Homeಚಳವಳಿಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

- Advertisement -
- Advertisement -

ಅಂಚಿನಲ್ಲಿರುವ, ತುಳಿತಕ್ಕೊಳಗಾದ ಸಮುದಾಯಗಳಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವ, ಜನಚಳವಳಿಗಳಿಗೆ ಒತ್ತಾಸೆಯಾಗಿ ನಿಲ್ಲುವ, ಸರ್ಕಾರದ ನೀತಿ ನಿರೂಪಣೆಗಳ ಸಾಧಕ ಬಾಧಕಗಳನ್ನು ಚರ್ಚಿಸುವ, ಸಂಶೋಧನೆಗೊಳಪಡಿಸುವ, ಮಾನವ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿರುವ ಮತ್ತು ಹತ್ತು ಹಲವು ಜನಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಬೆಂಗಳೂರಿನ ಪರ್ಯಾಯ ಕಾನೂನು ವೇದಿಕೆಗೆ (Alternative Law Forum- ALF) 22 ವರ್ಷ ತುಂಬಿದೆ.

ಈಗ ತನ್ನ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸಾಮಾಜಿಕ ಸುಧಾರಣೆಯ ಕೈಪಿಡಿ ಸಂವಿಧಾನ: ಮುಂದಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಒರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಮುರಳೀಧರ್‌ರವರು ವಿಷಯದ ಕುರಿತು ಮಾತನಾಡಲಿದ್ದಾರೆ. ಹೋರಾಟಗಾರ್ತಿ ಮತ್ತು ಚಿಂತಕಿ ದು.ಸರಸ್ವತಿಯವರು ಸಭೆಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮವು ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ALF ಕುರಿತು

ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಾನೂನಿಕ ಮೂಲಕ ಎದುರಿಸುವುದನ್ನು ಅಭ್ಯಸಿಸುವ ಮತ್ತು ಹೋರಾಟನಿರತ ಶೋಷಿತ ಸಮುದಾಯಗಳು, ಜನಚಳವಳಿಗೆ ನೆರವಾಗುವ ಕೆಲಸವನ್ನು ALF ಇಷ್ಟು ವರ್ಷಗಳಲ್ಲಿ ನಿರಂತರವಾಗಿ ಮಾಡುತ್ತಾ ಬಂದಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಮತ್ತು ಸಮಗ್ರ ಕಾನೂನು ಪುಸ್ತಕಗಳ, ಸಂಶೋಧನೆಗಳ, ವರದಿಗಳ ಬೃಹತ್ ಗ್ರಂಥಾಲಯ ಹೊಂದಿರುವ ALF ಇದುವರೆಗೆ 85ಕ್ಕೂ ಹೆಚ್ಚು ಸಾಮಾಜಿಕ-ರಾಜಕೀಯ ವಿಷಯಗಳ ಕುರಿತು ಚರ್ಚೆ ಸಂವಾದಗಳನ್ನು ಏರ್ಪಡಿಸಿದೆ. ಹತ್ತಾರು ಪ್ರಚಾರಾಂದೋಲನಗಳನ್ನು ನಡೆಸಿದೆ. ನೂರಾರು ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದೆ. ಸಹಸ್ರಾರು ಶೋಷಿತ ಜನರಿಗೆ ಕಾನೂನು ನೆರವು ನೀಡಿದ ಹೆಗ್ಗಳಿಕೆ ಹೊಂದಿದೆ.

ಸಲಿಂಗ ಪ್ರೇಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ವಿರುದ್ಧ ನಿರಂತರ ಪ್ರಚಾರಾಂದೋಲನವನ್ನು ALF ನಡೆಸಿದೆ. ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದೆ. ಅಲ್ಲದೆ ಆ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

ಅಲ್ಲದೆ ಮಹಿಳೆಯರ ಕಾನೂನು ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಆಂತರೀಕ ದೂರು ಸಮಿತಿಗಳ ಭಾಗವಾಗಿರುವ ಎಎಲ್ಎಫ್ ಅದರ ಬಗ್ಗೆ ತರಬೇತಿ ಶಿಬಿರಗಳನ್ನು ನಡೆಸಿದೆ. ಬಾಲ್ಯವಿವಾಹದ ವಿರುದ್ಧ ಅಭಿಯಾನ ನಡೆಸಿದೆ.

ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ಅವರ ಹಕ್ಕುಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಅವರು ಅನುಭವಿಸಿದ ಸಂಕಷ್ಟಗಳ ಕುರಿತು ಸಂಶೋಧನೆ ನಡೆಸಿ ಹಲವು ವರದಿಗಳನ್ನು ಹೊರತಂದಿದೆ.

ಸ್ಲಂ ಸಮುದಾಯಗಳ ಮತ್ತು ವಲಸೆ ಕಾರ್ಮಿಕರ ಹಕ್ಕುಗಳು, ಸಂವಿಧಾನದ ಅರಿವು, ಲಿಂಗ ಆಧಾರಿತ ಹಿಂಸೆ ಮತ್ತು ತಾರತಮ್ಯ, ದೌರ್ಜನ್ಯಗಳಲ್ಲಿನ ಸಂತ್ರಸ್ತರಿಗೆ ನ್ಯಾಯ, ಬೀದಿಬದಿ ವ್ಯಾಪಾರಿಗಳ ಹಕ್ಕುಗಳ ಕುರಿತು ಕಾರ್ಯಾಗಾರಗಳನ್ನು ALF ಹಮ್ಮಿಕೊಂಡಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲಿ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಕೋಮುಗಲಭೆಗಳ ಸಂತ್ರಸ್ತರ ಹಕ್ಕುಗಳಿಗಾಗಿ ಎಎಲ್‌ಎಫ್ ಕೆಲಸ ಮಾಡಿದೆ.

ಹಿಜಾಬ್ ವಿವಾದ ತಲೆತೋರಿದಾಗ ಎಎಲ್‌ಎಫ್ ಸಕ್ರಿಯ ಮಧ್ಯಪ್ರವೇಶ ಮಾಡಿದೆ. ಈ ವಿವಾದದಿಂದ ಉಂಟಾದ ಹೆಣ್ಣುಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಸಲ್ಲಿಸಿದೆ. ಹಿಜಾಬ್ ಅನ್ನು ಕೇವಲ ಧಾರ್ಮಿಕ ಸಮಸ್ಯೆಯಾಗಿ ಪರಿಗಣಿಸದೆ ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕು ಎಂದು ವಾದಿಸಿದೆ.

ಜನಚಳವಳಿಗಳಿಗೆ ಕಾನೂನು ನೆರವು ನೀಡುವುದಕ್ಕೆ ನಮ್ಮ ಆದ್ಯತೆ- ವಿನಯ್ ಶ್ರೀನಿವಾಸ್

ಸಂವಿಧಾನವು ನಮ್ಮ ದೇಶ ಹೇಗಿರಬೇಕೆಂಬ ಕನಸು ಮತ್ತು ಅದನ್ನು ಸಾಧಿಸುವ ದಾರಿಯಾಗಿದೆ. ಆದರೆ ಅದು ಹೆಚ್ಚಾಗಿ ಕೋರ್ಟುಗಳು ಮತ್ತು ವಕೀಲರ ಕೈಯಲ್ಲಿ ಸಿಕ್ಕಿಕೊಂಡಿದೆ ಹೊರತು ಜನಸಾಮಾನ್ಯರಿಗೆ ಅದರ ಮಹತ್ವ ಮತ್ತು ಮೌಲ್ಯಗಳ ಅರಿವಿಲ್ಲ. ಹಾಗಿದ್ದಾಗ ಅವರು ತಮ್ಮ ಹಕ್ಕುಗಳನ್ನು ಚಲಾಯಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಎಲ್‌ಎಫ್ ಸಂವಿಧಾನ ಅರಿವು ಪ್ರಚಾರಾಂದೋಲವನ್ನು ಹಮ್ಮಿಕೊಂಡಿದೆ ಮತ್ತು ಸಂವಿಧಾನ ಪೀಠಿಕೆ ಪುಸ್ತಕವನ್ನು ಹೊರತಂದಿದೆ ಎನ್ನುತ್ತಾರೆ ವಕೀಲರಾದ ವಿನಯ್ ಕೂರಗಾಯಲ ಶ್ರೀನಿವಾಸರವರು.

