Homeಚಳವಳಿಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ - ವೆಂಕಟರಾಯಪ್ಪ

- Advertisement -
- Advertisement -

ಅಂದಿನ ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕಂಬಾಲಪಲ್ಲಿ ಎಂಬ ಗ್ರಾಮದಲ್ಲಿ 22 ವರ್ಷಗಳ ಹಿಂದೆ ಯಾವುದೇ ತಪ್ಪು ಮಾಡದ, ಆದರೆ ಸ್ವಾಭಿಮಾನದಿಂದ ತಲೆ ಎತ್ತಿ ಬದುಕಲು ಯತ್ನಿಸಿದ 7 ಜನ ದಲಿತರನ್ನು [ಶ್ರೀರಾಮಪ್ಪ(25), ಅಂಜನಪ್ಪ(27), ರಾಮಕ್ಕ(70), ಸುಬ್ಬಕ್ಕ(45) ಪಾಪಮ್ಮ(46), ನರಸಿಂಹಯ್ಯ(25), ಚಿಕ್ಕಪಾಪಣ್ಣ(40)] ಜೀವಂತವಾಗಿ ಸುಟ್ಟುಹಾಕಿದ ದುರಂತದ ದಿನ ಇಂದು… ದಲಿತರ ನರಮೇಧ ನಡೆಸಿ ಜಾತಿ ಕ್ರೌರ್ಯ ಮೆರೆದ ರೆಡ್ಡಿ ಒಕ್ಕಲಿಗ ಜಾತಿಯ 32 ಹಂತಕ ಆರೋಪಿಗಳನ್ನು ಡಿಸೆಂಬರ್ 4, 2006ರಂದು ವಿಚಾರಣಾ ನ್ಯಾಯಾಲಯ ದೋಷಮುಕ್ತಗೊಳಿಸಿತು… ತದನಂತರ 2014ರ ಆಗಸ್ಟ್ 20 ರಂದು ಹೈಕೋರ್ಟ್ ಸಹ ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಕಂಬಾಲಪಲ್ಲಿಯ ಹತ್ಯಾಕಾಂಡದ ಆರೋಪಿಗಳನ್ನು ದೋಷಮುಕ್ತಗೊಳಿಸಿತು!

ಕಂಬಾಲಪಲ್ಲಿ ಹತ್ಯಾಕಾಂಡದ ಆರೋಪಿಗಳೆಲ್ಲ ಖುಲಾಸೆಯಾದ ಸಂದರ್ಭದಲ್ಲಿ ಅಧ್ಯಾಪಕ ವಿಕಾಸ್ ಆರ್ ಮೌರ್ಯ ಮತ್ತು ದಸಂಸ ಹಿರಿಯ ಮುಖಂಡರಾದ ಎನ್. ವೆಂಕಟೇಶ್‌ರವರು ಹತ್ಯಾಕಾಂಡದಲ್ಲಿ ತನ್ನ ಮಕ್ಕಳನ್ನು ಕಳೆದುಕೊಂಡ ಸಂತ್ರಸ್ತ ವೆಂಕಟರಾಯಪ್ಪರವರನ್ನು ಸಂದರ್ಶನ ಮಾಡಿದ್ದರು. 2015ರಲ್ಲಿ ಇದು ಗೌರಿ ಲಂಕೇಶ್ ವಾರಪತ್ರಿಕೆಯಲ್ಲಿ ಪ್ರಕಟವಾಗಿತ್ತು. 2019ರಲ್ಲಿ ವೆಂಕಟರಾಯಪ್ಪನವರು ನಿಧನರಾಗಿದ್ದಾರೆ. ಆ ಸಂದರ್ಶನವನ್ನು ಓದುಗರಿಗಾಗಿ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ.

ಸಂದರ್ಶಕ : ಹೈ ಕೋರ್ಟ್ ಸಹ ಎಲ್ಲಾ ಆರೋಪಿಗಳನ್ನು ಖುಲಾಸೆ ಮಾಡಿದೆ. ಈ ತೀರ್ಪಿನ ಬಗ್ಗೆ ನಿಮ್ಮ ಅಭಿಪ್ರಾಯವೇನು?

