Homeಚಳವಳಿಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

- Advertisement -
- Advertisement -

ಅಂಚಿನಲ್ಲಿರುವ, ತುಳಿತಕ್ಕೊಳಗಾದ ಸಮುದಾಯಗಳಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವ, ಜನಚಳವಳಿಗಳಿಗೆ ಒತ್ತಾಸೆಯಾಗಿ ನಿಲ್ಲುವ, ಸರ್ಕಾರದ ನೀತಿ ನಿರೂಪಣೆಗಳ ಸಾಧಕ ಬಾಧಕಗಳನ್ನು ಚರ್ಚಿಸುವ, ಸಂಶೋಧನೆಗೊಳಪಡಿಸುವ, ಮಾನವ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿರುವ ಮತ್ತು ಹತ್ತು ಹಲವು ಜನಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಬೆಂಗಳೂರಿನ ಪರ್ಯಾಯ ಕಾನೂನು ವೇದಿಕೆಗೆ (Alternative Law Forum- ALF) 22 ವರ್ಷ ತುಂಬಿದೆ.

ಈಗ ತನ್ನ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸಾಮಾಜಿಕ ಸುಧಾರಣೆಯ ಕೈಪಿಡಿ ಸಂವಿಧಾನ: ಮುಂದಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಒರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಮುರಳೀಧರ್‌ರವರು ವಿಷಯದ ಕುರಿತು ಮಾತನಾಡಲಿದ್ದಾರೆ. ಹೋರಾಟಗಾರ್ತಿ ಮತ್ತು ಚಿಂತಕಿ ದು.ಸರಸ್ವತಿಯವರು ಸಭೆಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮವು ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ALF ಕುರಿತು

ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಾನೂನಿಕ ಮೂಲಕ ಎದುರಿಸುವುದನ್ನು ಅಭ್ಯಸಿಸುವ ಮತ್ತು ಹೋರಾಟನಿರತ ಶೋಷಿತ ಸಮುದಾಯಗಳು, ಜನಚಳವಳಿಗೆ ನೆರವಾಗುವ ಕೆಲಸವನ್ನು ALF ಇಷ್ಟು ವರ್ಷಗಳಲ್ಲಿ ನಿರಂತರವಾಗಿ ಮಾಡುತ್ತಾ ಬಂದಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಮತ್ತು ಸಮಗ್ರ ಕಾನೂನು ಪುಸ್ತಕಗಳ, ಸಂಶೋಧನೆಗಳ, ವರದಿಗಳ ಬೃಹತ್ ಗ್ರಂಥಾಲಯ ಹೊಂದಿರುವ ALF ಇದುವರೆಗೆ 85ಕ್ಕೂ ಹೆಚ್ಚು ಸಾಮಾಜಿಕ-ರಾಜಕೀಯ ವಿಷಯಗಳ ಕುರಿತು ಚರ್ಚೆ ಸಂವಾದಗಳನ್ನು ಏರ್ಪಡಿಸಿದೆ. ಹತ್ತಾರು ಪ್ರಚಾರಾಂದೋಲನಗಳನ್ನು ನಡೆಸಿದೆ. ನೂರಾರು ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದೆ. ಸಹಸ್ರಾರು ಶೋಷಿತ ಜನರಿಗೆ ಕಾನೂನು ನೆರವು ನೀಡಿದ ಹೆಗ್ಗಳಿಕೆ ಹೊಂದಿದೆ.

ಸಲಿಂಗ ಪ್ರೇಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ವಿರುದ್ಧ ನಿರಂತರ ಪ್ರಚಾರಾಂದೋಲನವನ್ನು ALF ನಡೆಸಿದೆ. ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದೆ. ಅಲ್ಲದೆ ಆ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

ಅಲ್ಲದೆ ಮಹಿಳೆಯರ ಕಾನೂನು ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಆಂತರೀಕ ದೂರು ಸಮಿತಿಗಳ ಭಾಗವಾಗಿರುವ ಎಎಲ್ಎಫ್ ಅದರ ಬಗ್ಗೆ ತರಬೇತಿ ಶಿಬಿರಗಳನ್ನು ನಡೆಸಿದೆ. ಬಾಲ್ಯವಿವಾಹದ ವಿರುದ್ಧ ಅಭಿಯಾನ ನಡೆಸಿದೆ.

ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ಅವರ ಹಕ್ಕುಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಅವರು ಅನುಭವಿಸಿದ ಸಂಕಷ್ಟಗಳ ಕುರಿತು ಸಂಶೋಧನೆ ನಡೆಸಿ ಹಲವು ವರದಿಗಳನ್ನು ಹೊರತಂದಿದೆ.

ಸ್ಲಂ ಸಮುದಾಯಗಳ ಮತ್ತು ವಲಸೆ ಕಾರ್ಮಿಕರ ಹಕ್ಕುಗಳು, ಸಂವಿಧಾನದ ಅರಿವು, ಲಿಂಗ ಆಧಾರಿತ ಹಿಂಸೆ ಮತ್ತು ತಾರತಮ್ಯ, ದೌರ್ಜನ್ಯಗಳಲ್ಲಿನ ಸಂತ್ರಸ್ತರಿಗೆ ನ್ಯಾಯ, ಬೀದಿಬದಿ ವ್ಯಾಪಾರಿಗಳ ಹಕ್ಕುಗಳ ಕುರಿತು ಕಾರ್ಯಾಗಾರಗಳನ್ನು ALF ಹಮ್ಮಿಕೊಂಡಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲಿ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಕೋಮುಗಲಭೆಗಳ ಸಂತ್ರಸ್ತರ ಹಕ್ಕುಗಳಿಗಾಗಿ ಎಎಲ್‌ಎಫ್ ಕೆಲಸ ಮಾಡಿದೆ.

ಹಿಜಾಬ್ ವಿವಾದ ತಲೆತೋರಿದಾಗ ಎಎಲ್‌ಎಫ್ ಸಕ್ರಿಯ ಮಧ್ಯಪ್ರವೇಶ ಮಾಡಿದೆ. ಈ ವಿವಾದದಿಂದ ಉಂಟಾದ ಹೆಣ್ಣುಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಸಲ್ಲಿಸಿದೆ. ಹಿಜಾಬ್ ಅನ್ನು ಕೇವಲ ಧಾರ್ಮಿಕ ಸಮಸ್ಯೆಯಾಗಿ ಪರಿಗಣಿಸದೆ ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕು ಎಂದು ವಾದಿಸಿದೆ.

ಜನಚಳವಳಿಗಳಿಗೆ ಕಾನೂನು ನೆರವು ನೀಡುವುದಕ್ಕೆ ನಮ್ಮ ಆದ್ಯತೆ- ವಿನಯ್ ಶ್ರೀನಿವಾಸ್

ಸಂವಿಧಾನವು ನಮ್ಮ ದೇಶ ಹೇಗಿರಬೇಕೆಂಬ ಕನಸು ಮತ್ತು ಅದನ್ನು ಸಾಧಿಸುವ ದಾರಿಯಾಗಿದೆ. ಆದರೆ ಅದು ಹೆಚ್ಚಾಗಿ ಕೋರ್ಟುಗಳು ಮತ್ತು ವಕೀಲರ ಕೈಯಲ್ಲಿ ಸಿಕ್ಕಿಕೊಂಡಿದೆ ಹೊರತು ಜನಸಾಮಾನ್ಯರಿಗೆ ಅದರ ಮಹತ್ವ ಮತ್ತು ಮೌಲ್ಯಗಳ ಅರಿವಿಲ್ಲ. ಹಾಗಿದ್ದಾಗ ಅವರು ತಮ್ಮ ಹಕ್ಕುಗಳನ್ನು ಚಲಾಯಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಎಲ್‌ಎಫ್ ಸಂವಿಧಾನ ಅರಿವು ಪ್ರಚಾರಾಂದೋಲವನ್ನು ಹಮ್ಮಿಕೊಂಡಿದೆ ಮತ್ತು ಸಂವಿಧಾನ ಪೀಠಿಕೆ ಪುಸ್ತಕವನ್ನು ಹೊರತಂದಿದೆ ಎನ್ನುತ್ತಾರೆ ವಕೀಲರಾದ ವಿನಯ್ ಕೂರಗಾಯಲ ಶ್ರೀನಿವಾಸರವರು.

