Homeಚಳವಳಿಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

- Advertisement -
- Advertisement -

ಅಂಚಿನಲ್ಲಿರುವ, ತುಳಿತಕ್ಕೊಳಗಾದ ಸಮುದಾಯಗಳಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವ, ಜನಚಳವಳಿಗಳಿಗೆ ಒತ್ತಾಸೆಯಾಗಿ ನಿಲ್ಲುವ, ಸರ್ಕಾರದ ನೀತಿ ನಿರೂಪಣೆಗಳ ಸಾಧಕ ಬಾಧಕಗಳನ್ನು ಚರ್ಚಿಸುವ, ಸಂಶೋಧನೆಗೊಳಪಡಿಸುವ, ಮಾನವ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿರುವ ಮತ್ತು ಹತ್ತು ಹಲವು ಜನಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಬೆಂಗಳೂರಿನ ಪರ್ಯಾಯ ಕಾನೂನು ವೇದಿಕೆಗೆ (Alternative Law Forum- ALF) 22 ವರ್ಷ ತುಂಬಿದೆ.

ಈಗ ತನ್ನ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸಾಮಾಜಿಕ ಸುಧಾರಣೆಯ ಕೈಪಿಡಿ ಸಂವಿಧಾನ: ಮುಂದಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಒರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಮುರಳೀಧರ್‌ರವರು ವಿಷಯದ ಕುರಿತು ಮಾತನಾಡಲಿದ್ದಾರೆ. ಹೋರಾಟಗಾರ್ತಿ ಮತ್ತು ಚಿಂತಕಿ ದು.ಸರಸ್ವತಿಯವರು ಸಭೆಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮವು ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ALF ಕುರಿತು

ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಾನೂನಿಕ ಮೂಲಕ ಎದುರಿಸುವುದನ್ನು ಅಭ್ಯಸಿಸುವ ಮತ್ತು ಹೋರಾಟನಿರತ ಶೋಷಿತ ಸಮುದಾಯಗಳು, ಜನಚಳವಳಿಗೆ ನೆರವಾಗುವ ಕೆಲಸವನ್ನು ALF ಇಷ್ಟು ವರ್ಷಗಳಲ್ಲಿ ನಿರಂತರವಾಗಿ ಮಾಡುತ್ತಾ ಬಂದಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಮತ್ತು ಸಮಗ್ರ ಕಾನೂನು ಪುಸ್ತಕಗಳ, ಸಂಶೋಧನೆಗಳ, ವರದಿಗಳ ಬೃಹತ್ ಗ್ರಂಥಾಲಯ ಹೊಂದಿರುವ ALF ಇದುವರೆಗೆ 85ಕ್ಕೂ ಹೆಚ್ಚು ಸಾಮಾಜಿಕ-ರಾಜಕೀಯ ವಿಷಯಗಳ ಕುರಿತು ಚರ್ಚೆ ಸಂವಾದಗಳನ್ನು ಏರ್ಪಡಿಸಿದೆ. ಹತ್ತಾರು ಪ್ರಚಾರಾಂದೋಲನಗಳನ್ನು ನಡೆಸಿದೆ. ನೂರಾರು ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದೆ. ಸಹಸ್ರಾರು ಶೋಷಿತ ಜನರಿಗೆ ಕಾನೂನು ನೆರವು ನೀಡಿದ ಹೆಗ್ಗಳಿಕೆ ಹೊಂದಿದೆ.

ಸಲಿಂಗ ಪ್ರೇಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ವಿರುದ್ಧ ನಿರಂತರ ಪ್ರಚಾರಾಂದೋಲನವನ್ನು ALF ನಡೆಸಿದೆ. ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದೆ. ಅಲ್ಲದೆ ಆ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

ಅಲ್ಲದೆ ಮಹಿಳೆಯರ ಕಾನೂನು ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಆಂತರೀಕ ದೂರು ಸಮಿತಿಗಳ ಭಾಗವಾಗಿರುವ ಎಎಲ್ಎಫ್ ಅದರ ಬಗ್ಗೆ ತರಬೇತಿ ಶಿಬಿರಗಳನ್ನು ನಡೆಸಿದೆ. ಬಾಲ್ಯವಿವಾಹದ ವಿರುದ್ಧ ಅಭಿಯಾನ ನಡೆಸಿದೆ.

ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ಅವರ ಹಕ್ಕುಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಅವರು ಅನುಭವಿಸಿದ ಸಂಕಷ್ಟಗಳ ಕುರಿತು ಸಂಶೋಧನೆ ನಡೆಸಿ ಹಲವು ವರದಿಗಳನ್ನು ಹೊರತಂದಿದೆ.

ಸ್ಲಂ ಸಮುದಾಯಗಳ ಮತ್ತು ವಲಸೆ ಕಾರ್ಮಿಕರ ಹಕ್ಕುಗಳು, ಸಂವಿಧಾನದ ಅರಿವು, ಲಿಂಗ ಆಧಾರಿತ ಹಿಂಸೆ ಮತ್ತು ತಾರತಮ್ಯ, ದೌರ್ಜನ್ಯಗಳಲ್ಲಿನ ಸಂತ್ರಸ್ತರಿಗೆ ನ್ಯಾಯ, ಬೀದಿಬದಿ ವ್ಯಾಪಾರಿಗಳ ಹಕ್ಕುಗಳ ಕುರಿತು ಕಾರ್ಯಾಗಾರಗಳನ್ನು ALF ಹಮ್ಮಿಕೊಂಡಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲಿ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಕೋಮುಗಲಭೆಗಳ ಸಂತ್ರಸ್ತರ ಹಕ್ಕುಗಳಿಗಾಗಿ ಎಎಲ್‌ಎಫ್ ಕೆಲಸ ಮಾಡಿದೆ.

ಹಿಜಾಬ್ ವಿವಾದ ತಲೆತೋರಿದಾಗ ಎಎಲ್‌ಎಫ್ ಸಕ್ರಿಯ ಮಧ್ಯಪ್ರವೇಶ ಮಾಡಿದೆ. ಈ ವಿವಾದದಿಂದ ಉಂಟಾದ ಹೆಣ್ಣುಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಸಲ್ಲಿಸಿದೆ. ಹಿಜಾಬ್ ಅನ್ನು ಕೇವಲ ಧಾರ್ಮಿಕ ಸಮಸ್ಯೆಯಾಗಿ ಪರಿಗಣಿಸದೆ ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕು ಎಂದು ವಾದಿಸಿದೆ.

ಜನಚಳವಳಿಗಳಿಗೆ ಕಾನೂನು ನೆರವು ನೀಡುವುದಕ್ಕೆ ನಮ್ಮ ಆದ್ಯತೆ- ವಿನಯ್ ಶ್ರೀನಿವಾಸ್

ಸಂವಿಧಾನವು ನಮ್ಮ ದೇಶ ಹೇಗಿರಬೇಕೆಂಬ ಕನಸು ಮತ್ತು ಅದನ್ನು ಸಾಧಿಸುವ ದಾರಿಯಾಗಿದೆ. ಆದರೆ ಅದು ಹೆಚ್ಚಾಗಿ ಕೋರ್ಟುಗಳು ಮತ್ತು ವಕೀಲರ ಕೈಯಲ್ಲಿ ಸಿಕ್ಕಿಕೊಂಡಿದೆ ಹೊರತು ಜನಸಾಮಾನ್ಯರಿಗೆ ಅದರ ಮಹತ್ವ ಮತ್ತು ಮೌಲ್ಯಗಳ ಅರಿವಿಲ್ಲ. ಹಾಗಿದ್ದಾಗ ಅವರು ತಮ್ಮ ಹಕ್ಕುಗಳನ್ನು ಚಲಾಯಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಎಲ್‌ಎಫ್ ಸಂವಿಧಾನ ಅರಿವು ಪ್ರಚಾರಾಂದೋಲವನ್ನು ಹಮ್ಮಿಕೊಂಡಿದೆ ಮತ್ತು ಸಂವಿಧಾನ ಪೀಠಿಕೆ ಪುಸ್ತಕವನ್ನು ಹೊರತಂದಿದೆ ಎನ್ನುತ್ತಾರೆ ವಕೀಲರಾದ ವಿನಯ್ ಕೂರಗಾಯಲ ಶ್ರೀನಿವಾಸರವರು.

