Homeಚಳವಳಿಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ - ವೆಂಕಟರಾಯಪ್ಪ

- Advertisement -
- Advertisement -

ಅಂದಿನ ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕಂಬಾಲಪಲ್ಲಿ ಎಂಬ ಗ್ರಾಮದಲ್ಲಿ 22 ವರ್ಷಗಳ ಹಿಂದೆ ಯಾವುದೇ ತಪ್ಪು ಮಾಡದ, ಆದರೆ ಸ್ವಾಭಿಮಾನದಿಂದ ತಲೆ ಎತ್ತಿ ಬದುಕಲು ಯತ್ನಿಸಿದ 7 ಜನ ದಲಿತರನ್ನು [ಶ್ರೀರಾಮಪ್ಪ(25), ಅಂಜನಪ್ಪ(27), ರಾಮಕ್ಕ(70), ಸುಬ್ಬಕ್ಕ(45) ಪಾಪಮ್ಮ(46), ನರಸಿಂಹಯ್ಯ(25), ಚಿಕ್ಕಪಾಪಣ್ಣ(40)] ಜೀವಂತವಾಗಿ ಸುಟ್ಟುಹಾಕಿದ ದುರಂತದ ದಿನ ಇಂದು… ದಲಿತರ ನರಮೇಧ ನಡೆಸಿ ಜಾತಿ ಕ್ರೌರ್ಯ ಮೆರೆದ ರೆಡ್ಡಿ ಒಕ್ಕಲಿಗ ಜಾತಿಯ 32 ಹಂತಕ ಆರೋಪಿಗಳನ್ನು ಡಿಸೆಂಬರ್ 4, 2006ರಂದು ವಿಚಾರಣಾ ನ್ಯಾಯಾಲಯ ದೋಷಮುಕ್ತಗೊಳಿಸಿತು… ತದನಂತರ 2014ರ ಆಗಸ್ಟ್ 20 ರಂದು ಹೈಕೋರ್ಟ್ ಸಹ ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಕಂಬಾಲಪಲ್ಲಿಯ ಹತ್ಯಾಕಾಂಡದ ಆರೋಪಿಗಳನ್ನು ದೋಷಮುಕ್ತಗೊಳಿಸಿತು!

ಕಂಬಾಲಪಲ್ಲಿ ಹತ್ಯಾಕಾಂಡದ ಆರೋಪಿಗಳೆಲ್ಲ ಖುಲಾಸೆಯಾದ ಸಂದರ್ಭದಲ್ಲಿ ಅಧ್ಯಾಪಕ ವಿಕಾಸ್ ಆರ್ ಮೌರ್ಯ ಮತ್ತು ದಸಂಸ ಹಿರಿಯ ಮುಖಂಡರಾದ ಎನ್. ವೆಂಕಟೇಶ್‌ರವರು ಹತ್ಯಾಕಾಂಡದಲ್ಲಿ ತನ್ನ ಮಕ್ಕಳನ್ನು ಕಳೆದುಕೊಂಡ ಸಂತ್ರಸ್ತ ವೆಂಕಟರಾಯಪ್ಪರವರನ್ನು ಸಂದರ್ಶನ ಮಾಡಿದ್ದರು. 2015ರಲ್ಲಿ ಇದು ಗೌರಿ ಲಂಕೇಶ್ ವಾರಪತ್ರಿಕೆಯಲ್ಲಿ ಪ್ರಕಟವಾಗಿತ್ತು. 2019ರಲ್ಲಿ ವೆಂಕಟರಾಯಪ್ಪನವರು ನಿಧನರಾಗಿದ್ದಾರೆ. ಆ ಸಂದರ್ಶನವನ್ನು ಓದುಗರಿಗಾಗಿ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ.

ಸಂದರ್ಶಕ : ಹೈ ಕೋರ್ಟ್ ಸಹ ಎಲ್ಲಾ ಆರೋಪಿಗಳನ್ನು ಖುಲಾಸೆ ಮಾಡಿದೆ. ಈ ತೀರ್ಪಿನ ಬಗ್ಗೆ ನಿಮ್ಮ ಅಭಿಪ್ರಾಯವೇನು?

