Homeಮುಖಪುಟ5 ವರ್ಷದಲ್ಲಿ 22 ಸಾವಿರ ಚುನಾವಣಾ ಬಾಂಡ್ ಬಿಡುಗಡೆ : ಎಸ್‌ಬಿಐ

5 ವರ್ಷದಲ್ಲಿ 22 ಸಾವಿರ ಚುನಾವಣಾ ಬಾಂಡ್ ಬಿಡುಗಡೆ : ಎಸ್‌ಬಿಐ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿಯನ್ನು ಒದಗಿಸಲು ಜೂನ್ 30, 2024ರವರೆಗೆ ಸಮಯವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪಿನ ಪ್ರಕಾರ, ಮಾರ್ಚ್ 6ರೊಳಗೆ ಎಸ್‌ಬಿಐ ಬಾಂಡ್‌ಗಳ ಕುರಿತ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಒದಗಿಸಬೇಕಾಗಿದೆ.

ಸಮಯ ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಸಲ್ಲಿಸಿರುವ ಅರ್ಜಿಯಲ್ಲಿ, ಏಪ್ರಿಲ್ 12,2019 ರಿಂದ ಫೆಬ್ರವರಿ 15,2024ರ ನಡುವೆ ವಿವಿಧ ಪಕ್ಷಗಳಿಗೆ ದೇಣಿಗೆ ನೀಡಲು 22,217 ಚುನಾವಣಾ ಬಾಂಡ್‌ಗಳನ್ನು ನೀಡಲಾಗಿದೆ ಎಂದು ಹೇಳಿದೆ. ಬಿಡುಗಡೆ ಮಾಡಲಾದ ಚುನಾವಣಾ ಬಾಂಡ್‌ಗಳನ್ನು ಅನುಮತಿ ನೀಡಲಾದ ಶಾಖೆಗಳು ಮುಂಬೈ ಪ್ರಧಾನ ಶಾಖೆಗೆ ಪ್ರತಿ ಹಂತದ ಕೊನೆಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿವೆ. ಎರಡು ಭಿನ್ನ ಮಾಹಿತಿ ಭಾಗಗಳು ಇರುವುದರಿಂದ ಒಟ್ಟು 44,434 ಮಾಹಿತಿ ಸೆಟ್‌ಗಳನ್ನು ಡಿಕೋಡ್ ಮಾಡಿ, ಕ್ರೋಢೀಕರಿಸಿ, ತುಲನೆ ಮಾಡಬೇಕಾಗುತ್ತದೆ ಎಂದು ಎಸ್‌ಬಿಐ ವಿವರಿಸಿದೆ.

ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೂರು ವಾರಗಳ ಕಾಲಾವಧಿಯು ಸಾಕಾಗುವುದಿಲ್ಲ ಎಂದು ಎಸ್‌ಬಿಐ ಹೇಳಿದೆ. ಚುನಾವಣಾ ಬಾಂಡ್‌ ಯೋಜನೆಯನ್ನು ‘ಅಸಂವಿಧಾನಿಕ’ ಎಂದು ರದ್ದು ಮಾಡುವಾಗ, ಸುಪ್ರೀಂ ಕೋರ್ಟ್ ಈ ಕೆಳಗಿನ ನಿರ್ದೇಶನಗಳನ್ನು ನೀಡಿತ್ತು:

  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ವಿತರಣೆ ತಕ್ಷಣ ನಿಲ್ಲಿಸಬೇಕು
  • ಎಸ್‌ಬಿಐ ಏಪ್ರಿಲ್ 12,2019ರ ನ್ಯಾಯಾಲಯದ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಪ್ರತಿ ಚುನಾವಣಾ ಬಾಂಡ್‌ನ ಖರೀದಿಯ ದಿನಾಂಕ, ಬಾಂಡ್‌ ಖರೀದಿದಾರರ ಹೆಸರು ಮತ್ತು ಖರೀದಿಸಿದ ಬಾಂಡ್‌ನ ಮುಖಬೆಲೆಯ ವಿವರ ಅದರಲ್ಲಿ ಒಳಗೊಂಡಿರಬೇಕು.
  • ಎಸ್‌ಬಿಐ ಏಪ್ರಿಲ್ 12,2019ರ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆಗಳನ್ನು ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಎಸ್‌ಬಿಐ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಪ್ರತಿಯೊಂದು ಚುನಾವಣಾ ಬಾಂಡ್‌ನ ವಿವರಗಳನ್ನು ಬಹಿರಂಗಪಡಿಸಬೇಕು. ಇದು ಎನ್‌ಕ್ಯಾಶ್‌ಮೆಂಟ್ ದಿನಾಂಕ ಮತ್ತು ಚುನಾವಣಾ ಬಾಂಡ್‌ನ ಮುಖಬೆಲೆಯನ್ನು ಒಳಗೊಂಡಿರಬೇಕು.
  • ಎಸ್‌ಬಿಐ ಮೇಲಿನ ಮಾಹಿತಿಗಳನ್ನು ಮೂರು ವಾರಗಳಲ್ಲಿ, ಅಂದರೆ ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಮಾರ್ಚ್ 13,2024 ರೊಳಗೆ ಎಸ್‌ಬಿಐನಿಂದ ಪಡೆದ ಮಾಹಿತಿಗಳನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು.
  • 15 ದಿನಗಳ ಸಿಂಧುತ್ವದ ಅವಧಿಯೊಳಗೆ ಇರುವ, ಆದರೆ ರಾಜಕೀಯ ಪಕ್ಷಗಳು ಇನ್ನೂ ಎನ್‌ಕ್ಯಾಶ್ ಮಾಡಿರದ ಚುನಾವಣಾ ಬಾಂಡ್‌ಗಳನ್ನು ರಾಜಕೀಯ ಪಕ್ಷವು ಖರೀದಿದಾರರಿಗೆ ಹಿಂತಿರುಗಿಸಬೇಕು. ಎಸ್‌ಬಿಐ ಖರೀದಿದಾರರ ಖಾತೆಗೆ ಅದರ ಮೊತ್ತವನ್ನು ಮರುಪಾವತಿ ಮಾಡಬೇಕು.
  • ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್‌ ) ಮತ್ತು ಡಾ ಜಯ ಠಾಕೂರ್ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು.

ಇದನ್ನೂ ಓದಿ : ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...