2014ರಲ್ಲಿ ಬೀದಿ ವ್ಯಾಪಾರಿಗಳ ಕುರಿತು ಕಾನೂನು ಬಂದಿತು. ಅದಕ್ಕೂ ಮುಂಚೆಯೇ ಮಸೂದೆಯನ್ನು ಹೇಗೆ ಬಲಪಡಿಸಬಹುದು ಎಂಬುದಕ್ಕೆ ನಮ್ಮ ಒಳನೋಟಗಳನ್ನು ನೀಡಿದ್ದೆವು. ಕಾನೂನು ಬಂದರೂ ಸಹ ಬೀದಿ ವ್ಯಾಪಾರಿಗಳಿಗೆ ಅದರ ಅರಿವಿರಲಿಲ್ಲ ಮತ್ತು ಅದು ಓದಲು ಕಷ್ಟವಿತ್ತು. ಆಗ ಎಎಲ್‌ಎಫ್‌ ಬೀದಿ ವ್ಯಾಪಾರಿಗಳ ಪರ ನಿಂತು ಕಾನೂನು ಅರಿವು ಶಿಬಿರಗಳನ್ನು ನಡೆಸಿದೆವು. ಅದೇ ರೀತಿ ಹಲವಾರು ಸಮುದಾಯಗಳಿಗೆ ತಮ್ಮನ್ನು ರಕ್ಷಿಸುವ ಕಾನೂನುಗಳ ಬಗ್ಗೆ ಅರಿವಿಲ್ಲ. ಇದ್ದರೂ ಅವನ್ನು ಜಾರಿಗೊಳಿಸಲು ಸಾಧ್ಯವಿಲ್ಲದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎನ್ನುತ್ತಾರೆ.

ಬಹಳಷ್ಟು ಜನರಿಗೆ ದೂರು ಹೇಗೆ ಬರೆಯಬೇಕು ಎಂಬುದು ಗೊತ್ತಿಲ್ಲ. ಹಾಗಾಗಿ ಸಣ್ಣ ಸಣ್ಣ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸುವುದು, ಕಾರ್ಯಾಗಾರ ಮಾಡುವುದನ್ನು ಮಾಡುತ್ತಾ ಬಂದಿದ್ದೇವೆ. ಅಲ್ಲದೆ 2014ರ ನಂತರ ಬೆಂಗಳೂರಿನ ಮಾಸ್ಟರ್ ಪ್ಲಾನ್ ನವೀಕರಣಗೊಂಡಿಲ್ಲ. ಅದು ನವೀಕರಿಸುವ ಸಂದರ್ಭದಲ್ಲಿ ನಾವು ಹಲವು ಗುಂಪುಗಳ ಜೊತೆ ಸೇರಿಕೊಂಡು ಬೆಂಗಳೂರಿನ ಮಾಸ್ಟರ್ ಪ್ಲಾನ್ ಅನ್ನು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಹೇಗೆ ನೋಡಬೇಕು ಎಂಬ ವರದಿಯನ್ನು ಸಹ ನೀಡಿದ್ದೇವೆ ಎಂದರು.

ಯುವಜನರ ಜೊತೆ ಕೆಲಸ ಮಾಡಲು ಹಲವು ಸಂಸ್ಥೆಗಳ ಜೊತೆ ಸೇರಿ ಸಂವಿಧಾನ ಸಾಕ್ಷರತೆ, ಕ್ರಿಮಿನಲ್ ಜಸ್ಟೀಸ್, ಮೀಡಿಯಾ ಕ್ರಿಟಿಕ್ ಸೇರಿದಂತೆ ಹಲವು ಕೋರ್ಸ್‌ಗಳನ್ನು ಅಭಿವೃದ್ದಿಪಡಿಸಿದ್ದೇವೆ. ಮಹಿಳಾ ಚಳವಳಿ- ದಲಿತ ಚಳವಳಿ- ಕಾರ್ಮಿಕ ಚಳವಳಿ ಚಳವಳಿಗಳ ಆಂತರಿಕ ಅನುಸಂಧಾನದ ಚಳವಳಿಗಳ ಅಂತರ್‌ಸಂಬಂಧಗಳ ಬಗ್ಗೆ ಚರ್ಚಾಸರಣಿ ಆರಂಭವಾಗಿದೆ ಎಂದರು.

ತಾರತಮ್ಯದ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಭಾರತದಲ್ಲಿ ತಾರತಮ್ಯ ಎದುರಿಸಲು ಇರುವ ಕಾನೂನುಗಳಿವೆ, ಅವು ಹೇಗೆ ಕೆಲಸ ಮಾಡುತ್ತಿವೆ, ಕಾನೂನನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಕೆಲಸ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ಬೇರೆ ಬೇರೆ ಜನಚಳವಳಿಗಳಿಗೆ, ಕಾನೂನು ನೆರವು ಕೊಡುವುದು ಹೇಗೆ ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ವಿನಯ್ ಶ್ರೀನಿವಾಸ್.

ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...