Homeಚಳವಳಿಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ - ವೆಂಕಟರಾಯಪ್ಪ

- Advertisement -
- Advertisement -

ಅಂದಿನ ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕಂಬಾಲಪಲ್ಲಿ ಎಂಬ ಗ್ರಾಮದಲ್ಲಿ 22 ವರ್ಷಗಳ ಹಿಂದೆ ಯಾವುದೇ ತಪ್ಪು ಮಾಡದ, ಆದರೆ ಸ್ವಾಭಿಮಾನದಿಂದ ತಲೆ ಎತ್ತಿ ಬದುಕಲು ಯತ್ನಿಸಿದ 7 ಜನ ದಲಿತರನ್ನು [ಶ್ರೀರಾಮಪ್ಪ(25), ಅಂಜನಪ್ಪ(27), ರಾಮಕ್ಕ(70), ಸುಬ್ಬಕ್ಕ(45) ಪಾಪಮ್ಮ(46), ನರಸಿಂಹಯ್ಯ(25), ಚಿಕ್ಕಪಾಪಣ್ಣ(40)] ಜೀವಂತವಾಗಿ ಸುಟ್ಟುಹಾಕಿದ ದುರಂತದ ದಿನ ಇಂದು… ದಲಿತರ ನರಮೇಧ ನಡೆಸಿ ಜಾತಿ ಕ್ರೌರ್ಯ ಮೆರೆದ ರೆಡ್ಡಿ ಒಕ್ಕಲಿಗ ಜಾತಿಯ 32 ಹಂತಕ ಆರೋಪಿಗಳನ್ನು ಡಿಸೆಂಬರ್ 4, 2006ರಂದು ವಿಚಾರಣಾ ನ್ಯಾಯಾಲಯ ದೋಷಮುಕ್ತಗೊಳಿಸಿತು… ತದನಂತರ 2014ರ ಆಗಸ್ಟ್ 20 ರಂದು ಹೈಕೋರ್ಟ್ ಸಹ ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಕಂಬಾಲಪಲ್ಲಿಯ ಹತ್ಯಾಕಾಂಡದ ಆರೋಪಿಗಳನ್ನು ದೋಷಮುಕ್ತಗೊಳಿಸಿತು!

ಕಂಬಾಲಪಲ್ಲಿ ಹತ್ಯಾಕಾಂಡದ ಆರೋಪಿಗಳೆಲ್ಲ ಖುಲಾಸೆಯಾದ ಸಂದರ್ಭದಲ್ಲಿ ಅಧ್ಯಾಪಕ ವಿಕಾಸ್ ಆರ್ ಮೌರ್ಯ ಮತ್ತು ದಸಂಸ ಹಿರಿಯ ಮುಖಂಡರಾದ ಎನ್. ವೆಂಕಟೇಶ್‌ರವರು ಹತ್ಯಾಕಾಂಡದಲ್ಲಿ ತನ್ನ ಮಕ್ಕಳನ್ನು ಕಳೆದುಕೊಂಡ ಸಂತ್ರಸ್ತ ವೆಂಕಟರಾಯಪ್ಪರವರನ್ನು ಸಂದರ್ಶನ ಮಾಡಿದ್ದರು. 2015ರಲ್ಲಿ ಇದು ಗೌರಿ ಲಂಕೇಶ್ ವಾರಪತ್ರಿಕೆಯಲ್ಲಿ ಪ್ರಕಟವಾಗಿತ್ತು. 2019ರಲ್ಲಿ ವೆಂಕಟರಾಯಪ್ಪನವರು ನಿಧನರಾಗಿದ್ದಾರೆ. ಆ ಸಂದರ್ಶನವನ್ನು ಓದುಗರಿಗಾಗಿ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ.

ಸಂದರ್ಶಕ : ಹೈ ಕೋರ್ಟ್ ಸಹ ಎಲ್ಲಾ ಆರೋಪಿಗಳನ್ನು ಖುಲಾಸೆ ಮಾಡಿದೆ. ಈ ತೀರ್ಪಿನ ಬಗ್ಗೆ ನಿಮ್ಮ ಅಭಿಪ್ರಾಯವೇನು?

