Homeಚಳವಳಿಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

- Advertisement -
- Advertisement -

ಅಂಚಿನಲ್ಲಿರುವ, ತುಳಿತಕ್ಕೊಳಗಾದ ಸಮುದಾಯಗಳಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವ, ಜನಚಳವಳಿಗಳಿಗೆ ಒತ್ತಾಸೆಯಾಗಿ ನಿಲ್ಲುವ, ಸರ್ಕಾರದ ನೀತಿ ನಿರೂಪಣೆಗಳ ಸಾಧಕ ಬಾಧಕಗಳನ್ನು ಚರ್ಚಿಸುವ, ಸಂಶೋಧನೆಗೊಳಪಡಿಸುವ, ಮಾನವ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿರುವ ಮತ್ತು ಹತ್ತು ಹಲವು ಜನಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಬೆಂಗಳೂರಿನ ಪರ್ಯಾಯ ಕಾನೂನು ವೇದಿಕೆಗೆ (Alternative Law Forum- ALF) 22 ವರ್ಷ ತುಂಬಿದೆ.

ಈಗ ತನ್ನ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸಾಮಾಜಿಕ ಸುಧಾರಣೆಯ ಕೈಪಿಡಿ ಸಂವಿಧಾನ: ಮುಂದಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಒರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಮುರಳೀಧರ್‌ರವರು ವಿಷಯದ ಕುರಿತು ಮಾತನಾಡಲಿದ್ದಾರೆ. ಹೋರಾಟಗಾರ್ತಿ ಮತ್ತು ಚಿಂತಕಿ ದು.ಸರಸ್ವತಿಯವರು ಸಭೆಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮವು ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ALF ಕುರಿತು

ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಾನೂನಿಕ ಮೂಲಕ ಎದುರಿಸುವುದನ್ನು ಅಭ್ಯಸಿಸುವ ಮತ್ತು ಹೋರಾಟನಿರತ ಶೋಷಿತ ಸಮುದಾಯಗಳು, ಜನಚಳವಳಿಗೆ ನೆರವಾಗುವ ಕೆಲಸವನ್ನು ALF ಇಷ್ಟು ವರ್ಷಗಳಲ್ಲಿ ನಿರಂತರವಾಗಿ ಮಾಡುತ್ತಾ ಬಂದಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಮತ್ತು ಸಮಗ್ರ ಕಾನೂನು ಪುಸ್ತಕಗಳ, ಸಂಶೋಧನೆಗಳ, ವರದಿಗಳ ಬೃಹತ್ ಗ್ರಂಥಾಲಯ ಹೊಂದಿರುವ ALF ಇದುವರೆಗೆ 85ಕ್ಕೂ ಹೆಚ್ಚು ಸಾಮಾಜಿಕ-ರಾಜಕೀಯ ವಿಷಯಗಳ ಕುರಿತು ಚರ್ಚೆ ಸಂವಾದಗಳನ್ನು ಏರ್ಪಡಿಸಿದೆ. ಹತ್ತಾರು ಪ್ರಚಾರಾಂದೋಲನಗಳನ್ನು ನಡೆಸಿದೆ. ನೂರಾರು ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದೆ. ಸಹಸ್ರಾರು ಶೋಷಿತ ಜನರಿಗೆ ಕಾನೂನು ನೆರವು ನೀಡಿದ ಹೆಗ್ಗಳಿಕೆ ಹೊಂದಿದೆ.

ಸಲಿಂಗ ಪ್ರೇಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ವಿರುದ್ಧ ನಿರಂತರ ಪ್ರಚಾರಾಂದೋಲನವನ್ನು ALF ನಡೆಸಿದೆ. ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದೆ. ಅಲ್ಲದೆ ಆ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

ಅಲ್ಲದೆ ಮಹಿಳೆಯರ ಕಾನೂನು ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಆಂತರೀಕ ದೂರು ಸಮಿತಿಗಳ ಭಾಗವಾಗಿರುವ ಎಎಲ್ಎಫ್ ಅದರ ಬಗ್ಗೆ ತರಬೇತಿ ಶಿಬಿರಗಳನ್ನು ನಡೆಸಿದೆ. ಬಾಲ್ಯವಿವಾಹದ ವಿರುದ್ಧ ಅಭಿಯಾನ ನಡೆಸಿದೆ.

ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ಅವರ ಹಕ್ಕುಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಅವರು ಅನುಭವಿಸಿದ ಸಂಕಷ್ಟಗಳ ಕುರಿತು ಸಂಶೋಧನೆ ನಡೆಸಿ ಹಲವು ವರದಿಗಳನ್ನು ಹೊರತಂದಿದೆ.

ಸ್ಲಂ ಸಮುದಾಯಗಳ ಮತ್ತು ವಲಸೆ ಕಾರ್ಮಿಕರ ಹಕ್ಕುಗಳು, ಸಂವಿಧಾನದ ಅರಿವು, ಲಿಂಗ ಆಧಾರಿತ ಹಿಂಸೆ ಮತ್ತು ತಾರತಮ್ಯ, ದೌರ್ಜನ್ಯಗಳಲ್ಲಿನ ಸಂತ್ರಸ್ತರಿಗೆ ನ್ಯಾಯ, ಬೀದಿಬದಿ ವ್ಯಾಪಾರಿಗಳ ಹಕ್ಕುಗಳ ಕುರಿತು ಕಾರ್ಯಾಗಾರಗಳನ್ನು ALF ಹಮ್ಮಿಕೊಂಡಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲಿ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಕೋಮುಗಲಭೆಗಳ ಸಂತ್ರಸ್ತರ ಹಕ್ಕುಗಳಿಗಾಗಿ ಎಎಲ್‌ಎಫ್ ಕೆಲಸ ಮಾಡಿದೆ.

ಹಿಜಾಬ್ ವಿವಾದ ತಲೆತೋರಿದಾಗ ಎಎಲ್‌ಎಫ್ ಸಕ್ರಿಯ ಮಧ್ಯಪ್ರವೇಶ ಮಾಡಿದೆ. ಈ ವಿವಾದದಿಂದ ಉಂಟಾದ ಹೆಣ್ಣುಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಸಲ್ಲಿಸಿದೆ. ಹಿಜಾಬ್ ಅನ್ನು ಕೇವಲ ಧಾರ್ಮಿಕ ಸಮಸ್ಯೆಯಾಗಿ ಪರಿಗಣಿಸದೆ ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕು ಎಂದು ವಾದಿಸಿದೆ.

ಜನಚಳವಳಿಗಳಿಗೆ ಕಾನೂನು ನೆರವು ನೀಡುವುದಕ್ಕೆ ನಮ್ಮ ಆದ್ಯತೆ- ವಿನಯ್ ಶ್ರೀನಿವಾಸ್

ಸಂವಿಧಾನವು ನಮ್ಮ ದೇಶ ಹೇಗಿರಬೇಕೆಂಬ ಕನಸು ಮತ್ತು ಅದನ್ನು ಸಾಧಿಸುವ ದಾರಿಯಾಗಿದೆ. ಆದರೆ ಅದು ಹೆಚ್ಚಾಗಿ ಕೋರ್ಟುಗಳು ಮತ್ತು ವಕೀಲರ ಕೈಯಲ್ಲಿ ಸಿಕ್ಕಿಕೊಂಡಿದೆ ಹೊರತು ಜನಸಾಮಾನ್ಯರಿಗೆ ಅದರ ಮಹತ್ವ ಮತ್ತು ಮೌಲ್ಯಗಳ ಅರಿವಿಲ್ಲ. ಹಾಗಿದ್ದಾಗ ಅವರು ತಮ್ಮ ಹಕ್ಕುಗಳನ್ನು ಚಲಾಯಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಎಲ್‌ಎಫ್ ಸಂವಿಧಾನ ಅರಿವು ಪ್ರಚಾರಾಂದೋಲವನ್ನು ಹಮ್ಮಿಕೊಂಡಿದೆ ಮತ್ತು ಸಂವಿಧಾನ ಪೀಠಿಕೆ ಪುಸ್ತಕವನ್ನು ಹೊರತಂದಿದೆ ಎನ್ನುತ್ತಾರೆ ವಕೀಲರಾದ ವಿನಯ್ ಕೂರಗಾಯಲ ಶ್ರೀನಿವಾಸರವರು.

