Homeಚಳವಳಿಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

- Advertisement -
- Advertisement -

ಅಂಚಿನಲ್ಲಿರುವ, ತುಳಿತಕ್ಕೊಳಗಾದ ಸಮುದಾಯಗಳಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವ, ಜನಚಳವಳಿಗಳಿಗೆ ಒತ್ತಾಸೆಯಾಗಿ ನಿಲ್ಲುವ, ಸರ್ಕಾರದ ನೀತಿ ನಿರೂಪಣೆಗಳ ಸಾಧಕ ಬಾಧಕಗಳನ್ನು ಚರ್ಚಿಸುವ, ಸಂಶೋಧನೆಗೊಳಪಡಿಸುವ, ಮಾನವ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿರುವ ಮತ್ತು ಹತ್ತು ಹಲವು ಜನಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಬೆಂಗಳೂರಿನ ಪರ್ಯಾಯ ಕಾನೂನು ವೇದಿಕೆಗೆ (Alternative Law Forum- ALF) 22 ವರ್ಷ ತುಂಬಿದೆ.

ಈಗ ತನ್ನ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸಾಮಾಜಿಕ ಸುಧಾರಣೆಯ ಕೈಪಿಡಿ ಸಂವಿಧಾನ: ಮುಂದಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಒರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಮುರಳೀಧರ್‌ರವರು ವಿಷಯದ ಕುರಿತು ಮಾತನಾಡಲಿದ್ದಾರೆ. ಹೋರಾಟಗಾರ್ತಿ ಮತ್ತು ಚಿಂತಕಿ ದು.ಸರಸ್ವತಿಯವರು ಸಭೆಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮವು ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ALF ಕುರಿತು

ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಾನೂನಿಕ ಮೂಲಕ ಎದುರಿಸುವುದನ್ನು ಅಭ್ಯಸಿಸುವ ಮತ್ತು ಹೋರಾಟನಿರತ ಶೋಷಿತ ಸಮುದಾಯಗಳು, ಜನಚಳವಳಿಗೆ ನೆರವಾಗುವ ಕೆಲಸವನ್ನು ALF ಇಷ್ಟು ವರ್ಷಗಳಲ್ಲಿ ನಿರಂತರವಾಗಿ ಮಾಡುತ್ತಾ ಬಂದಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಮತ್ತು ಸಮಗ್ರ ಕಾನೂನು ಪುಸ್ತಕಗಳ, ಸಂಶೋಧನೆಗಳ, ವರದಿಗಳ ಬೃಹತ್ ಗ್ರಂಥಾಲಯ ಹೊಂದಿರುವ ALF ಇದುವರೆಗೆ 85ಕ್ಕೂ ಹೆಚ್ಚು ಸಾಮಾಜಿಕ-ರಾಜಕೀಯ ವಿಷಯಗಳ ಕುರಿತು ಚರ್ಚೆ ಸಂವಾದಗಳನ್ನು ಏರ್ಪಡಿಸಿದೆ. ಹತ್ತಾರು ಪ್ರಚಾರಾಂದೋಲನಗಳನ್ನು ನಡೆಸಿದೆ. ನೂರಾರು ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದೆ. ಸಹಸ್ರಾರು ಶೋಷಿತ ಜನರಿಗೆ ಕಾನೂನು ನೆರವು ನೀಡಿದ ಹೆಗ್ಗಳಿಕೆ ಹೊಂದಿದೆ.

ಸಲಿಂಗ ಪ್ರೇಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ವಿರುದ್ಧ ನಿರಂತರ ಪ್ರಚಾರಾಂದೋಲನವನ್ನು ALF ನಡೆಸಿದೆ. ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದೆ. ಅಲ್ಲದೆ ಆ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

ಅಲ್ಲದೆ ಮಹಿಳೆಯರ ಕಾನೂನು ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಆಂತರೀಕ ದೂರು ಸಮಿತಿಗಳ ಭಾಗವಾಗಿರುವ ಎಎಲ್ಎಫ್ ಅದರ ಬಗ್ಗೆ ತರಬೇತಿ ಶಿಬಿರಗಳನ್ನು ನಡೆಸಿದೆ. ಬಾಲ್ಯವಿವಾಹದ ವಿರುದ್ಧ ಅಭಿಯಾನ ನಡೆಸಿದೆ.

ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ಅವರ ಹಕ್ಕುಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಅವರು ಅನುಭವಿಸಿದ ಸಂಕಷ್ಟಗಳ ಕುರಿತು ಸಂಶೋಧನೆ ನಡೆಸಿ ಹಲವು ವರದಿಗಳನ್ನು ಹೊರತಂದಿದೆ.

ಸ್ಲಂ ಸಮುದಾಯಗಳ ಮತ್ತು ವಲಸೆ ಕಾರ್ಮಿಕರ ಹಕ್ಕುಗಳು, ಸಂವಿಧಾನದ ಅರಿವು, ಲಿಂಗ ಆಧಾರಿತ ಹಿಂಸೆ ಮತ್ತು ತಾರತಮ್ಯ, ದೌರ್ಜನ್ಯಗಳಲ್ಲಿನ ಸಂತ್ರಸ್ತರಿಗೆ ನ್ಯಾಯ, ಬೀದಿಬದಿ ವ್ಯಾಪಾರಿಗಳ ಹಕ್ಕುಗಳ ಕುರಿತು ಕಾರ್ಯಾಗಾರಗಳನ್ನು ALF ಹಮ್ಮಿಕೊಂಡಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲಿ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಕೋಮುಗಲಭೆಗಳ ಸಂತ್ರಸ್ತರ ಹಕ್ಕುಗಳಿಗಾಗಿ ಎಎಲ್‌ಎಫ್ ಕೆಲಸ ಮಾಡಿದೆ.

ಹಿಜಾಬ್ ವಿವಾದ ತಲೆತೋರಿದಾಗ ಎಎಲ್‌ಎಫ್ ಸಕ್ರಿಯ ಮಧ್ಯಪ್ರವೇಶ ಮಾಡಿದೆ. ಈ ವಿವಾದದಿಂದ ಉಂಟಾದ ಹೆಣ್ಣುಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಸಲ್ಲಿಸಿದೆ. ಹಿಜಾಬ್ ಅನ್ನು ಕೇವಲ ಧಾರ್ಮಿಕ ಸಮಸ್ಯೆಯಾಗಿ ಪರಿಗಣಿಸದೆ ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕು ಎಂದು ವಾದಿಸಿದೆ.

ಜನಚಳವಳಿಗಳಿಗೆ ಕಾನೂನು ನೆರವು ನೀಡುವುದಕ್ಕೆ ನಮ್ಮ ಆದ್ಯತೆ- ವಿನಯ್ ಶ್ರೀನಿವಾಸ್

ಸಂವಿಧಾನವು ನಮ್ಮ ದೇಶ ಹೇಗಿರಬೇಕೆಂಬ ಕನಸು ಮತ್ತು ಅದನ್ನು ಸಾಧಿಸುವ ದಾರಿಯಾಗಿದೆ. ಆದರೆ ಅದು ಹೆಚ್ಚಾಗಿ ಕೋರ್ಟುಗಳು ಮತ್ತು ವಕೀಲರ ಕೈಯಲ್ಲಿ ಸಿಕ್ಕಿಕೊಂಡಿದೆ ಹೊರತು ಜನಸಾಮಾನ್ಯರಿಗೆ ಅದರ ಮಹತ್ವ ಮತ್ತು ಮೌಲ್ಯಗಳ ಅರಿವಿಲ್ಲ. ಹಾಗಿದ್ದಾಗ ಅವರು ತಮ್ಮ ಹಕ್ಕುಗಳನ್ನು ಚಲಾಯಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಎಲ್‌ಎಫ್ ಸಂವಿಧಾನ ಅರಿವು ಪ್ರಚಾರಾಂದೋಲವನ್ನು ಹಮ್ಮಿಕೊಂಡಿದೆ ಮತ್ತು ಸಂವಿಧಾನ ಪೀಠಿಕೆ ಪುಸ್ತಕವನ್ನು ಹೊರತಂದಿದೆ ಎನ್ನುತ್ತಾರೆ ವಕೀಲರಾದ ವಿನಯ್ ಕೂರಗಾಯಲ ಶ್ರೀನಿವಾಸರವರು.

