Homeಚಳವಳಿಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

- Advertisement -
- Advertisement -

ಅಂಚಿನಲ್ಲಿರುವ, ತುಳಿತಕ್ಕೊಳಗಾದ ಸಮುದಾಯಗಳಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವ, ಜನಚಳವಳಿಗಳಿಗೆ ಒತ್ತಾಸೆಯಾಗಿ ನಿಲ್ಲುವ, ಸರ್ಕಾರದ ನೀತಿ ನಿರೂಪಣೆಗಳ ಸಾಧಕ ಬಾಧಕಗಳನ್ನು ಚರ್ಚಿಸುವ, ಸಂಶೋಧನೆಗೊಳಪಡಿಸುವ, ಮಾನವ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿರುವ ಮತ್ತು ಹತ್ತು ಹಲವು ಜನಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಬೆಂಗಳೂರಿನ ಪರ್ಯಾಯ ಕಾನೂನು ವೇದಿಕೆಗೆ (Alternative Law Forum- ALF) 22 ವರ್ಷ ತುಂಬಿದೆ.

ಈಗ ತನ್ನ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸಾಮಾಜಿಕ ಸುಧಾರಣೆಯ ಕೈಪಿಡಿ ಸಂವಿಧಾನ: ಮುಂದಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಒರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಮುರಳೀಧರ್‌ರವರು ವಿಷಯದ ಕುರಿತು ಮಾತನಾಡಲಿದ್ದಾರೆ. ಹೋರಾಟಗಾರ್ತಿ ಮತ್ತು ಚಿಂತಕಿ ದು.ಸರಸ್ವತಿಯವರು ಸಭೆಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮವು ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ALF ಕುರಿತು

ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಾನೂನಿಕ ಮೂಲಕ ಎದುರಿಸುವುದನ್ನು ಅಭ್ಯಸಿಸುವ ಮತ್ತು ಹೋರಾಟನಿರತ ಶೋಷಿತ ಸಮುದಾಯಗಳು, ಜನಚಳವಳಿಗೆ ನೆರವಾಗುವ ಕೆಲಸವನ್ನು ALF ಇಷ್ಟು ವರ್ಷಗಳಲ್ಲಿ ನಿರಂತರವಾಗಿ ಮಾಡುತ್ತಾ ಬಂದಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಮತ್ತು ಸಮಗ್ರ ಕಾನೂನು ಪುಸ್ತಕಗಳ, ಸಂಶೋಧನೆಗಳ, ವರದಿಗಳ ಬೃಹತ್ ಗ್ರಂಥಾಲಯ ಹೊಂದಿರುವ ALF ಇದುವರೆಗೆ 85ಕ್ಕೂ ಹೆಚ್ಚು ಸಾಮಾಜಿಕ-ರಾಜಕೀಯ ವಿಷಯಗಳ ಕುರಿತು ಚರ್ಚೆ ಸಂವಾದಗಳನ್ನು ಏರ್ಪಡಿಸಿದೆ. ಹತ್ತಾರು ಪ್ರಚಾರಾಂದೋಲನಗಳನ್ನು ನಡೆಸಿದೆ. ನೂರಾರು ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದೆ. ಸಹಸ್ರಾರು ಶೋಷಿತ ಜನರಿಗೆ ಕಾನೂನು ನೆರವು ನೀಡಿದ ಹೆಗ್ಗಳಿಕೆ ಹೊಂದಿದೆ.

ಸಲಿಂಗ ಪ್ರೇಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ವಿರುದ್ಧ ನಿರಂತರ ಪ್ರಚಾರಾಂದೋಲನವನ್ನು ALF ನಡೆಸಿದೆ. ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದೆ. ಅಲ್ಲದೆ ಆ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

ಅಲ್ಲದೆ ಮಹಿಳೆಯರ ಕಾನೂನು ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಆಂತರೀಕ ದೂರು ಸಮಿತಿಗಳ ಭಾಗವಾಗಿರುವ ಎಎಲ್ಎಫ್ ಅದರ ಬಗ್ಗೆ ತರಬೇತಿ ಶಿಬಿರಗಳನ್ನು ನಡೆಸಿದೆ. ಬಾಲ್ಯವಿವಾಹದ ವಿರುದ್ಧ ಅಭಿಯಾನ ನಡೆಸಿದೆ.

ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ಅವರ ಹಕ್ಕುಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಅವರು ಅನುಭವಿಸಿದ ಸಂಕಷ್ಟಗಳ ಕುರಿತು ಸಂಶೋಧನೆ ನಡೆಸಿ ಹಲವು ವರದಿಗಳನ್ನು ಹೊರತಂದಿದೆ.

ಸ್ಲಂ ಸಮುದಾಯಗಳ ಮತ್ತು ವಲಸೆ ಕಾರ್ಮಿಕರ ಹಕ್ಕುಗಳು, ಸಂವಿಧಾನದ ಅರಿವು, ಲಿಂಗ ಆಧಾರಿತ ಹಿಂಸೆ ಮತ್ತು ತಾರತಮ್ಯ, ದೌರ್ಜನ್ಯಗಳಲ್ಲಿನ ಸಂತ್ರಸ್ತರಿಗೆ ನ್ಯಾಯ, ಬೀದಿಬದಿ ವ್ಯಾಪಾರಿಗಳ ಹಕ್ಕುಗಳ ಕುರಿತು ಕಾರ್ಯಾಗಾರಗಳನ್ನು ALF ಹಮ್ಮಿಕೊಂಡಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲಿ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಕೋಮುಗಲಭೆಗಳ ಸಂತ್ರಸ್ತರ ಹಕ್ಕುಗಳಿಗಾಗಿ ಎಎಲ್‌ಎಫ್ ಕೆಲಸ ಮಾಡಿದೆ.

ಹಿಜಾಬ್ ವಿವಾದ ತಲೆತೋರಿದಾಗ ಎಎಲ್‌ಎಫ್ ಸಕ್ರಿಯ ಮಧ್ಯಪ್ರವೇಶ ಮಾಡಿದೆ. ಈ ವಿವಾದದಿಂದ ಉಂಟಾದ ಹೆಣ್ಣುಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಸಲ್ಲಿಸಿದೆ. ಹಿಜಾಬ್ ಅನ್ನು ಕೇವಲ ಧಾರ್ಮಿಕ ಸಮಸ್ಯೆಯಾಗಿ ಪರಿಗಣಿಸದೆ ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕು ಎಂದು ವಾದಿಸಿದೆ.

ಜನಚಳವಳಿಗಳಿಗೆ ಕಾನೂನು ನೆರವು ನೀಡುವುದಕ್ಕೆ ನಮ್ಮ ಆದ್ಯತೆ- ವಿನಯ್ ಶ್ರೀನಿವಾಸ್

ಸಂವಿಧಾನವು ನಮ್ಮ ದೇಶ ಹೇಗಿರಬೇಕೆಂಬ ಕನಸು ಮತ್ತು ಅದನ್ನು ಸಾಧಿಸುವ ದಾರಿಯಾಗಿದೆ. ಆದರೆ ಅದು ಹೆಚ್ಚಾಗಿ ಕೋರ್ಟುಗಳು ಮತ್ತು ವಕೀಲರ ಕೈಯಲ್ಲಿ ಸಿಕ್ಕಿಕೊಂಡಿದೆ ಹೊರತು ಜನಸಾಮಾನ್ಯರಿಗೆ ಅದರ ಮಹತ್ವ ಮತ್ತು ಮೌಲ್ಯಗಳ ಅರಿವಿಲ್ಲ. ಹಾಗಿದ್ದಾಗ ಅವರು ತಮ್ಮ ಹಕ್ಕುಗಳನ್ನು ಚಲಾಯಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಎಲ್‌ಎಫ್ ಸಂವಿಧಾನ ಅರಿವು ಪ್ರಚಾರಾಂದೋಲವನ್ನು ಹಮ್ಮಿಕೊಂಡಿದೆ ಮತ್ತು ಸಂವಿಧಾನ ಪೀಠಿಕೆ ಪುಸ್ತಕವನ್ನು ಹೊರತಂದಿದೆ ಎನ್ನುತ್ತಾರೆ ವಕೀಲರಾದ ವಿನಯ್ ಕೂರಗಾಯಲ ಶ್ರೀನಿವಾಸರವರು.

