Homeಮುಖಪುಟಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

ಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

- Advertisement -
- Advertisement -

2002ರ ಗೋಧ್ರಾ ನಂತರದ ಗಲಭೆಯಲ್ಲಿ 69 ಜನರ ಹತ್ಯೆ ಮೂಲಕ ಘೋರ ಗಲಭೆಗೆ ಸಾಕ್ಷಿಯಾಗಿದ್ದ  ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಇಪ್ಪತ್ತೆರಡು ವರ್ಷಗಳ ನಂತರ, ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಉಳಿದಿರುವ ಏಕೈಕ ಕುಟುಂಬ ವಿವಾಹಪೂರ್ವ ‘ಹಲ್ದಿ’ (ಹಳದಿ ಶಾಸ್ತ್ರ) ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮಕ್ಕೆ ಸ್ಥಳೀಯವಾಗಿ ವಾಸಿಸುತ್ತಿದ್ದ ಎಲ್ಲಾ ಸಮುದಾಯದ ಜನರಿಗೆ ಆಹ್ವಾನವನ್ನು ನೀಡಲಾಗಿದೆ.

ಗುಲ್ಬರ್ಗ್ ಸೊಸೈಟಿ ಗಲಭೆಯಲ್ಲಿ ಉಳಿದುಕೊಂಡಿರುವ ಏಕೈಕ ಕುಟಂಬ ಮನ್ಸೂರಿ ಅವರದ್ದು. ಅವರು ತಮ್ಮ 18 ವರ್ಷದ ಮಗಳು ಮಿಸ್ಬಾಳ ವಿವಾಹದ ಪೂರ್ವ ಸಮಾರಂಭವಾದ ಹಲ್ದಿಯನ್ನು ಆಚರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ 2002ರ ಗಲಭೆಯಿಂದ ನಗರದ ವಿವಿಧೆಡೆ ಚದುರಿದ ಸಮಾಜದ ಬೆರಳೆಣಿಕೆಯಷ್ಟು ಜನರು  ಪಾಲ್ಗೊಂಡಿದ್ದರು.

ನಾನು ಎಲ್ಲರನ್ನು ಆಹ್ವಾನಿಸಿದ್ದೆ, ಹಿಂದೆ ಗುಲ್ಬರ್ಗ್‌ ಸೊಸೈಟಿಯಲ್ಲಿ ನೆರೆಹೊರೆಯವರಲ್ಲಿ ನಾಲ್ಕರಿಂದ ಐದು ಮಂದಿ ಮಾತ್ರ ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ರಫೀಕ್ ಮನ್ಸುರಿ ಅವರು ತಿಳಿಸಿದ್ದಾರೆ. ಹಿಂದೂ ಸಮುದಾಯಕ್ಕೆ ಸೇರಿದ ಹಲವರು ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.

ಗುಲ್ಬರ್ಗ್‌ ಸೊಸೈಟಿಯಲ್ಲಿ ಹಿಂಸಾಚಾರ ನಡೆದಾಗ ರಫೀಕ್ ಅವರಿಗೆ 30 ವರ್ಷ ವಯಸ್ಸಾಗಿತ್ತು. ಆ ಹಿಂಸಾಚಾರದಲ್ಲಿ ರಫೀಕ್ ಅವರು ಪತ್ನಿ ಮತ್ತು ಮಗನನ್ನು ಕಳೆದುಕೊಂಡಿದ್ದರು, ನಂತರ ಅವರು ಮಧ್ಯಪ್ರದೇಶದಲ್ಲಿ ತಸ್ಲೀಂ ಎನ್ನುವವರನ್ನು ಮದುವೆಯಾದರು. ಹಿಂಸಾಚಾರ ನಡೆದ ನಂತರದಲ್ಲಿ ಸೊಸೈಟಿಯಲ್ಲಿ ಇಂತಹ ಸಂಭ್ರಮದ ಕಾರ್ಯಕ್ರಮ ನಡೆದಿರುವುದು ಇದೇ ಮೊದಲು ಎಂದು ರಫೀಕ್‌ ಹೇಳಿದ್ದಾರೆ.

ನಾನು ಇದೀಗ ಬರ್ವಾನಿಯಲ್ಲಿದ್ದೇನೆ ಆದರೆ ಅಹಮದಾಬಾದ್‌ನಲ್ಲಿ ಸೋಮವಾರದ ಆಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಲಭೆಯ ನಂತರ ಸಮಾಜವು ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ, ಎಲ್ಲರೂ ಸಂತೋಷಪಟ್ಟಿದ್ದಾರೆ ಎಂದು ಮನ್ಸೂರಿ ಹೇಳಿದ್ದಾರೆ.

ಗಲಭೆಯಲ್ಲಿ ಮನ್ಸೂರಿಯ ತಂದೆ ಕಸಮ್ ತನ್ನ 6 ಮಕ್ಕಳು ಸೇರಿದಂತೆ ಈ ಕುಟುಂಬದ 19 ಸದಸ್ಯರನ್ನು ಕಳೆದುಕೊಂಡಿದ್ದಾರೆ. ರಫೀಕ್ ತನ್ನ ಹೆಂಡತಿ ಮತ್ತು ಒಬ್ಬ ಮಗನನ್ನು ಕಳೆದುಕೊಂಡಿದ್ದರು.

ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ 59 ಕರಸೇವಕರು ಪ್ರಯಾಣಿಸುತ್ತಿದ್ದ ರೈಲಿಗೆ ಗೋಧ್ರಾ ರೈಲು ನಿಲ್ದಾಣದಲ್ಲಿ ಬೆಂಕಿ ಹಚ್ಚಿದ ಬಳಿಕ ಅಹಮದಾಬಾದ್ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ದಂಗೆಗಳು ಭುಗಿಲೆದ್ದವು. ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಕೋಮು ಘರ್ಷಣೆಯು ಅತ್ಯಂತ ಭೀಕರವಾಗಿದ್ದು, ಮಾಜಿ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಸೇರಿದಂತೆ 69 ಜನರನ್ನು ಗುಂಪೊಂದು ಜೀವಂತವಾಗಿ ಸುಟ್ಟುಹಾಕಿತ್ತು. ಪ್ರಕರಣಕ್ಕೆ ಸಂಬಂಧಿಸಿ 2016ರಲ್ಲಿ ವಿಶೇಷ ವಿಚಾರಣಾ ನ್ಯಾಯಾಲಯವು 11 ಮಂದಿಗೆ ಹತ್ಯೆಗೆ ಸಂಬಂಧಿಸಿ ಶಿಕ್ಷೆ ವಿಧಿಸಿತ್ತು.

ಇದನ್ನು ಓದಿ:  ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡುವಂತೆ ರಷ್ಯಾದಿಂದ ಬಲವಂತ: ಭಾರತೀಯರಿಂದ ವಿಡಿಯೋ ರಿಲೀಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...