Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...