Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...