ವೆಂಕಟರಾಯಪ್ಪ: ನನಗೇನು ತಿಳಿಯತ್ತೆ? ನಿಮ್ಮಂತೋರು ಯಾರಾದ್ರು ಬಂದು ಹೇಳಬೇಕು ಅಷ್ಟೆ. ನಾನು ಸಾಯೋದೊಳಗೆ ನ್ಯಾಯ ಸಿಕ್ಕರೆ ಸಾಕು.

ಸಂ: ಕಂಬಾಲಪಲ್ಲಿಯ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಗಿದೆ. ಅಲ್ಲಿ ಗೆಲ್ಲಬಹುದಾ?

ವೆಂ: ವಯಸ್ಸಾಯ್ತು, ನ್ಯಾಯ ನಮ್ಮಂತೋರಿಗೆ ಸಿಗತ್ತಾ? ನಿಮ್ಮಂತ ಹೋರಾಟಗಾರರು ನನಗೆ ನ್ಯಾಯ ಸಿಗೋ ತರ ಮಾಡಬೇಕು. ನೀವು ಹೇಳಿದ ಕಡೆ ಹೆಬ್ಬೆಟ್ಟು ಒತ್ತುತ್ತೀನಿ. ಅವರ ಶಿಕ್ಷೆ ಆಗಿರೋದು ನನ್ನ ಕಿವಿಗೆ ಬಿದ್ರೆ ಸಾಕು.

ಸಂ: ಸರ್ಕಾರ ನಿಮ್ಮ ಪರವಾಗಿ ಸುಪ್ರೀಂ ಕೋರ್ಟಿಗೆ ಹೋಗಿದೆ. ಇಲ್ಲಿವರೆಗೆ ನಿಮಗೆ ಏನೇನು ಸೌಕರ್ಯ ಮಾಡಿಕೊಟ್ಟಿದೆ?

ವೆಂ: ಸರ್ಕಾರದವರು ಹಣ ಕೊಟ್ಟು ಎಲ್ಲರಿಗೂ ಮನೆ ಕಟ್ಟಿಸಿಕೊಟ್ಟು, ಸೊಸೆಗೆ ಕೆಲಸ ಕೊಟ್ರು. ಆದ್ರೆ ಅವಳು ಕೊರಗಿ ಸೀಮೆ ಎಣ್ಣೆ ಸುರುವಿಕೊಂಡು ಸತ್ತಳು. ಸೌಕರ್ಯ ಬಂತು ಆದ್ರೆ ಮಕ್ಕಳು ಬರ್ತಾರೇನಪ್ಪಾ? ನ್ಯಾಯ ಸಿಗ್ತಾದೇನಪ್ಪಾ? ಇಲ್ಲಿ ಇರೋ ಜನರೆಲ್ಲ ನನ್ನ ಮಕ್ಕಳನ್ನ ನೆನೆಸ್ಟೇಕು. ಅವರು ಪ್ರಾಣ ಕೊಟ್ಟು ಇಲ್ಲಿನ ಜನರಿಗೆ ಜೀವನ ಕೊಟ್ರು. ಆದ್ರೆ ನಮ್ಮಂತೋರ್ಗೆ ಸೌಕರ್ಯ ಸಿಗಬೇಕಂದ್ರೆ ಯಾರಾದ್ರು ಸಾಯಲೇಬೇಕಾ?

ಸಂ: ಈ ಹದಿನೈದು ವರ್ಷ ಹೇಗೆ ಜೀವನ ಮಾಡಿದಿರಿ? ಆ ಘಟನೆ ಇನ್ನೂ ನೆನಪಿದೆಯಾ?