ವೆಂಕಟರಾಯಪ್ಪ: ನನಗೇನು ತಿಳಿಯತ್ತೆ? ನಿಮ್ಮಂತೋರು ಯಾರಾದ್ರು ಬಂದು ಹೇಳಬೇಕು ಅಷ್ಟೆ. ನಾನು ಸಾಯೋದೊಳಗೆ ನ್ಯಾಯ ಸಿಕ್ಕರೆ ಸಾಕು.

ಸಂ: ಕಂಬಾಲಪಲ್ಲಿಯ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಗಿದೆ. ಅಲ್ಲಿ ಗೆಲ್ಲಬಹುದಾ?

ವೆಂ: ವಯಸ್ಸಾಯ್ತು, ನ್ಯಾಯ ನಮ್ಮಂತೋರಿಗೆ ಸಿಗತ್ತಾ? ನಿಮ್ಮಂತ ಹೋರಾಟಗಾರರು ನನಗೆ ನ್ಯಾಯ ಸಿಗೋ ತರ ಮಾಡಬೇಕು. ನೀವು ಹೇಳಿದ ಕಡೆ ಹೆಬ್ಬೆಟ್ಟು ಒತ್ತುತ್ತೀನಿ. ಅವರ ಶಿಕ್ಷೆ ಆಗಿರೋದು ನನ್ನ ಕಿವಿಗೆ ಬಿದ್ರೆ ಸಾಕು.

ಸಂ: ಸರ್ಕಾರ ನಿಮ್ಮ ಪರವಾಗಿ ಸುಪ್ರೀಂ ಕೋರ್ಟಿಗೆ ಹೋಗಿದೆ. ಇಲ್ಲಿವರೆಗೆ ನಿಮಗೆ ಏನೇನು ಸೌಕರ್ಯ ಮಾಡಿಕೊಟ್ಟಿದೆ?

ವೆಂ: ಸರ್ಕಾರದವರು ಹಣ ಕೊಟ್ಟು ಎಲ್ಲರಿಗೂ ಮನೆ ಕಟ್ಟಿಸಿಕೊಟ್ಟು, ಸೊಸೆಗೆ ಕೆಲಸ ಕೊಟ್ರು. ಆದ್ರೆ ಅವಳು ಕೊರಗಿ ಸೀಮೆ ಎಣ್ಣೆ ಸುರುವಿಕೊಂಡು ಸತ್ತಳು. ಸೌಕರ್ಯ ಬಂತು ಆದ್ರೆ ಮಕ್ಕಳು ಬರ್ತಾರೇನಪ್ಪಾ? ನ್ಯಾಯ ಸಿಗ್ತಾದೇನಪ್ಪಾ? ಇಲ್ಲಿ ಇರೋ ಜನರೆಲ್ಲ ನನ್ನ ಮಕ್ಕಳನ್ನ ನೆನೆಸ್ಟೇಕು. ಅವರು ಪ್ರಾಣ ಕೊಟ್ಟು ಇಲ್ಲಿನ ಜನರಿಗೆ ಜೀವನ ಕೊಟ್ರು. ಆದ್ರೆ ನಮ್ಮಂತೋರ್ಗೆ ಸೌಕರ್ಯ ಸಿಗಬೇಕಂದ್ರೆ ಯಾರಾದ್ರು ಸಾಯಲೇಬೇಕಾ?

ಸಂ: ಈ ಹದಿನೈದು ವರ್ಷ ಹೇಗೆ ಜೀವನ ಮಾಡಿದಿರಿ? ಆ ಘಟನೆ ಇನ್ನೂ ನೆನಪಿದೆಯಾ?