ವೆಂಕಟರಾಯಪ್ಪ: ನನಗೇನು ತಿಳಿಯತ್ತೆ? ನಿಮ್ಮಂತೋರು ಯಾರಾದ್ರು ಬಂದು ಹೇಳಬೇಕು ಅಷ್ಟೆ. ನಾನು ಸಾಯೋದೊಳಗೆ ನ್ಯಾಯ ಸಿಕ್ಕರೆ ಸಾಕು.

ಸಂ: ಕಂಬಾಲಪಲ್ಲಿಯ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಗಿದೆ. ಅಲ್ಲಿ ಗೆಲ್ಲಬಹುದಾ?

ವೆಂ: ವಯಸ್ಸಾಯ್ತು, ನ್ಯಾಯ ನಮ್ಮಂತೋರಿಗೆ ಸಿಗತ್ತಾ? ನಿಮ್ಮಂತ ಹೋರಾಟಗಾರರು ನನಗೆ ನ್ಯಾಯ ಸಿಗೋ ತರ ಮಾಡಬೇಕು. ನೀವು ಹೇಳಿದ ಕಡೆ ಹೆಬ್ಬೆಟ್ಟು ಒತ್ತುತ್ತೀನಿ. ಅವರ ಶಿಕ್ಷೆ ಆಗಿರೋದು ನನ್ನ ಕಿವಿಗೆ ಬಿದ್ರೆ ಸಾಕು.

ಸಂ: ಸರ್ಕಾರ ನಿಮ್ಮ ಪರವಾಗಿ ಸುಪ್ರೀಂ ಕೋರ್ಟಿಗೆ ಹೋಗಿದೆ. ಇಲ್ಲಿವರೆಗೆ ನಿಮಗೆ ಏನೇನು ಸೌಕರ್ಯ ಮಾಡಿಕೊಟ್ಟಿದೆ?

ವೆಂ: ಸರ್ಕಾರದವರು ಹಣ ಕೊಟ್ಟು ಎಲ್ಲರಿಗೂ ಮನೆ ಕಟ್ಟಿಸಿಕೊಟ್ಟು, ಸೊಸೆಗೆ ಕೆಲಸ ಕೊಟ್ರು. ಆದ್ರೆ ಅವಳು ಕೊರಗಿ ಸೀಮೆ ಎಣ್ಣೆ ಸುರುವಿಕೊಂಡು ಸತ್ತಳು. ಸೌಕರ್ಯ ಬಂತು ಆದ್ರೆ ಮಕ್ಕಳು ಬರ್ತಾರೇನಪ್ಪಾ? ನ್ಯಾಯ ಸಿಗ್ತಾದೇನಪ್ಪಾ? ಇಲ್ಲಿ ಇರೋ ಜನರೆಲ್ಲ ನನ್ನ ಮಕ್ಕಳನ್ನ ನೆನೆಸ್ಟೇಕು. ಅವರು ಪ್ರಾಣ ಕೊಟ್ಟು ಇಲ್ಲಿನ ಜನರಿಗೆ ಜೀವನ ಕೊಟ್ರು. ಆದ್ರೆ ನಮ್ಮಂತೋರ್ಗೆ ಸೌಕರ್ಯ ಸಿಗಬೇಕಂದ್ರೆ ಯಾರಾದ್ರು ಸಾಯಲೇಬೇಕಾ?

ಸಂ: ಈ ಹದಿನೈದು ವರ್ಷ ಹೇಗೆ ಜೀವನ ಮಾಡಿದಿರಿ? ಆ ಘಟನೆ ಇನ್ನೂ ನೆನಪಿದೆಯಾ?

