Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...