Homeಮುಖಪುಟಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

ಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

- Advertisement -
- Advertisement -

2002ರ ಗೋಧ್ರಾ ನಂತರದ ಗಲಭೆಯಲ್ಲಿ 69 ಜನರ ಹತ್ಯೆ ಮೂಲಕ ಘೋರ ಗಲಭೆಗೆ ಸಾಕ್ಷಿಯಾಗಿದ್ದ  ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಇಪ್ಪತ್ತೆರಡು ವರ್ಷಗಳ ನಂತರ, ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಉಳಿದಿರುವ ಏಕೈಕ ಕುಟುಂಬ ವಿವಾಹಪೂರ್ವ ‘ಹಲ್ದಿ’ (ಹಳದಿ ಶಾಸ್ತ್ರ) ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮಕ್ಕೆ ಸ್ಥಳೀಯವಾಗಿ ವಾಸಿಸುತ್ತಿದ್ದ ಎಲ್ಲಾ ಸಮುದಾಯದ ಜನರಿಗೆ ಆಹ್ವಾನವನ್ನು ನೀಡಲಾಗಿದೆ.

ಗುಲ್ಬರ್ಗ್ ಸೊಸೈಟಿ ಗಲಭೆಯಲ್ಲಿ ಉಳಿದುಕೊಂಡಿರುವ ಏಕೈಕ ಕುಟಂಬ ಮನ್ಸೂರಿ ಅವರದ್ದು. ಅವರು ತಮ್ಮ 18 ವರ್ಷದ ಮಗಳು ಮಿಸ್ಬಾಳ ವಿವಾಹದ ಪೂರ್ವ ಸಮಾರಂಭವಾದ ಹಲ್ದಿಯನ್ನು ಆಚರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ 2002ರ ಗಲಭೆಯಿಂದ ನಗರದ ವಿವಿಧೆಡೆ ಚದುರಿದ ಸಮಾಜದ ಬೆರಳೆಣಿಕೆಯಷ್ಟು ಜನರು  ಪಾಲ್ಗೊಂಡಿದ್ದರು.

ನಾನು ಎಲ್ಲರನ್ನು ಆಹ್ವಾನಿಸಿದ್ದೆ, ಹಿಂದೆ ಗುಲ್ಬರ್ಗ್‌ ಸೊಸೈಟಿಯಲ್ಲಿ ನೆರೆಹೊರೆಯವರಲ್ಲಿ ನಾಲ್ಕರಿಂದ ಐದು ಮಂದಿ ಮಾತ್ರ ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ರಫೀಕ್ ಮನ್ಸುರಿ ಅವರು ತಿಳಿಸಿದ್ದಾರೆ. ಹಿಂದೂ ಸಮುದಾಯಕ್ಕೆ ಸೇರಿದ ಹಲವರು ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.

ಗುಲ್ಬರ್ಗ್‌ ಸೊಸೈಟಿಯಲ್ಲಿ ಹಿಂಸಾಚಾರ ನಡೆದಾಗ ರಫೀಕ್ ಅವರಿಗೆ 30 ವರ್ಷ ವಯಸ್ಸಾಗಿತ್ತು. ಆ ಹಿಂಸಾಚಾರದಲ್ಲಿ ರಫೀಕ್ ಅವರು ಪತ್ನಿ ಮತ್ತು ಮಗನನ್ನು ಕಳೆದುಕೊಂಡಿದ್ದರು, ನಂತರ ಅವರು ಮಧ್ಯಪ್ರದೇಶದಲ್ಲಿ ತಸ್ಲೀಂ ಎನ್ನುವವರನ್ನು ಮದುವೆಯಾದರು. ಹಿಂಸಾಚಾರ ನಡೆದ ನಂತರದಲ್ಲಿ ಸೊಸೈಟಿಯಲ್ಲಿ ಇಂತಹ ಸಂಭ್ರಮದ ಕಾರ್ಯಕ್ರಮ ನಡೆದಿರುವುದು ಇದೇ ಮೊದಲು ಎಂದು ರಫೀಕ್‌ ಹೇಳಿದ್ದಾರೆ.

ನಾನು ಇದೀಗ ಬರ್ವಾನಿಯಲ್ಲಿದ್ದೇನೆ ಆದರೆ ಅಹಮದಾಬಾದ್‌ನಲ್ಲಿ ಸೋಮವಾರದ ಆಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಲಭೆಯ ನಂತರ ಸಮಾಜವು ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ, ಎಲ್ಲರೂ ಸಂತೋಷಪಟ್ಟಿದ್ದಾರೆ ಎಂದು ಮನ್ಸೂರಿ ಹೇಳಿದ್ದಾರೆ.

ಗಲಭೆಯಲ್ಲಿ ಮನ್ಸೂರಿಯ ತಂದೆ ಕಸಮ್ ತನ್ನ 6 ಮಕ್ಕಳು ಸೇರಿದಂತೆ ಈ ಕುಟುಂಬದ 19 ಸದಸ್ಯರನ್ನು ಕಳೆದುಕೊಂಡಿದ್ದಾರೆ. ರಫೀಕ್ ತನ್ನ ಹೆಂಡತಿ ಮತ್ತು ಒಬ್ಬ ಮಗನನ್ನು ಕಳೆದುಕೊಂಡಿದ್ದರು.

ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ 59 ಕರಸೇವಕರು ಪ್ರಯಾಣಿಸುತ್ತಿದ್ದ ರೈಲಿಗೆ ಗೋಧ್ರಾ ರೈಲು ನಿಲ್ದಾಣದಲ್ಲಿ ಬೆಂಕಿ ಹಚ್ಚಿದ ಬಳಿಕ ಅಹಮದಾಬಾದ್ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ದಂಗೆಗಳು ಭುಗಿಲೆದ್ದವು. ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಕೋಮು ಘರ್ಷಣೆಯು ಅತ್ಯಂತ ಭೀಕರವಾಗಿದ್ದು, ಮಾಜಿ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಸೇರಿದಂತೆ 69 ಜನರನ್ನು ಗುಂಪೊಂದು ಜೀವಂತವಾಗಿ ಸುಟ್ಟುಹಾಕಿತ್ತು. ಪ್ರಕರಣಕ್ಕೆ ಸಂಬಂಧಿಸಿ 2016ರಲ್ಲಿ ವಿಶೇಷ ವಿಚಾರಣಾ ನ್ಯಾಯಾಲಯವು 11 ಮಂದಿಗೆ ಹತ್ಯೆಗೆ ಸಂಬಂಧಿಸಿ ಶಿಕ್ಷೆ ವಿಧಿಸಿತ್ತು.

ಇದನ್ನು ಓದಿ:  ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡುವಂತೆ ರಷ್ಯಾದಿಂದ ಬಲವಂತ: ಭಾರತೀಯರಿಂದ ವಿಡಿಯೋ ರಿಲೀಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...