2014ರಲ್ಲಿ ಬೀದಿ ವ್ಯಾಪಾರಿಗಳ ಕುರಿತು ಕಾನೂನು ಬಂದಿತು. ಅದಕ್ಕೂ ಮುಂಚೆಯೇ ಮಸೂದೆಯನ್ನು ಹೇಗೆ ಬಲಪಡಿಸಬಹುದು ಎಂಬುದಕ್ಕೆ ನಮ್ಮ ಒಳನೋಟಗಳನ್ನು ನೀಡಿದ್ದೆವು. ಕಾನೂನು ಬಂದರೂ ಸಹ ಬೀದಿ ವ್ಯಾಪಾರಿಗಳಿಗೆ ಅದರ ಅರಿವಿರಲಿಲ್ಲ ಮತ್ತು ಅದು ಓದಲು ಕಷ್ಟವಿತ್ತು. ಆಗ ಎಎಲ್‌ಎಫ್‌ ಬೀದಿ ವ್ಯಾಪಾರಿಗಳ ಪರ ನಿಂತು ಕಾನೂನು ಅರಿವು ಶಿಬಿರಗಳನ್ನು ನಡೆಸಿದೆವು. ಅದೇ ರೀತಿ ಹಲವಾರು ಸಮುದಾಯಗಳಿಗೆ ತಮ್ಮನ್ನು ರಕ್ಷಿಸುವ ಕಾನೂನುಗಳ ಬಗ್ಗೆ ಅರಿವಿಲ್ಲ. ಇದ್ದರೂ ಅವನ್ನು ಜಾರಿಗೊಳಿಸಲು ಸಾಧ್ಯವಿಲ್ಲದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎನ್ನುತ್ತಾರೆ.

ಬಹಳಷ್ಟು ಜನರಿಗೆ ದೂರು ಹೇಗೆ ಬರೆಯಬೇಕು ಎಂಬುದು ಗೊತ್ತಿಲ್ಲ. ಹಾಗಾಗಿ ಸಣ್ಣ ಸಣ್ಣ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸುವುದು, ಕಾರ್ಯಾಗಾರ ಮಾಡುವುದನ್ನು ಮಾಡುತ್ತಾ ಬಂದಿದ್ದೇವೆ. ಅಲ್ಲದೆ 2014ರ ನಂತರ ಬೆಂಗಳೂರಿನ ಮಾಸ್ಟರ್ ಪ್ಲಾನ್ ನವೀಕರಣಗೊಂಡಿಲ್ಲ. ಅದು ನವೀಕರಿಸುವ ಸಂದರ್ಭದಲ್ಲಿ ನಾವು ಹಲವು ಗುಂಪುಗಳ ಜೊತೆ ಸೇರಿಕೊಂಡು ಬೆಂಗಳೂರಿನ ಮಾಸ್ಟರ್ ಪ್ಲಾನ್ ಅನ್ನು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಹೇಗೆ ನೋಡಬೇಕು ಎಂಬ ವರದಿಯನ್ನು ಸಹ ನೀಡಿದ್ದೇವೆ ಎಂದರು.

ಯುವಜನರ ಜೊತೆ ಕೆಲಸ ಮಾಡಲು ಹಲವು ಸಂಸ್ಥೆಗಳ ಜೊತೆ ಸೇರಿ ಸಂವಿಧಾನ ಸಾಕ್ಷರತೆ, ಕ್ರಿಮಿನಲ್ ಜಸ್ಟೀಸ್, ಮೀಡಿಯಾ ಕ್ರಿಟಿಕ್ ಸೇರಿದಂತೆ ಹಲವು ಕೋರ್ಸ್‌ಗಳನ್ನು ಅಭಿವೃದ್ದಿಪಡಿಸಿದ್ದೇವೆ. ಮಹಿಳಾ ಚಳವಳಿ- ದಲಿತ ಚಳವಳಿ- ಕಾರ್ಮಿಕ ಚಳವಳಿ ಚಳವಳಿಗಳ ಆಂತರಿಕ ಅನುಸಂಧಾನದ ಚಳವಳಿಗಳ ಅಂತರ್‌ಸಂಬಂಧಗಳ ಬಗ್ಗೆ ಚರ್ಚಾಸರಣಿ ಆರಂಭವಾಗಿದೆ ಎಂದರು.

ತಾರತಮ್ಯದ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಭಾರತದಲ್ಲಿ ತಾರತಮ್ಯ ಎದುರಿಸಲು ಇರುವ ಕಾನೂನುಗಳಿವೆ, ಅವು ಹೇಗೆ ಕೆಲಸ ಮಾಡುತ್ತಿವೆ, ಕಾನೂನನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಕೆಲಸ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ಬೇರೆ ಬೇರೆ ಜನಚಳವಳಿಗಳಿಗೆ, ಕಾನೂನು ನೆರವು ಕೊಡುವುದು ಹೇಗೆ ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ವಿನಯ್ ಶ್ರೀನಿವಾಸ್.

ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...