Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...