Homeಮುಖಪುಟಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

ಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

- Advertisement -
- Advertisement -

2002ರ ಗೋಧ್ರಾ ನಂತರದ ಗಲಭೆಯಲ್ಲಿ 69 ಜನರ ಹತ್ಯೆ ಮೂಲಕ ಘೋರ ಗಲಭೆಗೆ ಸಾಕ್ಷಿಯಾಗಿದ್ದ  ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಇಪ್ಪತ್ತೆರಡು ವರ್ಷಗಳ ನಂತರ, ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಉಳಿದಿರುವ ಏಕೈಕ ಕುಟುಂಬ ವಿವಾಹಪೂರ್ವ ‘ಹಲ್ದಿ’ (ಹಳದಿ ಶಾಸ್ತ್ರ) ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮಕ್ಕೆ ಸ್ಥಳೀಯವಾಗಿ ವಾಸಿಸುತ್ತಿದ್ದ ಎಲ್ಲಾ ಸಮುದಾಯದ ಜನರಿಗೆ ಆಹ್ವಾನವನ್ನು ನೀಡಲಾಗಿದೆ.

ಗುಲ್ಬರ್ಗ್ ಸೊಸೈಟಿ ಗಲಭೆಯಲ್ಲಿ ಉಳಿದುಕೊಂಡಿರುವ ಏಕೈಕ ಕುಟಂಬ ಮನ್ಸೂರಿ ಅವರದ್ದು. ಅವರು ತಮ್ಮ 18 ವರ್ಷದ ಮಗಳು ಮಿಸ್ಬಾಳ ವಿವಾಹದ ಪೂರ್ವ ಸಮಾರಂಭವಾದ ಹಲ್ದಿಯನ್ನು ಆಚರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ 2002ರ ಗಲಭೆಯಿಂದ ನಗರದ ವಿವಿಧೆಡೆ ಚದುರಿದ ಸಮಾಜದ ಬೆರಳೆಣಿಕೆಯಷ್ಟು ಜನರು  ಪಾಲ್ಗೊಂಡಿದ್ದರು.

ನಾನು ಎಲ್ಲರನ್ನು ಆಹ್ವಾನಿಸಿದ್ದೆ, ಹಿಂದೆ ಗುಲ್ಬರ್ಗ್‌ ಸೊಸೈಟಿಯಲ್ಲಿ ನೆರೆಹೊರೆಯವರಲ್ಲಿ ನಾಲ್ಕರಿಂದ ಐದು ಮಂದಿ ಮಾತ್ರ ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ರಫೀಕ್ ಮನ್ಸುರಿ ಅವರು ತಿಳಿಸಿದ್ದಾರೆ. ಹಿಂದೂ ಸಮುದಾಯಕ್ಕೆ ಸೇರಿದ ಹಲವರು ಕಾರ್ಯಕ್ರಮಕ್ಕೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.

ಗುಲ್ಬರ್ಗ್‌ ಸೊಸೈಟಿಯಲ್ಲಿ ಹಿಂಸಾಚಾರ ನಡೆದಾಗ ರಫೀಕ್ ಅವರಿಗೆ 30 ವರ್ಷ ವಯಸ್ಸಾಗಿತ್ತು. ಆ ಹಿಂಸಾಚಾರದಲ್ಲಿ ರಫೀಕ್ ಅವರು ಪತ್ನಿ ಮತ್ತು ಮಗನನ್ನು ಕಳೆದುಕೊಂಡಿದ್ದರು, ನಂತರ ಅವರು ಮಧ್ಯಪ್ರದೇಶದಲ್ಲಿ ತಸ್ಲೀಂ ಎನ್ನುವವರನ್ನು ಮದುವೆಯಾದರು. ಹಿಂಸಾಚಾರ ನಡೆದ ನಂತರದಲ್ಲಿ ಸೊಸೈಟಿಯಲ್ಲಿ ಇಂತಹ ಸಂಭ್ರಮದ ಕಾರ್ಯಕ್ರಮ ನಡೆದಿರುವುದು ಇದೇ ಮೊದಲು ಎಂದು ರಫೀಕ್‌ ಹೇಳಿದ್ದಾರೆ.

ನಾನು ಇದೀಗ ಬರ್ವಾನಿಯಲ್ಲಿದ್ದೇನೆ ಆದರೆ ಅಹಮದಾಬಾದ್‌ನಲ್ಲಿ ಸೋಮವಾರದ ಆಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಲಭೆಯ ನಂತರ ಸಮಾಜವು ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ, ಎಲ್ಲರೂ ಸಂತೋಷಪಟ್ಟಿದ್ದಾರೆ ಎಂದು ಮನ್ಸೂರಿ ಹೇಳಿದ್ದಾರೆ.

ಗಲಭೆಯಲ್ಲಿ ಮನ್ಸೂರಿಯ ತಂದೆ ಕಸಮ್ ತನ್ನ 6 ಮಕ್ಕಳು ಸೇರಿದಂತೆ ಈ ಕುಟುಂಬದ 19 ಸದಸ್ಯರನ್ನು ಕಳೆದುಕೊಂಡಿದ್ದಾರೆ. ರಫೀಕ್ ತನ್ನ ಹೆಂಡತಿ ಮತ್ತು ಒಬ್ಬ ಮಗನನ್ನು ಕಳೆದುಕೊಂಡಿದ್ದರು.

ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ 59 ಕರಸೇವಕರು ಪ್ರಯಾಣಿಸುತ್ತಿದ್ದ ರೈಲಿಗೆ ಗೋಧ್ರಾ ರೈಲು ನಿಲ್ದಾಣದಲ್ಲಿ ಬೆಂಕಿ ಹಚ್ಚಿದ ಬಳಿಕ ಅಹಮದಾಬಾದ್ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ದಂಗೆಗಳು ಭುಗಿಲೆದ್ದವು. ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಕೋಮು ಘರ್ಷಣೆಯು ಅತ್ಯಂತ ಭೀಕರವಾಗಿದ್ದು, ಮಾಜಿ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಸೇರಿದಂತೆ 69 ಜನರನ್ನು ಗುಂಪೊಂದು ಜೀವಂತವಾಗಿ ಸುಟ್ಟುಹಾಕಿತ್ತು. ಪ್ರಕರಣಕ್ಕೆ ಸಂಬಂಧಿಸಿ 2016ರಲ್ಲಿ ವಿಶೇಷ ವಿಚಾರಣಾ ನ್ಯಾಯಾಲಯವು 11 ಮಂದಿಗೆ ಹತ್ಯೆಗೆ ಸಂಬಂಧಿಸಿ ಶಿಕ್ಷೆ ವಿಧಿಸಿತ್ತು.

ಇದನ್ನು ಓದಿ:  ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡುವಂತೆ ರಷ್ಯಾದಿಂದ ಬಲವಂತ: ಭಾರತೀಯರಿಂದ ವಿಡಿಯೋ ರಿಲೀಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...