕರ್ತರು ‘ದಿಗ್ಭ್ರಮೆಗೊಂಡಿದ್ದಾರೆ’ ಎಂದಿದ್ದಾರೆ.

“ಚಿರಾಗ್ ಪಾಸ್ವಾನ್‌ಗೆ ನಮಸ್ಕಾರ” ಎಂದು ಹಗಲಿರುಳು ಘೋಷಣೆಗಳನ್ನು ಕೂಗುತ್ತಿದ್ದ ಮತ್ತು ಹೊಸ ಬಿಹಾರಕ್ಕಾಗಿ ಆಶಿಸಿದ ಜನರಿಗೆ ದ್ರೋಹ ಮಾಡಲಾಗಿದೆ. ಅವರ ಆಕಾಂಕ್ಷೆಗಳನ್ನು ಧ್ವಂಸ ಮಾಡಲಾಗಿದೆ. ಈಗ ದೇಶವನ್ನು ಉಳಿಸಲು, ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕಾಗಿದೆ. ನಾವು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸುತ್ತೇವೆ” ಎಂದು ಕುಮಾರ್ ಹೇಳಿದ್ದಾರೆ.

ಎಲ್‌ಜೆಪಿಯ ಕಾರ್ಯದರ್ಶಿ ರವೀಂದ್ರ ಸಿಂಗ್ ಕೂಡ ಪಕ್ಷದ ತೊರೆದಿದ್ದು, ಪಾಸ್ವಾನ್ ‘ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

“ಅವರು (ಚಿರಾಗ್ ಪಾಸ್ವಾನ್) ಜನರೊಂದಿಗೆ ಭಾವನಾತ್ಮಕ ಆಟವಾಡಿದ್ದಾರೆ. ನಮ್ಮ ಪರಿಶ್ರಮದಿಂದ ಐದು ಸೀಟು ಸಿಕ್ಕರೂ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ. ಜನತೆ ಅವರಿಗೆ ಉತ್ತರ ನೀಡಲಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

ಎನ್‌ಡಿಎ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ, ಎಲ್‌ಜೆಪಿ (ಪಾಸ್ವಾನ್) ಬಿಹಾರದ ಒಟ್ಟು 40 ಸ್ಥಾನಗಳ ಪೈಕಿ ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ವೈಶಾಲಿ, ಹಾಜಿಪುರ್, ಸಮಸ್ತಿಪುರ್, ಖಗಾರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಹಾಜಿಪುರದಿಂದ ಸ್ಪರ್ಧಿಸಿದರೆ, ಅರುಣ್ ಭಾರತಿ ಜಮುಯಿಯಿಂದ, ರಾಜೇಶ್ ವರ್ಮಾ ಖಗಾರಿಯಾದಿಂದ, ಶಾಂಭವಿ ಚೌಧರಿ ಸಮಸ್ತಿಪುರದಿಂದ ಮತ್ತು ವೀಣಾ ದೇವಿ ವೈಶಾಲಿಯಿಂದ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...