Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...