ವೆಂ: ಹೀಗೆ ಮಾಡ್ತಾ ಇದಿವಿ. ಎಲ್ಲಾ ನೆನಪಿದೆ, ಕಂಬಾಲಪಲ್ಲಿಗೆ ಮೊದಲ ಮೂರು ವರ್ಷ ಸಮಾಧಿಗೆ ಪೂಜೆ ಮಾಡೋಕೆ ಹೋದೆ. ಆಮೇಲೆ ಮನಸ್ಸಾಗಲಿಲ್ಲ. ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ.

ಸಂ: ಹಾಗಾದ್ರೆ ಕಂಬಾಲಪಲ್ಲಿಯ ಜೊತೆ ಸಂಬಂಧವೇ ಇಲ್ಲವೆ?

ವೆಂ: ನಾನು ಹೋಗಲ್ಲ. ನನ್ನ ಸಂಬಂಧಿಕರು ಪ್ರತಿ ವರ್ಷ ಹೋಗಿ ಸಮಾಧಿಗೆ ಪೂಜೆ ಮಾಡಿಕೊಂಡು ಬರುತ್ತಾರೆ ಅಷ್ಟೆ, ಜಮೀನು ಪಾಳು ಬಿದ್ದಿದೆ.

ಸಂ: ನೀವು ಕೋರ್ಟಿನಲ್ಲಿ ಸಾಕ್ಷಿ ಸರಿಯಾಗಿ ಹೇಳಲಿಲ್ಲವಂತಲ್ಲ. ಯಾಕೆ?

ವೆಂ: ನಾನು ಎಲ್ಲಾ ಹೇಳಿದ್ನಪ್ಪ, ಜಡ್ಜ್ ಮುಂದೆ ನಡೆದಿದ್ದೆಲ್ಲಾ ಹೇಳಿದೆ. ಇಂತಿಂತವ್ರೆ ಮಾಡಿದ್ದು ಅಂತ ಹೇಳಿದೆ. ಕೊನೇಲಿ ವಕೀಲ ನಿನಗೆ ಕಣ್ಣು ಸ್ವಲ್ಪ ಮಂಜಲ್ಲವಾ ಅಂತಂದ ಅದಕ್ಕೆ ಹೌದು ಸ್ವಲ್ಪ ಅಂದೆ ಅಷ್ಟೆ. ಇದನ್ನೇ ಮುಂದು ಮಾಡಿ ನಾನು ಹೇಳಿದ್ದನ್ನೆಲ್ಲ ಬಿಟ್ಟುಬಿಟ್ಟವರೆ.

ಸಂ: ಕೊಂದವರು ಯಾರು ಅಂತ ನೆನಪಿದೆಯಾ? ಮರುವಿಚಾರಣೆ ಬಂದ್ರೆ ಸತ್ಯ ಹೇಳ್ತಿರಾ?

ವೆಂ: ಹೇಳ್ತಿನಿ. ಪ್ರತಿಯೊಬ್ಬ ಕೊಲೆಗಾರರ ಹೆಸರನ್ನೂ ಹೇಳ್ತಿನಿ. ಪತ್ತೆ ಹಚ್ಚುತ್ತೀನಿ. ಯಾರೇ ಆಗ್ಲಿ ಕೊಲೆಗಾರರಿಗೆ ಶಿಕ್ಷೆ ಆಗಬೇಕಲ್ವಾ? ಆವತ್ತು ಸಾಪುಲು ನರಸಪ್ಪ ನನ್ನ ಕಾಪಾಡದೇ ಇದ್ದಿದ್ದರೆ ನಾನು ಇವತ್ತು ಬದುಕ್ತಾ ಇರಲಿಲ್ಲ.

ಸಂ: ನ್ಯಾಯ ಸಿಗದೇ ಇದ್ದದ್ದಕ್ಕೆ ನಿಮಗೆ ಯಾರ ಮೇಲೆ ಬೇಸರವಿದೆ? ಪೊಲೀಸ್, ಸಂಘಟನೆ, ನ್ಯಾಯಾಲಯ, ಸರ್ಕಾರ?

