Homeಮುಖಪುಟಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

ಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

- Advertisement -
- Advertisement -

2002ರ ಗೋಧ್ರಾ ನಂತರದ ಗಲಭೆಯಲ್ಲಿ 69 ಜನರ ಹತ್ಯೆ ಮೂಲಕ ಘೋರ ಗಲಭೆಗೆ ಸಾಕ್ಷಿಯಾಗಿದ್ದ  ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಇಪ್ಪತ್ತೆರಡು ವರ್ಷಗಳ ನಂತರ, ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಉಳಿದಿರುವ ಏಕೈಕ ಕುಟುಂಬ ವಿವಾಹಪೂರ್ವ ‘ಹಲ್ದಿ’ (ಹಳದಿ ಶಾಸ್ತ್ರ) ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮಕ್ಕೆ ಸ್ಥಳೀಯವಾಗಿ ವಾಸಿಸುತ್ತಿದ್ದ ಎಲ್ಲಾ ಸಮುದಾಯದ ಜನರಿಗೆ ಆಹ್ವಾನವನ್ನು ನೀಡಲಾಗಿದೆ.

ಗುಲ್ಬರ್ಗ್ ಸೊಸೈಟಿ ಗಲಭೆಯಲ್ಲಿ ಉಳಿದುಕೊಂಡಿರುವ ಏಕೈಕ ಕುಟಂಬ ಮನ್ಸೂರಿ ಅವರದ್ದು. ಅವರು ತಮ್ಮ 18 ವರ್ಷದ ಮಗಳು ಮಿಸ್ಬಾಳ ವಿವಾಹದ ಪೂರ್ವ ಸಮಾರಂಭವಾದ ಹಲ್ದಿಯನ್ನು ಆಚರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ 2002ರ ಗಲಭೆಯಿಂದ ನಗರದ ವಿವಿಧೆಡೆ ಚದುರಿದ ಸಮಾಜದ ಬೆರಳೆಣಿಕೆಯಷ್ಟು ಜನರು  ಪಾಲ್ಗೊಂಡಿದ್ದರು.

ನಾನು ಎಲ್ಲರನ್ನು ಆಹ್ವಾನಿಸಿದ್ದೆ, ಹಿಂದೆ ಗುಲ್ಬರ್ಗ್‌ ಸೊಸೈಟಿಯಲ್ಲಿ ನೆರೆಹೊರೆಯವರಲ್ಲಿ ನಾಲ್ಕರಿಂದ ಐದು ಮಂದಿ ಮಾತ್ರ ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ರಫೀಕ್ ಮನ್ಸುರಿ ಅವರು ತಿಳಿಸಿದ್ದಾರೆ. ಹಿಂದೂ ಸಮುದಾಯಕ್ಕೆ ಸೇರಿದ ಹಲವರು ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.

ಗುಲ್ಬರ್ಗ್‌ ಸೊಸೈಟಿಯಲ್ಲಿ ಹಿಂಸಾಚಾರ ನಡೆದಾಗ ರಫೀಕ್ ಅವರಿಗೆ 30 ವರ್ಷ ವಯಸ್ಸಾಗಿತ್ತು. ಆ ಹಿಂಸಾಚಾರದಲ್ಲಿ ರಫೀಕ್ ಅವರು ಪತ್ನಿ ಮತ್ತು ಮಗನನ್ನು ಕಳೆದುಕೊಂಡಿದ್ದರು, ನಂತರ ಅವರು ಮಧ್ಯಪ್ರದೇಶದಲ್ಲಿ ತಸ್ಲೀಂ ಎನ್ನುವವರನ್ನು ಮದುವೆಯಾದರು. ಹಿಂಸಾಚಾರ ನಡೆದ ನಂತರದಲ್ಲಿ ಸೊಸೈಟಿಯಲ್ಲಿ ಇಂತಹ ಸಂಭ್ರಮದ ಕಾರ್ಯಕ್ರಮ ನಡೆದಿರುವುದು ಇದೇ ಮೊದಲು ಎಂದು ರಫೀಕ್‌ ಹೇಳಿದ್ದಾರೆ.

ನಾನು ಇದೀಗ ಬರ್ವಾನಿಯಲ್ಲಿದ್ದೇನೆ ಆದರೆ ಅಹಮದಾಬಾದ್‌ನಲ್ಲಿ ಸೋಮವಾರದ ಆಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಲಭೆಯ ನಂತರ ಸಮಾಜವು ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ, ಎಲ್ಲರೂ ಸಂತೋಷಪಟ್ಟಿದ್ದಾರೆ ಎಂದು ಮನ್ಸೂರಿ ಹೇಳಿದ್ದಾರೆ.

ಗಲಭೆಯಲ್ಲಿ ಮನ್ಸೂರಿಯ ತಂದೆ ಕಸಮ್ ತನ್ನ 6 ಮಕ್ಕಳು ಸೇರಿದಂತೆ ಈ ಕುಟುಂಬದ 19 ಸದಸ್ಯರನ್ನು ಕಳೆದುಕೊಂಡಿದ್ದಾರೆ. ರಫೀಕ್ ತನ್ನ ಹೆಂಡತಿ ಮತ್ತು ಒಬ್ಬ ಮಗನನ್ನು ಕಳೆದುಕೊಂಡಿದ್ದರು.

ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ 59 ಕರಸೇವಕರು ಪ್ರಯಾಣಿಸುತ್ತಿದ್ದ ರೈಲಿಗೆ ಗೋಧ್ರಾ ರೈಲು ನಿಲ್ದಾಣದಲ್ಲಿ ಬೆಂಕಿ ಹಚ್ಚಿದ ಬಳಿಕ ಅಹಮದಾಬಾದ್ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ದಂಗೆಗಳು ಭುಗಿಲೆದ್ದವು. ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಕೋಮು ಘರ್ಷಣೆಯು ಅತ್ಯಂತ ಭೀಕರವಾಗಿದ್ದು, ಮಾಜಿ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಸೇರಿದಂತೆ 69 ಜನರನ್ನು ಗುಂಪೊಂದು ಜೀವಂತವಾಗಿ ಸುಟ್ಟುಹಾಕಿತ್ತು. ಪ್ರಕರಣಕ್ಕೆ ಸಂಬಂಧಿಸಿ 2016ರಲ್ಲಿ ವಿಶೇಷ ವಿಚಾರಣಾ ನ್ಯಾಯಾಲಯವು 11 ಮಂದಿಗೆ ಹತ್ಯೆಗೆ ಸಂಬಂಧಿಸಿ ಶಿಕ್ಷೆ ವಿಧಿಸಿತ್ತು.

ಇದನ್ನು ಓದಿ:  ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡುವಂತೆ ರಷ್ಯಾದಿಂದ ಬಲವಂತ: ಭಾರತೀಯರಿಂದ ವಿಡಿಯೋ ರಿಲೀಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...