ವೆಂ: ಹೀಗೆ ಮಾಡ್ತಾ ಇದಿವಿ. ಎಲ್ಲಾ ನೆನಪಿದೆ, ಕಂಬಾಲಪಲ್ಲಿಗೆ ಮೊದಲ ಮೂರು ವರ್ಷ ಸಮಾಧಿಗೆ ಪೂಜೆ ಮಾಡೋಕೆ ಹೋದೆ. ಆಮೇಲೆ ಮನಸ್ಸಾಗಲಿಲ್ಲ. ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ.

ಸಂ: ಹಾಗಾದ್ರೆ ಕಂಬಾಲಪಲ್ಲಿಯ ಜೊತೆ ಸಂಬಂಧವೇ ಇಲ್ಲವೆ?

ವೆಂ: ನಾನು ಹೋಗಲ್ಲ. ನನ್ನ ಸಂಬಂಧಿಕರು ಪ್ರತಿ ವರ್ಷ ಹೋಗಿ ಸಮಾಧಿಗೆ ಪೂಜೆ ಮಾಡಿಕೊಂಡು ಬರುತ್ತಾರೆ ಅಷ್ಟೆ, ಜಮೀನು ಪಾಳು ಬಿದ್ದಿದೆ.

ಸಂ: ನೀವು ಕೋರ್ಟಿನಲ್ಲಿ ಸಾಕ್ಷಿ ಸರಿಯಾಗಿ ಹೇಳಲಿಲ್ಲವಂತಲ್ಲ. ಯಾಕೆ?

ವೆಂ: ನಾನು ಎಲ್ಲಾ ಹೇಳಿದ್ನಪ್ಪ, ಜಡ್ಜ್ ಮುಂದೆ ನಡೆದಿದ್ದೆಲ್ಲಾ ಹೇಳಿದೆ. ಇಂತಿಂತವ್ರೆ ಮಾಡಿದ್ದು ಅಂತ ಹೇಳಿದೆ. ಕೊನೇಲಿ ವಕೀಲ ನಿನಗೆ ಕಣ್ಣು ಸ್ವಲ್ಪ ಮಂಜಲ್ಲವಾ ಅಂತಂದ ಅದಕ್ಕೆ ಹೌದು ಸ್ವಲ್ಪ ಅಂದೆ ಅಷ್ಟೆ. ಇದನ್ನೇ ಮುಂದು ಮಾಡಿ ನಾನು ಹೇಳಿದ್ದನ್ನೆಲ್ಲ ಬಿಟ್ಟುಬಿಟ್ಟವರೆ.

ಸಂ: ಕೊಂದವರು ಯಾರು ಅಂತ ನೆನಪಿದೆಯಾ? ಮರುವಿಚಾರಣೆ ಬಂದ್ರೆ ಸತ್ಯ ಹೇಳ್ತಿರಾ?

ವೆಂ: ಹೇಳ್ತಿನಿ. ಪ್ರತಿಯೊಬ್ಬ ಕೊಲೆಗಾರರ ಹೆಸರನ್ನೂ ಹೇಳ್ತಿನಿ. ಪತ್ತೆ ಹಚ್ಚುತ್ತೀನಿ. ಯಾರೇ ಆಗ್ಲಿ ಕೊಲೆಗಾರರಿಗೆ ಶಿಕ್ಷೆ ಆಗಬೇಕಲ್ವಾ? ಆವತ್ತು ಸಾಪುಲು ನರಸಪ್ಪ ನನ್ನ ಕಾಪಾಡದೇ ಇದ್ದಿದ್ದರೆ ನಾನು ಇವತ್ತು ಬದುಕ್ತಾ ಇರಲಿಲ್ಲ.

ಸಂ: ನ್ಯಾಯ ಸಿಗದೇ ಇದ್ದದ್ದಕ್ಕೆ ನಿಮಗೆ ಯಾರ ಮೇಲೆ ಬೇಸರವಿದೆ? ಪೊಲೀಸ್, ಸಂಘಟನೆ, ನ್ಯಾಯಾಲಯ, ಸರ್ಕಾರ?