ವೆಂ: ಅವರನ್ನ ಯಾರು ಪೊಲೀಸ್ ಅಂದಿದ್ದು? ಅವರು ಮಾಡಿದ ಅನ್ಯಾಯ ಅವರೇ ಅನುಭವಿಸುತ್ತಾರೆ. ಸಂಘದವರು ಆರಂಭದಲ್ಲಿ ಜೊತೇಲಿ ಇದ್ರು. ಆಮೇಲೆ ಅವರೂ ಕೈ ಬಿಟ್ಟು, ಈಗ ವೆಂಕಟೇಶಪ್ಪ ಬಂದು ಹೋಗ್ತಾ ಕ್ಷೇಮ ವಿಚಾರಿಸಿಕೊಳ್ತಾರೆ. ಎಲ್ಲ ವಿಚಾರ ಅವರೇ ಹೇಳ್ತಾರೆ. ಇನ್ಯಾರು ಬರೋದಿಲ್ಲ. ನಮ್ಮನ್ನ ಮಾತಾಡ್ಸೋರೆ ಇಲ್ಲ.

ಸಂ: ಕೊನೆಯದಾಗಿ ಏನು ಹೇಳೋಕೆ ಇಷ್ಟ ಪಡ್ತೀರಾ?

ವೆಂ: ಏನು ಹೇಳಲಿ? ಮಿನಿಸ್ಟರ್, ಪೊಲೀಸ್, ತಹಶಿಲ್ದಾರ್, ಡಿ.ಸಿ ಎಲ್ಲಾ ಬಂದ್ರು. ಏನು ಮಾಡಿದ್ರು? ಏನು ಮಾಡ್ಲಿಲ್ಲ. ನನ್ನ ಕಣ್ಣ ಮುಂದೆ ಬಾಗಿಲು ಹಾಕಿ ಬೆಂಕಿ ಇಟ್ರಪ್ಪ ಪೋಲಿಸು ಅಲ್ಲೆ ಇದ್ರು. ಅವರಿಗೆ ಎಲ್ಲಾ ಗೊತ್ತು. ಹಿಂದೆ ನನ್ನ ದೊಡ್ಡ ಮಗ ಸತ್ತಾಗ್ಲು ನ್ಯಾಯ ಸಿಗಲಿಲ್ಲ. ನನ್ನ ಮಗ ಶ್ರೀರಾಮ ಹುಲಿಯಂಗಿದ್ದವನ್ನ ಸಾಯಿಸಿಬಿಟ್ರು. ರಾಜ ಮಹಾರಾಜರೇ ಹೋದ್ರು. ನನ್ನ ಪ್ರಾಣ ಹೋದ್ರು ಸರಿ ಕೋರ್ಟಲ್ಲಿ ಸತ್ಯ ಹೇಳ್ತಿನಿ. ಆದ್ರೆ ನಂಗೆ ಸಪೋರ್ಟ್ ಮಾಡೋರು ಯಾರು? ನಿಮ್ಮಂತೋರು ಆಗಾಗ ಬಂದು ಸಾಯೋ ಮುದುಕನಿಗೆ ಶಕ್ತಿ ಕೊಡ್ಬೇಕು.


ಇದನ್ನೂ ಓದಿ; ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಂಬಾಲಪಲ್ಲಿ ನರಮೇದದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕಂಬಾಲ ಪಲ್ಲಿಯ ಘಟನೆ ನಡೆದು 22ವರ್ಷ ಆದರೂ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದರೆ ನ್ಯಾಯಾಂಗ ವ್ಯವಸ್ಥೆ ಏನು ಮಾಡುತ್ತಿದೆ ಎಂದು ತಿಳಿಯುತ್ತಿಲ್ಲ. ಉಳಿದ ಒಬ್ಬ ವ್ಯಕ್ತಿಯು ತೀರಿ ಹೋಗಿದ್ದಾರೆ ನ್ಯಾಯ ಯಾರಿಗೆ ????

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...