ವೆಂ: ಹೀಗೆ ಮಾಡ್ತಾ ಇದಿವಿ. ಎಲ್ಲಾ ನೆನಪಿದೆ, ಕಂಬಾಲಪಲ್ಲಿಗೆ ಮೊದಲ ಮೂರು ವರ್ಷ ಸಮಾಧಿಗೆ ಪೂಜೆ ಮಾಡೋಕೆ ಹೋದೆ. ಆಮೇಲೆ ಮನಸ್ಸಾಗಲಿಲ್ಲ. ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ.

ಸಂ: ಹಾಗಾದ್ರೆ ಕಂಬಾಲಪಲ್ಲಿಯ ಜೊತೆ ಸಂಬಂಧವೇ ಇಲ್ಲವೆ?

ವೆಂ: ನಾನು ಹೋಗಲ್ಲ. ನನ್ನ ಸಂಬಂಧಿಕರು ಪ್ರತಿ ವರ್ಷ ಹೋಗಿ ಸಮಾಧಿಗೆ ಪೂಜೆ ಮಾಡಿಕೊಂಡು ಬರುತ್ತಾರೆ ಅಷ್ಟೆ, ಜಮೀನು ಪಾಳು ಬಿದ್ದಿದೆ.

ಸಂ: ನೀವು ಕೋರ್ಟಿನಲ್ಲಿ ಸಾಕ್ಷಿ ಸರಿಯಾಗಿ ಹೇಳಲಿಲ್ಲವಂತಲ್ಲ. ಯಾಕೆ?

ವೆಂ: ನಾನು ಎಲ್ಲಾ ಹೇಳಿದ್ನಪ್ಪ, ಜಡ್ಜ್ ಮುಂದೆ ನಡೆದಿದ್ದೆಲ್ಲಾ ಹೇಳಿದೆ. ಇಂತಿಂತವ್ರೆ ಮಾಡಿದ್ದು ಅಂತ ಹೇಳಿದೆ. ಕೊನೇಲಿ ವಕೀಲ ನಿನಗೆ ಕಣ್ಣು ಸ್ವಲ್ಪ ಮಂಜಲ್ಲವಾ ಅಂತಂದ ಅದಕ್ಕೆ ಹೌದು ಸ್ವಲ್ಪ ಅಂದೆ ಅಷ್ಟೆ. ಇದನ್ನೇ ಮುಂದು ಮಾಡಿ ನಾನು ಹೇಳಿದ್ದನ್ನೆಲ್ಲ ಬಿಟ್ಟುಬಿಟ್ಟವರೆ.

ಸಂ: ಕೊಂದವರು ಯಾರು ಅಂತ ನೆನಪಿದೆಯಾ? ಮರುವಿಚಾರಣೆ ಬಂದ್ರೆ ಸತ್ಯ ಹೇಳ್ತಿರಾ?

ವೆಂ: ಹೇಳ್ತಿನಿ. ಪ್ರತಿಯೊಬ್ಬ ಕೊಲೆಗಾರರ ಹೆಸರನ್ನೂ ಹೇಳ್ತಿನಿ. ಪತ್ತೆ ಹಚ್ಚುತ್ತೀನಿ. ಯಾರೇ ಆಗ್ಲಿ ಕೊಲೆಗಾರರಿಗೆ ಶಿಕ್ಷೆ ಆಗಬೇಕಲ್ವಾ? ಆವತ್ತು ಸಾಪುಲು ನರಸಪ್ಪ ನನ್ನ ಕಾಪಾಡದೇ ಇದ್ದಿದ್ದರೆ ನಾನು ಇವತ್ತು ಬದುಕ್ತಾ ಇರಲಿಲ್ಲ.

ಸಂ: ನ್ಯಾಯ ಸಿಗದೇ ಇದ್ದದ್ದಕ್ಕೆ ನಿಮಗೆ ಯಾರ ಮೇಲೆ ಬೇಸರವಿದೆ? ಪೊಲೀಸ್, ಸಂಘಟನೆ, ನ್ಯಾಯಾಲಯ, ಸರ್ಕಾರ?