2014ರಲ್ಲಿ ಬೀದಿ ವ್ಯಾಪಾರಿಗಳ ಕುರಿತು ಕಾನೂನು ಬಂದಿತು. ಅದಕ್ಕೂ ಮುಂಚೆಯೇ ಮಸೂದೆಯನ್ನು ಹೇಗೆ ಬಲಪಡಿಸಬಹುದು ಎಂಬುದಕ್ಕೆ ನಮ್ಮ ಒಳನೋಟಗಳನ್ನು ನೀಡಿದ್ದೆವು. ಕಾನೂನು ಬಂದರೂ ಸಹ ಬೀದಿ ವ್ಯಾಪಾರಿಗಳಿಗೆ ಅದರ ಅರಿವಿರಲಿಲ್ಲ ಮತ್ತು ಅದು ಓದಲು ಕಷ್ಟವಿತ್ತು. ಆಗ ಎಎಲ್‌ಎಫ್‌ ಬೀದಿ ವ್ಯಾಪಾರಿಗಳ ಪರ ನಿಂತು ಕಾನೂನು ಅರಿವು ಶಿಬಿರಗಳನ್ನು ನಡೆಸಿದೆವು. ಅದೇ ರೀತಿ ಹಲವಾರು ಸಮುದಾಯಗಳಿಗೆ ತಮ್ಮನ್ನು ರಕ್ಷಿಸುವ ಕಾನೂನುಗಳ ಬಗ್ಗೆ ಅರಿವಿಲ್ಲ. ಇದ್ದರೂ ಅವನ್ನು ಜಾರಿಗೊಳಿಸಲು ಸಾಧ್ಯವಿಲ್ಲದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎನ್ನುತ್ತಾರೆ.

ಬಹಳಷ್ಟು ಜನರಿಗೆ ದೂರು ಹೇಗೆ ಬರೆಯಬೇಕು ಎಂಬುದು ಗೊತ್ತಿಲ್ಲ. ಹಾಗಾಗಿ ಸಣ್ಣ ಸಣ್ಣ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸುವುದು, ಕಾರ್ಯಾಗಾರ ಮಾಡುವುದನ್ನು ಮಾಡುತ್ತಾ ಬಂದಿದ್ದೇವೆ. ಅಲ್ಲದೆ 2014ರ ನಂತರ ಬೆಂಗಳೂರಿನ ಮಾಸ್ಟರ್ ಪ್ಲಾನ್ ನವೀಕರಣಗೊಂಡಿಲ್ಲ. ಅದು ನವೀಕರಿಸುವ ಸಂದರ್ಭದಲ್ಲಿ ನಾವು ಹಲವು ಗುಂಪುಗಳ ಜೊತೆ ಸೇರಿಕೊಂಡು ಬೆಂಗಳೂರಿನ ಮಾಸ್ಟರ್ ಪ್ಲಾನ್ ಅನ್ನು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಹೇಗೆ ನೋಡಬೇಕು ಎಂಬ ವರದಿಯನ್ನು ಸಹ ನೀಡಿದ್ದೇವೆ ಎಂದರು.

ಯುವಜನರ ಜೊತೆ ಕೆಲಸ ಮಾಡಲು ಹಲವು ಸಂಸ್ಥೆಗಳ ಜೊತೆ ಸೇರಿ ಸಂವಿಧಾನ ಸಾಕ್ಷರತೆ, ಕ್ರಿಮಿನಲ್ ಜಸ್ಟೀಸ್, ಮೀಡಿಯಾ ಕ್ರಿಟಿಕ್ ಸೇರಿದಂತೆ ಹಲವು ಕೋರ್ಸ್‌ಗಳನ್ನು ಅಭಿವೃದ್ದಿಪಡಿಸಿದ್ದೇವೆ. ಮಹಿಳಾ ಚಳವಳಿ- ದಲಿತ ಚಳವಳಿ- ಕಾರ್ಮಿಕ ಚಳವಳಿ ಚಳವಳಿಗಳ ಆಂತರಿಕ ಅನುಸಂಧಾನದ ಚಳವಳಿಗಳ ಅಂತರ್‌ಸಂಬಂಧಗಳ ಬಗ್ಗೆ ಚರ್ಚಾಸರಣಿ ಆರಂಭವಾಗಿದೆ ಎಂದರು.

ತಾರತಮ್ಯದ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಭಾರತದಲ್ಲಿ ತಾರತಮ್ಯ ಎದುರಿಸಲು ಇರುವ ಕಾನೂನುಗಳಿವೆ, ಅವು ಹೇಗೆ ಕೆಲಸ ಮಾಡುತ್ತಿವೆ, ಕಾನೂನನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಕೆಲಸ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ಬೇರೆ ಬೇರೆ ಜನಚಳವಳಿಗಳಿಗೆ, ಕಾನೂನು ನೆರವು ಕೊಡುವುದು ಹೇಗೆ ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ವಿನಯ್ ಶ್ರೀನಿವಾಸ್.

ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...