Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...