2014ರಲ್ಲಿ ಬೀದಿ ವ್ಯಾಪಾರಿಗಳ ಕುರಿತು ಕಾನೂನು ಬಂದಿತು. ಅದಕ್ಕೂ ಮುಂಚೆಯೇ ಮಸೂದೆಯನ್ನು ಹೇಗೆ ಬಲಪಡಿಸಬಹುದು ಎಂಬುದಕ್ಕೆ ನಮ್ಮ ಒಳನೋಟಗಳನ್ನು ನೀಡಿದ್ದೆವು. ಕಾನೂನು ಬಂದರೂ ಸಹ ಬೀದಿ ವ್ಯಾಪಾರಿಗಳಿಗೆ ಅದರ ಅರಿವಿರಲಿಲ್ಲ ಮತ್ತು ಅದು ಓದಲು ಕಷ್ಟವಿತ್ತು. ಆಗ ಎಎಲ್‌ಎಫ್‌ ಬೀದಿ ವ್ಯಾಪಾರಿಗಳ ಪರ ನಿಂತು ಕಾನೂನು ಅರಿವು ಶಿಬಿರಗಳನ್ನು ನಡೆಸಿದೆವು. ಅದೇ ರೀತಿ ಹಲವಾರು ಸಮುದಾಯಗಳಿಗೆ ತಮ್ಮನ್ನು ರಕ್ಷಿಸುವ ಕಾನೂನುಗಳ ಬಗ್ಗೆ ಅರಿವಿಲ್ಲ. ಇದ್ದರೂ ಅವನ್ನು ಜಾರಿಗೊಳಿಸಲು ಸಾಧ್ಯವಿಲ್ಲದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎನ್ನುತ್ತಾರೆ.

ಬಹಳಷ್ಟು ಜನರಿಗೆ ದೂರು ಹೇಗೆ ಬರೆಯಬೇಕು ಎಂಬುದು ಗೊತ್ತಿಲ್ಲ. ಹಾಗಾಗಿ ಸಣ್ಣ ಸಣ್ಣ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸುವುದು, ಕಾರ್ಯಾಗಾರ ಮಾಡುವುದನ್ನು ಮಾಡುತ್ತಾ ಬಂದಿದ್ದೇವೆ. ಅಲ್ಲದೆ 2014ರ ನಂತರ ಬೆಂಗಳೂರಿನ ಮಾಸ್ಟರ್ ಪ್ಲಾನ್ ನವೀಕರಣಗೊಂಡಿಲ್ಲ. ಅದು ನವೀಕರಿಸುವ ಸಂದರ್ಭದಲ್ಲಿ ನಾವು ಹಲವು ಗುಂಪುಗಳ ಜೊತೆ ಸೇರಿಕೊಂಡು ಬೆಂಗಳೂರಿನ ಮಾಸ್ಟರ್ ಪ್ಲಾನ್ ಅನ್ನು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಹೇಗೆ ನೋಡಬೇಕು ಎಂಬ ವರದಿಯನ್ನು ಸಹ ನೀಡಿದ್ದೇವೆ ಎಂದರು.

ಯುವಜನರ ಜೊತೆ ಕೆಲಸ ಮಾಡಲು ಹಲವು ಸಂಸ್ಥೆಗಳ ಜೊತೆ ಸೇರಿ ಸಂವಿಧಾನ ಸಾಕ್ಷರತೆ, ಕ್ರಿಮಿನಲ್ ಜಸ್ಟೀಸ್, ಮೀಡಿಯಾ ಕ್ರಿಟಿಕ್ ಸೇರಿದಂತೆ ಹಲವು ಕೋರ್ಸ್‌ಗಳನ್ನು ಅಭಿವೃದ್ದಿಪಡಿಸಿದ್ದೇವೆ. ಮಹಿಳಾ ಚಳವಳಿ- ದಲಿತ ಚಳವಳಿ- ಕಾರ್ಮಿಕ ಚಳವಳಿ ಚಳವಳಿಗಳ ಆಂತರಿಕ ಅನುಸಂಧಾನದ ಚಳವಳಿಗಳ ಅಂತರ್‌ಸಂಬಂಧಗಳ ಬಗ್ಗೆ ಚರ್ಚಾಸರಣಿ ಆರಂಭವಾಗಿದೆ ಎಂದರು.

ತಾರತಮ್ಯದ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಭಾರತದಲ್ಲಿ ತಾರತಮ್ಯ ಎದುರಿಸಲು ಇರುವ ಕಾನೂನುಗಳಿವೆ, ಅವು ಹೇಗೆ ಕೆಲಸ ಮಾಡುತ್ತಿವೆ, ಕಾನೂನನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಕೆಲಸ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ಬೇರೆ ಬೇರೆ ಜನಚಳವಳಿಗಳಿಗೆ, ಕಾನೂನು ನೆರವು ಕೊಡುವುದು ಹೇಗೆ ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ವಿನಯ್ ಶ್ರೀನಿವಾಸ್.

ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...