Homeಮುಖಪುಟ5 ವರ್ಷದಲ್ಲಿ 22 ಸಾವಿರ ಚುನಾವಣಾ ಬಾಂಡ್ ಬಿಡುಗಡೆ : ಎಸ್‌ಬಿಐ

5 ವರ್ಷದಲ್ಲಿ 22 ಸಾವಿರ ಚುನಾವಣಾ ಬಾಂಡ್ ಬಿಡುಗಡೆ : ಎಸ್‌ಬಿಐ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿಯನ್ನು ಒದಗಿಸಲು ಜೂನ್ 30, 2024ರವರೆಗೆ ಸಮಯವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪಿನ ಪ್ರಕಾರ, ಮಾರ್ಚ್ 6ರೊಳಗೆ ಎಸ್‌ಬಿಐ ಬಾಂಡ್‌ಗಳ ಕುರಿತ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಒದಗಿಸಬೇಕಾಗಿದೆ.

ಸಮಯ ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಸಲ್ಲಿಸಿರುವ ಅರ್ಜಿಯಲ್ಲಿ, ಏಪ್ರಿಲ್ 12,2019 ರಿಂದ ಫೆಬ್ರವರಿ 15,2024ರ ನಡುವೆ ವಿವಿಧ ಪಕ್ಷಗಳಿಗೆ ದೇಣಿಗೆ ನೀಡಲು 22,217 ಚುನಾವಣಾ ಬಾಂಡ್‌ಗಳನ್ನು ನೀಡಲಾಗಿದೆ ಎಂದು ಹೇಳಿದೆ. ಬಿಡುಗಡೆ ಮಾಡಲಾದ ಚುನಾವಣಾ ಬಾಂಡ್‌ಗಳನ್ನು ಅನುಮತಿ ನೀಡಲಾದ ಶಾಖೆಗಳು ಮುಂಬೈ ಪ್ರಧಾನ ಶಾಖೆಗೆ ಪ್ರತಿ ಹಂತದ ಕೊನೆಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿವೆ. ಎರಡು ಭಿನ್ನ ಮಾಹಿತಿ ಭಾಗಗಳು ಇರುವುದರಿಂದ ಒಟ್ಟು 44,434 ಮಾಹಿತಿ ಸೆಟ್‌ಗಳನ್ನು ಡಿಕೋಡ್ ಮಾಡಿ, ಕ್ರೋಢೀಕರಿಸಿ, ತುಲನೆ ಮಾಡಬೇಕಾಗುತ್ತದೆ ಎಂದು ಎಸ್‌ಬಿಐ ವಿವರಿಸಿದೆ.

ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೂರು ವಾರಗಳ ಕಾಲಾವಧಿಯು ಸಾಕಾಗುವುದಿಲ್ಲ ಎಂದು ಎಸ್‌ಬಿಐ ಹೇಳಿದೆ. ಚುನಾವಣಾ ಬಾಂಡ್‌ ಯೋಜನೆಯನ್ನು ‘ಅಸಂವಿಧಾನಿಕ’ ಎಂದು ರದ್ದು ಮಾಡುವಾಗ, ಸುಪ್ರೀಂ ಕೋರ್ಟ್ ಈ ಕೆಳಗಿನ ನಿರ್ದೇಶನಗಳನ್ನು ನೀಡಿತ್ತು:

  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ವಿತರಣೆ ತಕ್ಷಣ ನಿಲ್ಲಿಸಬೇಕು
  • ಎಸ್‌ಬಿಐ ಏಪ್ರಿಲ್ 12,2019ರ ನ್ಯಾಯಾಲಯದ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಪ್ರತಿ ಚುನಾವಣಾ ಬಾಂಡ್‌ನ ಖರೀದಿಯ ದಿನಾಂಕ, ಬಾಂಡ್‌ ಖರೀದಿದಾರರ ಹೆಸರು ಮತ್ತು ಖರೀದಿಸಿದ ಬಾಂಡ್‌ನ ಮುಖಬೆಲೆಯ ವಿವರ ಅದರಲ್ಲಿ ಒಳಗೊಂಡಿರಬೇಕು.
  • ಎಸ್‌ಬಿಐ ಏಪ್ರಿಲ್ 12,2019ರ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆಗಳನ್ನು ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಎಸ್‌ಬಿಐ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಪ್ರತಿಯೊಂದು ಚುನಾವಣಾ ಬಾಂಡ್‌ನ ವಿವರಗಳನ್ನು ಬಹಿರಂಗಪಡಿಸಬೇಕು. ಇದು ಎನ್‌ಕ್ಯಾಶ್‌ಮೆಂಟ್ ದಿನಾಂಕ ಮತ್ತು ಚುನಾವಣಾ ಬಾಂಡ್‌ನ ಮುಖಬೆಲೆಯನ್ನು ಒಳಗೊಂಡಿರಬೇಕು.
  • ಎಸ್‌ಬಿಐ ಮೇಲಿನ ಮಾಹಿತಿಗಳನ್ನು ಮೂರು ವಾರಗಳಲ್ಲಿ, ಅಂದರೆ ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಮಾರ್ಚ್ 13,2024 ರೊಳಗೆ ಎಸ್‌ಬಿಐನಿಂದ ಪಡೆದ ಮಾಹಿತಿಗಳನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು.
  • 15 ದಿನಗಳ ಸಿಂಧುತ್ವದ ಅವಧಿಯೊಳಗೆ ಇರುವ, ಆದರೆ ರಾಜಕೀಯ ಪಕ್ಷಗಳು ಇನ್ನೂ ಎನ್‌ಕ್ಯಾಶ್ ಮಾಡಿರದ ಚುನಾವಣಾ ಬಾಂಡ್‌ಗಳನ್ನು ರಾಜಕೀಯ ಪಕ್ಷವು ಖರೀದಿದಾರರಿಗೆ ಹಿಂತಿರುಗಿಸಬೇಕು. ಎಸ್‌ಬಿಐ ಖರೀದಿದಾರರ ಖಾತೆಗೆ ಅದರ ಮೊತ್ತವನ್ನು ಮರುಪಾವತಿ ಮಾಡಬೇಕು.
  • ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್‌ ) ಮತ್ತು ಡಾ ಜಯ ಠಾಕೂರ್ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು.

ಇದನ್ನೂ ಓದಿ : ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...