2014ರಲ್ಲಿ ಬೀದಿ ವ್ಯಾಪಾರಿಗಳ ಕುರಿತು ಕಾನೂನು ಬಂದಿತು. ಅದಕ್ಕೂ ಮುಂಚೆಯೇ ಮಸೂದೆಯನ್ನು ಹೇಗೆ ಬಲಪಡಿಸಬಹುದು ಎಂಬುದಕ್ಕೆ ನಮ್ಮ ಒಳನೋಟಗಳನ್ನು ನೀಡಿದ್ದೆವು. ಕಾನೂನು ಬಂದರೂ ಸಹ ಬೀದಿ ವ್ಯಾಪಾರಿಗಳಿಗೆ ಅದರ ಅರಿವಿರಲಿಲ್ಲ ಮತ್ತು ಅದು ಓದಲು ಕಷ್ಟವಿತ್ತು. ಆಗ ಎಎಲ್‌ಎಫ್‌ ಬೀದಿ ವ್ಯಾಪಾರಿಗಳ ಪರ ನಿಂತು ಕಾನೂನು ಅರಿವು ಶಿಬಿರಗಳನ್ನು ನಡೆಸಿದೆವು. ಅದೇ ರೀತಿ ಹಲವಾರು ಸಮುದಾಯಗಳಿಗೆ ತಮ್ಮನ್ನು ರಕ್ಷಿಸುವ ಕಾನೂನುಗಳ ಬಗ್ಗೆ ಅರಿವಿಲ್ಲ. ಇದ್ದರೂ ಅವನ್ನು ಜಾರಿಗೊಳಿಸಲು ಸಾಧ್ಯವಿಲ್ಲದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎನ್ನುತ್ತಾರೆ.

ಬಹಳಷ್ಟು ಜನರಿಗೆ ದೂರು ಹೇಗೆ ಬರೆಯಬೇಕು ಎಂಬುದು ಗೊತ್ತಿಲ್ಲ. ಹಾಗಾಗಿ ಸಣ್ಣ ಸಣ್ಣ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸುವುದು, ಕಾರ್ಯಾಗಾರ ಮಾಡುವುದನ್ನು ಮಾಡುತ್ತಾ ಬಂದಿದ್ದೇವೆ. ಅಲ್ಲದೆ 2014ರ ನಂತರ ಬೆಂಗಳೂರಿನ ಮಾಸ್ಟರ್ ಪ್ಲಾನ್ ನವೀಕರಣಗೊಂಡಿಲ್ಲ. ಅದು ನವೀಕರಿಸುವ ಸಂದರ್ಭದಲ್ಲಿ ನಾವು ಹಲವು ಗುಂಪುಗಳ ಜೊತೆ ಸೇರಿಕೊಂಡು ಬೆಂಗಳೂರಿನ ಮಾಸ್ಟರ್ ಪ್ಲಾನ್ ಅನ್ನು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಹೇಗೆ ನೋಡಬೇಕು ಎಂಬ ವರದಿಯನ್ನು ಸಹ ನೀಡಿದ್ದೇವೆ ಎಂದರು.

ಯುವಜನರ ಜೊತೆ ಕೆಲಸ ಮಾಡಲು ಹಲವು ಸಂಸ್ಥೆಗಳ ಜೊತೆ ಸೇರಿ ಸಂವಿಧಾನ ಸಾಕ್ಷರತೆ, ಕ್ರಿಮಿನಲ್ ಜಸ್ಟೀಸ್, ಮೀಡಿಯಾ ಕ್ರಿಟಿಕ್ ಸೇರಿದಂತೆ ಹಲವು ಕೋರ್ಸ್‌ಗಳನ್ನು ಅಭಿವೃದ್ದಿಪಡಿಸಿದ್ದೇವೆ. ಮಹಿಳಾ ಚಳವಳಿ- ದಲಿತ ಚಳವಳಿ- ಕಾರ್ಮಿಕ ಚಳವಳಿ ಚಳವಳಿಗಳ ಆಂತರಿಕ ಅನುಸಂಧಾನದ ಚಳವಳಿಗಳ ಅಂತರ್‌ಸಂಬಂಧಗಳ ಬಗ್ಗೆ ಚರ್ಚಾಸರಣಿ ಆರಂಭವಾಗಿದೆ ಎಂದರು.

ತಾರತಮ್ಯದ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಭಾರತದಲ್ಲಿ ತಾರತಮ್ಯ ಎದುರಿಸಲು ಇರುವ ಕಾನೂನುಗಳಿವೆ, ಅವು ಹೇಗೆ ಕೆಲಸ ಮಾಡುತ್ತಿವೆ, ಕಾನೂನನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಕೆಲಸ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ಬೇರೆ ಬೇರೆ ಜನಚಳವಳಿಗಳಿಗೆ, ಕಾನೂನು ನೆರವು ಕೊಡುವುದು ಹೇಗೆ ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ವಿನಯ್ ಶ್ರೀನಿವಾಸ್.

ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...