Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...