Homeಚಳವಳಿಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

- Advertisement -
- Advertisement -

ಅಂಚಿನಲ್ಲಿರುವ, ತುಳಿತಕ್ಕೊಳಗಾದ ಸಮುದಾಯಗಳಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವ, ಜನಚಳವಳಿಗಳಿಗೆ ಒತ್ತಾಸೆಯಾಗಿ ನಿಲ್ಲುವ, ಸರ್ಕಾರದ ನೀತಿ ನಿರೂಪಣೆಗಳ ಸಾಧಕ ಬಾಧಕಗಳನ್ನು ಚರ್ಚಿಸುವ, ಸಂಶೋಧನೆಗೊಳಪಡಿಸುವ, ಮಾನವ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿರುವ ಮತ್ತು ಹತ್ತು ಹಲವು ಜನಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಬೆಂಗಳೂರಿನ ಪರ್ಯಾಯ ಕಾನೂನು ವೇದಿಕೆಗೆ (Alternative Law Forum- ALF) 22 ವರ್ಷ ತುಂಬಿದೆ.

ಈಗ ತನ್ನ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸಾಮಾಜಿಕ ಸುಧಾರಣೆಯ ಕೈಪಿಡಿ ಸಂವಿಧಾನ: ಮುಂದಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಒರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಮುರಳೀಧರ್‌ರವರು ವಿಷಯದ ಕುರಿತು ಮಾತನಾಡಲಿದ್ದಾರೆ. ಹೋರಾಟಗಾರ್ತಿ ಮತ್ತು ಚಿಂತಕಿ ದು.ಸರಸ್ವತಿಯವರು ಸಭೆಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮವು ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ALF ಕುರಿತು

ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಾನೂನಿಕ ಮೂಲಕ ಎದುರಿಸುವುದನ್ನು ಅಭ್ಯಸಿಸುವ ಮತ್ತು ಹೋರಾಟನಿರತ ಶೋಷಿತ ಸಮುದಾಯಗಳು, ಜನಚಳವಳಿಗೆ ನೆರವಾಗುವ ಕೆಲಸವನ್ನು ALF ಇಷ್ಟು ವರ್ಷಗಳಲ್ಲಿ ನಿರಂತರವಾಗಿ ಮಾಡುತ್ತಾ ಬಂದಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಮತ್ತು ಸಮಗ್ರ ಕಾನೂನು ಪುಸ್ತಕಗಳ, ಸಂಶೋಧನೆಗಳ, ವರದಿಗಳ ಬೃಹತ್ ಗ್ರಂಥಾಲಯ ಹೊಂದಿರುವ ALF ಇದುವರೆಗೆ 85ಕ್ಕೂ ಹೆಚ್ಚು ಸಾಮಾಜಿಕ-ರಾಜಕೀಯ ವಿಷಯಗಳ ಕುರಿತು ಚರ್ಚೆ ಸಂವಾದಗಳನ್ನು ಏರ್ಪಡಿಸಿದೆ. ಹತ್ತಾರು ಪ್ರಚಾರಾಂದೋಲನಗಳನ್ನು ನಡೆಸಿದೆ. ನೂರಾರು ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದೆ. ಸಹಸ್ರಾರು ಶೋಷಿತ ಜನರಿಗೆ ಕಾನೂನು ನೆರವು ನೀಡಿದ ಹೆಗ್ಗಳಿಕೆ ಹೊಂದಿದೆ.

ಸಲಿಂಗ ಪ್ರೇಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ವಿರುದ್ಧ ನಿರಂತರ ಪ್ರಚಾರಾಂದೋಲನವನ್ನು ALF ನಡೆಸಿದೆ. ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದೆ. ಅಲ್ಲದೆ ಆ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

ಅಲ್ಲದೆ ಮಹಿಳೆಯರ ಕಾನೂನು ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಆಂತರೀಕ ದೂರು ಸಮಿತಿಗಳ ಭಾಗವಾಗಿರುವ ಎಎಲ್ಎಫ್ ಅದರ ಬಗ್ಗೆ ತರಬೇತಿ ಶಿಬಿರಗಳನ್ನು ನಡೆಸಿದೆ. ಬಾಲ್ಯವಿವಾಹದ ವಿರುದ್ಧ ಅಭಿಯಾನ ನಡೆಸಿದೆ.

ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ಅವರ ಹಕ್ಕುಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಅವರು ಅನುಭವಿಸಿದ ಸಂಕಷ್ಟಗಳ ಕುರಿತು ಸಂಶೋಧನೆ ನಡೆಸಿ ಹಲವು ವರದಿಗಳನ್ನು ಹೊರತಂದಿದೆ.

ಸ್ಲಂ ಸಮುದಾಯಗಳ ಮತ್ತು ವಲಸೆ ಕಾರ್ಮಿಕರ ಹಕ್ಕುಗಳು, ಸಂವಿಧಾನದ ಅರಿವು, ಲಿಂಗ ಆಧಾರಿತ ಹಿಂಸೆ ಮತ್ತು ತಾರತಮ್ಯ, ದೌರ್ಜನ್ಯಗಳಲ್ಲಿನ ಸಂತ್ರಸ್ತರಿಗೆ ನ್ಯಾಯ, ಬೀದಿಬದಿ ವ್ಯಾಪಾರಿಗಳ ಹಕ್ಕುಗಳ ಕುರಿತು ಕಾರ್ಯಾಗಾರಗಳನ್ನು ALF ಹಮ್ಮಿಕೊಂಡಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲಿ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಕೋಮುಗಲಭೆಗಳ ಸಂತ್ರಸ್ತರ ಹಕ್ಕುಗಳಿಗಾಗಿ ಎಎಲ್‌ಎಫ್ ಕೆಲಸ ಮಾಡಿದೆ.

ಹಿಜಾಬ್ ವಿವಾದ ತಲೆತೋರಿದಾಗ ಎಎಲ್‌ಎಫ್ ಸಕ್ರಿಯ ಮಧ್ಯಪ್ರವೇಶ ಮಾಡಿದೆ. ಈ ವಿವಾದದಿಂದ ಉಂಟಾದ ಹೆಣ್ಣುಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಸಲ್ಲಿಸಿದೆ. ಹಿಜಾಬ್ ಅನ್ನು ಕೇವಲ ಧಾರ್ಮಿಕ ಸಮಸ್ಯೆಯಾಗಿ ಪರಿಗಣಿಸದೆ ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕು ಎಂದು ವಾದಿಸಿದೆ.

ಜನಚಳವಳಿಗಳಿಗೆ ಕಾನೂನು ನೆರವು ನೀಡುವುದಕ್ಕೆ ನಮ್ಮ ಆದ್ಯತೆ- ವಿನಯ್ ಶ್ರೀನಿವಾಸ್

ಸಂವಿಧಾನವು ನಮ್ಮ ದೇಶ ಹೇಗಿರಬೇಕೆಂಬ ಕನಸು ಮತ್ತು ಅದನ್ನು ಸಾಧಿಸುವ ದಾರಿಯಾಗಿದೆ. ಆದರೆ ಅದು ಹೆಚ್ಚಾಗಿ ಕೋರ್ಟುಗಳು ಮತ್ತು ವಕೀಲರ ಕೈಯಲ್ಲಿ ಸಿಕ್ಕಿಕೊಂಡಿದೆ ಹೊರತು ಜನಸಾಮಾನ್ಯರಿಗೆ ಅದರ ಮಹತ್ವ ಮತ್ತು ಮೌಲ್ಯಗಳ ಅರಿವಿಲ್ಲ. ಹಾಗಿದ್ದಾಗ ಅವರು ತಮ್ಮ ಹಕ್ಕುಗಳನ್ನು ಚಲಾಯಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಎಲ್‌ಎಫ್ ಸಂವಿಧಾನ ಅರಿವು ಪ್ರಚಾರಾಂದೋಲವನ್ನು ಹಮ್ಮಿಕೊಂಡಿದೆ ಮತ್ತು ಸಂವಿಧಾನ ಪೀಠಿಕೆ ಪುಸ್ತಕವನ್ನು ಹೊರತಂದಿದೆ ಎನ್ನುತ್ತಾರೆ ವಕೀಲರಾದ ವಿನಯ್ ಕೂರಗಾಯಲ ಶ್ರೀನಿವಾಸರವರು.