ವೆಂ: ಅವರನ್ನ ಯಾರು ಪೊಲೀಸ್ ಅಂದಿದ್ದು? ಅವರು ಮಾಡಿದ ಅನ್ಯಾಯ ಅವರೇ ಅನುಭವಿಸುತ್ತಾರೆ. ಸಂಘದವರು ಆರಂಭದಲ್ಲಿ ಜೊತೇಲಿ ಇದ್ರು. ಆಮೇಲೆ ಅವರೂ ಕೈ ಬಿಟ್ಟು, ಈಗ ವೆಂಕಟೇಶಪ್ಪ ಬಂದು ಹೋಗ್ತಾ ಕ್ಷೇಮ ವಿಚಾರಿಸಿಕೊಳ್ತಾರೆ. ಎಲ್ಲ ವಿಚಾರ ಅವರೇ ಹೇಳ್ತಾರೆ. ಇನ್ಯಾರು ಬರೋದಿಲ್ಲ. ನಮ್ಮನ್ನ ಮಾತಾಡ್ಸೋರೆ ಇಲ್ಲ.

ಸಂ: ಕೊನೆಯದಾಗಿ ಏನು ಹೇಳೋಕೆ ಇಷ್ಟ ಪಡ್ತೀರಾ?

ವೆಂ: ಏನು ಹೇಳಲಿ? ಮಿನಿಸ್ಟರ್, ಪೊಲೀಸ್, ತಹಶಿಲ್ದಾರ್, ಡಿ.ಸಿ ಎಲ್ಲಾ ಬಂದ್ರು. ಏನು ಮಾಡಿದ್ರು? ಏನು ಮಾಡ್ಲಿಲ್ಲ. ನನ್ನ ಕಣ್ಣ ಮುಂದೆ ಬಾಗಿಲು ಹಾಕಿ ಬೆಂಕಿ ಇಟ್ರಪ್ಪ ಪೋಲಿಸು ಅಲ್ಲೆ ಇದ್ರು. ಅವರಿಗೆ ಎಲ್ಲಾ ಗೊತ್ತು. ಹಿಂದೆ ನನ್ನ ದೊಡ್ಡ ಮಗ ಸತ್ತಾಗ್ಲು ನ್ಯಾಯ ಸಿಗಲಿಲ್ಲ. ನನ್ನ ಮಗ ಶ್ರೀರಾಮ ಹುಲಿಯಂಗಿದ್ದವನ್ನ ಸಾಯಿಸಿಬಿಟ್ರು. ರಾಜ ಮಹಾರಾಜರೇ ಹೋದ್ರು. ನನ್ನ ಪ್ರಾಣ ಹೋದ್ರು ಸರಿ ಕೋರ್ಟಲ್ಲಿ ಸತ್ಯ ಹೇಳ್ತಿನಿ. ಆದ್ರೆ ನಂಗೆ ಸಪೋರ್ಟ್ ಮಾಡೋರು ಯಾರು? ನಿಮ್ಮಂತೋರು ಆಗಾಗ ಬಂದು ಸಾಯೋ ಮುದುಕನಿಗೆ ಶಕ್ತಿ ಕೊಡ್ಬೇಕು.


ಇದನ್ನೂ ಓದಿ; ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಂಬಾಲಪಲ್ಲಿ ನರಮೇದದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕಂಬಾಲ ಪಲ್ಲಿಯ ಘಟನೆ ನಡೆದು 22ವರ್ಷ ಆದರೂ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದರೆ ನ್ಯಾಯಾಂಗ ವ್ಯವಸ್ಥೆ ಏನು ಮಾಡುತ್ತಿದೆ ಎಂದು ತಿಳಿಯುತ್ತಿಲ್ಲ. ಉಳಿದ ಒಬ್ಬ ವ್ಯಕ್ತಿಯು ತೀರಿ ಹೋಗಿದ್ದಾರೆ ನ್ಯಾಯ ಯಾರಿಗೆ ????

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...