Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....