2014ರಲ್ಲಿ ಬೀದಿ ವ್ಯಾಪಾರಿಗಳ ಕುರಿತು ಕಾನೂನು ಬಂದಿತು. ಅದಕ್ಕೂ ಮುಂಚೆಯೇ ಮಸೂದೆಯನ್ನು ಹೇಗೆ ಬಲಪಡಿಸಬಹುದು ಎಂಬುದಕ್ಕೆ ನಮ್ಮ ಒಳನೋಟಗಳನ್ನು ನೀಡಿದ್ದೆವು. ಕಾನೂನು ಬಂದರೂ ಸಹ ಬೀದಿ ವ್ಯಾಪಾರಿಗಳಿಗೆ ಅದರ ಅರಿವಿರಲಿಲ್ಲ ಮತ್ತು ಅದು ಓದಲು ಕಷ್ಟವಿತ್ತು. ಆಗ ಎಎಲ್‌ಎಫ್‌ ಬೀದಿ ವ್ಯಾಪಾರಿಗಳ ಪರ ನಿಂತು ಕಾನೂನು ಅರಿವು ಶಿಬಿರಗಳನ್ನು ನಡೆಸಿದೆವು. ಅದೇ ರೀತಿ ಹಲವಾರು ಸಮುದಾಯಗಳಿಗೆ ತಮ್ಮನ್ನು ರಕ್ಷಿಸುವ ಕಾನೂನುಗಳ ಬಗ್ಗೆ ಅರಿವಿಲ್ಲ. ಇದ್ದರೂ ಅವನ್ನು ಜಾರಿಗೊಳಿಸಲು ಸಾಧ್ಯವಿಲ್ಲದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎನ್ನುತ್ತಾರೆ.

ಬಹಳಷ್ಟು ಜನರಿಗೆ ದೂರು ಹೇಗೆ ಬರೆಯಬೇಕು ಎಂಬುದು ಗೊತ್ತಿಲ್ಲ. ಹಾಗಾಗಿ ಸಣ್ಣ ಸಣ್ಣ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸುವುದು, ಕಾರ್ಯಾಗಾರ ಮಾಡುವುದನ್ನು ಮಾಡುತ್ತಾ ಬಂದಿದ್ದೇವೆ. ಅಲ್ಲದೆ 2014ರ ನಂತರ ಬೆಂಗಳೂರಿನ ಮಾಸ್ಟರ್ ಪ್ಲಾನ್ ನವೀಕರಣಗೊಂಡಿಲ್ಲ. ಅದು ನವೀಕರಿಸುವ ಸಂದರ್ಭದಲ್ಲಿ ನಾವು ಹಲವು ಗುಂಪುಗಳ ಜೊತೆ ಸೇರಿಕೊಂಡು ಬೆಂಗಳೂರಿನ ಮಾಸ್ಟರ್ ಪ್ಲಾನ್ ಅನ್ನು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಹೇಗೆ ನೋಡಬೇಕು ಎಂಬ ವರದಿಯನ್ನು ಸಹ ನೀಡಿದ್ದೇವೆ ಎಂದರು.

ಯುವಜನರ ಜೊತೆ ಕೆಲಸ ಮಾಡಲು ಹಲವು ಸಂಸ್ಥೆಗಳ ಜೊತೆ ಸೇರಿ ಸಂವಿಧಾನ ಸಾಕ್ಷರತೆ, ಕ್ರಿಮಿನಲ್ ಜಸ್ಟೀಸ್, ಮೀಡಿಯಾ ಕ್ರಿಟಿಕ್ ಸೇರಿದಂತೆ ಹಲವು ಕೋರ್ಸ್‌ಗಳನ್ನು ಅಭಿವೃದ್ದಿಪಡಿಸಿದ್ದೇವೆ. ಮಹಿಳಾ ಚಳವಳಿ- ದಲಿತ ಚಳವಳಿ- ಕಾರ್ಮಿಕ ಚಳವಳಿ ಚಳವಳಿಗಳ ಆಂತರಿಕ ಅನುಸಂಧಾನದ ಚಳವಳಿಗಳ ಅಂತರ್‌ಸಂಬಂಧಗಳ ಬಗ್ಗೆ ಚರ್ಚಾಸರಣಿ ಆರಂಭವಾಗಿದೆ ಎಂದರು.

ತಾರತಮ್ಯದ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಭಾರತದಲ್ಲಿ ತಾರತಮ್ಯ ಎದುರಿಸಲು ಇರುವ ಕಾನೂನುಗಳಿವೆ, ಅವು ಹೇಗೆ ಕೆಲಸ ಮಾಡುತ್ತಿವೆ, ಕಾನೂನನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಕೆಲಸ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ಬೇರೆ ಬೇರೆ ಜನಚಳವಳಿಗಳಿಗೆ, ಕಾನೂನು ನೆರವು ಕೊಡುವುದು ಹೇಗೆ ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ವಿನಯ್ ಶ್ರೀನಿವಾಸ್.

ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...