Homeಮುಖಪುಟಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

ಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

- Advertisement -
- Advertisement -

2002ರ ಗೋಧ್ರಾ ನಂತರದ ಗಲಭೆಯಲ್ಲಿ 69 ಜನರ ಹತ್ಯೆ ಮೂಲಕ ಘೋರ ಗಲಭೆಗೆ ಸಾಕ್ಷಿಯಾಗಿದ್ದ  ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಇಪ್ಪತ್ತೆರಡು ವರ್ಷಗಳ ನಂತರ, ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಉಳಿದಿರುವ ಏಕೈಕ ಕುಟುಂಬ ವಿವಾಹಪೂರ್ವ ‘ಹಲ್ದಿ’ (ಹಳದಿ ಶಾಸ್ತ್ರ) ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮಕ್ಕೆ ಸ್ಥಳೀಯವಾಗಿ ವಾಸಿಸುತ್ತಿದ್ದ ಎಲ್ಲಾ ಸಮುದಾಯದ ಜನರಿಗೆ ಆಹ್ವಾನವನ್ನು ನೀಡಲಾಗಿದೆ.

ಗುಲ್ಬರ್ಗ್ ಸೊಸೈಟಿ ಗಲಭೆಯಲ್ಲಿ ಉಳಿದುಕೊಂಡಿರುವ ಏಕೈಕ ಕುಟಂಬ ಮನ್ಸೂರಿ ಅವರದ್ದು. ಅವರು ತಮ್ಮ 18 ವರ್ಷದ ಮಗಳು ಮಿಸ್ಬಾಳ ವಿವಾಹದ ಪೂರ್ವ ಸಮಾರಂಭವಾದ ಹಲ್ದಿಯನ್ನು ಆಚರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ 2002ರ ಗಲಭೆಯಿಂದ ನಗರದ ವಿವಿಧೆಡೆ ಚದುರಿದ ಸಮಾಜದ ಬೆರಳೆಣಿಕೆಯಷ್ಟು ಜನರು  ಪಾಲ್ಗೊಂಡಿದ್ದರು.

ನಾನು ಎಲ್ಲರನ್ನು ಆಹ್ವಾನಿಸಿದ್ದೆ, ಹಿಂದೆ ಗುಲ್ಬರ್ಗ್‌ ಸೊಸೈಟಿಯಲ್ಲಿ ನೆರೆಹೊರೆಯವರಲ್ಲಿ ನಾಲ್ಕರಿಂದ ಐದು ಮಂದಿ ಮಾತ್ರ ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ರಫೀಕ್ ಮನ್ಸುರಿ ಅವರು ತಿಳಿಸಿದ್ದಾರೆ. ಹಿಂದೂ ಸಮುದಾಯಕ್ಕೆ ಸೇರಿದ ಹಲವರು ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.

ಗುಲ್ಬರ್ಗ್‌ ಸೊಸೈಟಿಯಲ್ಲಿ ಹಿಂಸಾಚಾರ ನಡೆದಾಗ ರಫೀಕ್ ಅವರಿಗೆ 30 ವರ್ಷ ವಯಸ್ಸಾಗಿತ್ತು. ಆ ಹಿಂಸಾಚಾರದಲ್ಲಿ ರಫೀಕ್ ಅವರು ಪತ್ನಿ ಮತ್ತು ಮಗನನ್ನು ಕಳೆದುಕೊಂಡಿದ್ದರು, ನಂತರ ಅವರು ಮಧ್ಯಪ್ರದೇಶದಲ್ಲಿ ತಸ್ಲೀಂ ಎನ್ನುವವರನ್ನು ಮದುವೆಯಾದರು. ಹಿಂಸಾಚಾರ ನಡೆದ ನಂತರದಲ್ಲಿ ಸೊಸೈಟಿಯಲ್ಲಿ ಇಂತಹ ಸಂಭ್ರಮದ ಕಾರ್ಯಕ್ರಮ ನಡೆದಿರುವುದು ಇದೇ ಮೊದಲು ಎಂದು ರಫೀಕ್‌ ಹೇಳಿದ್ದಾರೆ.

ನಾನು ಇದೀಗ ಬರ್ವಾನಿಯಲ್ಲಿದ್ದೇನೆ ಆದರೆ ಅಹಮದಾಬಾದ್‌ನಲ್ಲಿ ಸೋಮವಾರದ ಆಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಲಭೆಯ ನಂತರ ಸಮಾಜವು ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ, ಎಲ್ಲರೂ ಸಂತೋಷಪಟ್ಟಿದ್ದಾರೆ ಎಂದು ಮನ್ಸೂರಿ ಹೇಳಿದ್ದಾರೆ.

ಗಲಭೆಯಲ್ಲಿ ಮನ್ಸೂರಿಯ ತಂದೆ ಕಸಮ್ ತನ್ನ 6 ಮಕ್ಕಳು ಸೇರಿದಂತೆ ಈ ಕುಟುಂಬದ 19 ಸದಸ್ಯರನ್ನು ಕಳೆದುಕೊಂಡಿದ್ದಾರೆ. ರಫೀಕ್ ತನ್ನ ಹೆಂಡತಿ ಮತ್ತು ಒಬ್ಬ ಮಗನನ್ನು ಕಳೆದುಕೊಂಡಿದ್ದರು.

ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ 59 ಕರಸೇವಕರು ಪ್ರಯಾಣಿಸುತ್ತಿದ್ದ ರೈಲಿಗೆ ಗೋಧ್ರಾ ರೈಲು ನಿಲ್ದಾಣದಲ್ಲಿ ಬೆಂಕಿ ಹಚ್ಚಿದ ಬಳಿಕ ಅಹಮದಾಬಾದ್ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ದಂಗೆಗಳು ಭುಗಿಲೆದ್ದವು. ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಕೋಮು ಘರ್ಷಣೆಯು ಅತ್ಯಂತ ಭೀಕರವಾಗಿದ್ದು, ಮಾಜಿ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಸೇರಿದಂತೆ 69 ಜನರನ್ನು ಗುಂಪೊಂದು ಜೀವಂತವಾಗಿ ಸುಟ್ಟುಹಾಕಿತ್ತು. ಪ್ರಕರಣಕ್ಕೆ ಸಂಬಂಧಿಸಿ 2016ರಲ್ಲಿ ವಿಶೇಷ ವಿಚಾರಣಾ ನ್ಯಾಯಾಲಯವು 11 ಮಂದಿಗೆ ಹತ್ಯೆಗೆ ಸಂಬಂಧಿಸಿ ಶಿಕ್ಷೆ ವಿಧಿಸಿತ್ತು.

ಇದನ್ನು ಓದಿ:  ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡುವಂತೆ ರಷ್ಯಾದಿಂದ ಬಲವಂತ: ಭಾರತೀಯರಿಂದ ವಿಡಿಯೋ ರಿಲೀಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...