2014ರಲ್ಲಿ ಬೀದಿ ವ್ಯಾಪಾರಿಗಳ ಕುರಿತು ಕಾನೂನು ಬಂದಿತು. ಅದಕ್ಕೂ ಮುಂಚೆಯೇ ಮಸೂದೆಯನ್ನು ಹೇಗೆ ಬಲಪಡಿಸಬಹುದು ಎಂಬುದಕ್ಕೆ ನಮ್ಮ ಒಳನೋಟಗಳನ್ನು ನೀಡಿದ್ದೆವು. ಕಾನೂನು ಬಂದರೂ ಸಹ ಬೀದಿ ವ್ಯಾಪಾರಿಗಳಿಗೆ ಅದರ ಅರಿವಿರಲಿಲ್ಲ ಮತ್ತು ಅದು ಓದಲು ಕಷ್ಟವಿತ್ತು. ಆಗ ಎಎಲ್‌ಎಫ್‌ ಬೀದಿ ವ್ಯಾಪಾರಿಗಳ ಪರ ನಿಂತು ಕಾನೂನು ಅರಿವು ಶಿಬಿರಗಳನ್ನು ನಡೆಸಿದೆವು. ಅದೇ ರೀತಿ ಹಲವಾರು ಸಮುದಾಯಗಳಿಗೆ ತಮ್ಮನ್ನು ರಕ್ಷಿಸುವ ಕಾನೂನುಗಳ ಬಗ್ಗೆ ಅರಿವಿಲ್ಲ. ಇದ್ದರೂ ಅವನ್ನು ಜಾರಿಗೊಳಿಸಲು ಸಾಧ್ಯವಿಲ್ಲದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎನ್ನುತ್ತಾರೆ.

ಬಹಳಷ್ಟು ಜನರಿಗೆ ದೂರು ಹೇಗೆ ಬರೆಯಬೇಕು ಎಂಬುದು ಗೊತ್ತಿಲ್ಲ. ಹಾಗಾಗಿ ಸಣ್ಣ ಸಣ್ಣ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸುವುದು, ಕಾರ್ಯಾಗಾರ ಮಾಡುವುದನ್ನು ಮಾಡುತ್ತಾ ಬಂದಿದ್ದೇವೆ. ಅಲ್ಲದೆ 2014ರ ನಂತರ ಬೆಂಗಳೂರಿನ ಮಾಸ್ಟರ್ ಪ್ಲಾನ್ ನವೀಕರಣಗೊಂಡಿಲ್ಲ. ಅದು ನವೀಕರಿಸುವ ಸಂದರ್ಭದಲ್ಲಿ ನಾವು ಹಲವು ಗುಂಪುಗಳ ಜೊತೆ ಸೇರಿಕೊಂಡು ಬೆಂಗಳೂರಿನ ಮಾಸ್ಟರ್ ಪ್ಲಾನ್ ಅನ್ನು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಹೇಗೆ ನೋಡಬೇಕು ಎಂಬ ವರದಿಯನ್ನು ಸಹ ನೀಡಿದ್ದೇವೆ ಎಂದರು.

ಯುವಜನರ ಜೊತೆ ಕೆಲಸ ಮಾಡಲು ಹಲವು ಸಂಸ್ಥೆಗಳ ಜೊತೆ ಸೇರಿ ಸಂವಿಧಾನ ಸಾಕ್ಷರತೆ, ಕ್ರಿಮಿನಲ್ ಜಸ್ಟೀಸ್, ಮೀಡಿಯಾ ಕ್ರಿಟಿಕ್ ಸೇರಿದಂತೆ ಹಲವು ಕೋರ್ಸ್‌ಗಳನ್ನು ಅಭಿವೃದ್ದಿಪಡಿಸಿದ್ದೇವೆ. ಮಹಿಳಾ ಚಳವಳಿ- ದಲಿತ ಚಳವಳಿ- ಕಾರ್ಮಿಕ ಚಳವಳಿ ಚಳವಳಿಗಳ ಆಂತರಿಕ ಅನುಸಂಧಾನದ ಚಳವಳಿಗಳ ಅಂತರ್‌ಸಂಬಂಧಗಳ ಬಗ್ಗೆ ಚರ್ಚಾಸರಣಿ ಆರಂಭವಾಗಿದೆ ಎಂದರು.

ತಾರತಮ್ಯದ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಭಾರತದಲ್ಲಿ ತಾರತಮ್ಯ ಎದುರಿಸಲು ಇರುವ ಕಾನೂನುಗಳಿವೆ, ಅವು ಹೇಗೆ ಕೆಲಸ ಮಾಡುತ್ತಿವೆ, ಕಾನೂನನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಕೆಲಸ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ಬೇರೆ ಬೇರೆ ಜನಚಳವಳಿಗಳಿಗೆ, ಕಾನೂನು ನೆರವು ಕೊಡುವುದು ಹೇಗೆ ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ವಿನಯ್ ಶ್ರೀನಿವಾಸ್.

ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...