ವೆಂ: ಅವರನ್ನ ಯಾರು ಪೊಲೀಸ್ ಅಂದಿದ್ದು? ಅವರು ಮಾಡಿದ ಅನ್ಯಾಯ ಅವರೇ ಅನುಭವಿಸುತ್ತಾರೆ. ಸಂಘದವರು ಆರಂಭದಲ್ಲಿ ಜೊತೇಲಿ ಇದ್ರು. ಆಮೇಲೆ ಅವರೂ ಕೈ ಬಿಟ್ಟು, ಈಗ ವೆಂಕಟೇಶಪ್ಪ ಬಂದು ಹೋಗ್ತಾ ಕ್ಷೇಮ ವಿಚಾರಿಸಿಕೊಳ್ತಾರೆ. ಎಲ್ಲ ವಿಚಾರ ಅವರೇ ಹೇಳ್ತಾರೆ. ಇನ್ಯಾರು ಬರೋದಿಲ್ಲ. ನಮ್ಮನ್ನ ಮಾತಾಡ್ಸೋರೆ ಇಲ್ಲ.

ಸಂ: ಕೊನೆಯದಾಗಿ ಏನು ಹೇಳೋಕೆ ಇಷ್ಟ ಪಡ್ತೀರಾ?

ವೆಂ: ಏನು ಹೇಳಲಿ? ಮಿನಿಸ್ಟರ್, ಪೊಲೀಸ್, ತಹಶಿಲ್ದಾರ್, ಡಿ.ಸಿ ಎಲ್ಲಾ ಬಂದ್ರು. ಏನು ಮಾಡಿದ್ರು? ಏನು ಮಾಡ್ಲಿಲ್ಲ. ನನ್ನ ಕಣ್ಣ ಮುಂದೆ ಬಾಗಿಲು ಹಾಕಿ ಬೆಂಕಿ ಇಟ್ರಪ್ಪ ಪೋಲಿಸು ಅಲ್ಲೆ ಇದ್ರು. ಅವರಿಗೆ ಎಲ್ಲಾ ಗೊತ್ತು. ಹಿಂದೆ ನನ್ನ ದೊಡ್ಡ ಮಗ ಸತ್ತಾಗ್ಲು ನ್ಯಾಯ ಸಿಗಲಿಲ್ಲ. ನನ್ನ ಮಗ ಶ್ರೀರಾಮ ಹುಲಿಯಂಗಿದ್ದವನ್ನ ಸಾಯಿಸಿಬಿಟ್ರು. ರಾಜ ಮಹಾರಾಜರೇ ಹೋದ್ರು. ನನ್ನ ಪ್ರಾಣ ಹೋದ್ರು ಸರಿ ಕೋರ್ಟಲ್ಲಿ ಸತ್ಯ ಹೇಳ್ತಿನಿ. ಆದ್ರೆ ನಂಗೆ ಸಪೋರ್ಟ್ ಮಾಡೋರು ಯಾರು? ನಿಮ್ಮಂತೋರು ಆಗಾಗ ಬಂದು ಸಾಯೋ ಮುದುಕನಿಗೆ ಶಕ್ತಿ ಕೊಡ್ಬೇಕು.


ಇದನ್ನೂ ಓದಿ; ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಂಬಾಲಪಲ್ಲಿ ನರಮೇದದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕಂಬಾಲ ಪಲ್ಲಿಯ ಘಟನೆ ನಡೆದು 22ವರ್ಷ ಆದರೂ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದರೆ ನ್ಯಾಯಾಂಗ ವ್ಯವಸ್ಥೆ ಏನು ಮಾಡುತ್ತಿದೆ ಎಂದು ತಿಳಿಯುತ್ತಿಲ್ಲ. ಉಳಿದ ಒಬ್ಬ ವ್ಯಕ್ತಿಯು ತೀರಿ ಹೋಗಿದ್ದಾರೆ ನ್ಯಾಯ ಯಾರಿಗೆ ????

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...