Homeಚಳವಳಿಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಪರ್ಯಾಯ ಕಾನೂನು ವೇದಿಕೆಗೆ 22 ವರ್ಷ: ದಣಿವರಿಯದ ನಿರಂತರ ಕಾನೂನು ಹೋರಾಟ

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

- Advertisement -
- Advertisement -

ಅಂಚಿನಲ್ಲಿರುವ, ತುಳಿತಕ್ಕೊಳಗಾದ ಸಮುದಾಯಗಳಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವ, ಜನಚಳವಳಿಗಳಿಗೆ ಒತ್ತಾಸೆಯಾಗಿ ನಿಲ್ಲುವ, ಸರ್ಕಾರದ ನೀತಿ ನಿರೂಪಣೆಗಳ ಸಾಧಕ ಬಾಧಕಗಳನ್ನು ಚರ್ಚಿಸುವ, ಸಂಶೋಧನೆಗೊಳಪಡಿಸುವ, ಮಾನವ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿರುವ ಮತ್ತು ಹತ್ತು ಹಲವು ಜನಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಬೆಂಗಳೂರಿನ ಪರ್ಯಾಯ ಕಾನೂನು ವೇದಿಕೆಗೆ (Alternative Law Forum- ALF) 22 ವರ್ಷ ತುಂಬಿದೆ.

ಈಗ ತನ್ನ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸಾಮಾಜಿಕ ಸುಧಾರಣೆಯ ಕೈಪಿಡಿ ಸಂವಿಧಾನ: ಮುಂದಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಒರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಮುರಳೀಧರ್‌ರವರು ವಿಷಯದ ಕುರಿತು ಮಾತನಾಡಲಿದ್ದಾರೆ. ಹೋರಾಟಗಾರ್ತಿ ಮತ್ತು ಚಿಂತಕಿ ದು.ಸರಸ್ವತಿಯವರು ಸಭೆಯಲ್ಲಿ ಮಾತನಾಡಲಿದ್ದಾರೆ.

ಕಾರ್ಯಕ್ರಮವು ಡಿಸೆಂಬರ್ 17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ALF ಕುರಿತು

ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಾನೂನಿಕ ಮೂಲಕ ಎದುರಿಸುವುದನ್ನು ಅಭ್ಯಸಿಸುವ ಮತ್ತು ಹೋರಾಟನಿರತ ಶೋಷಿತ ಸಮುದಾಯಗಳು, ಜನಚಳವಳಿಗೆ ನೆರವಾಗುವ ಕೆಲಸವನ್ನು ALF ಇಷ್ಟು ವರ್ಷಗಳಲ್ಲಿ ನಿರಂತರವಾಗಿ ಮಾಡುತ್ತಾ ಬಂದಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಮತ್ತು ಸಮಗ್ರ ಕಾನೂನು ಪುಸ್ತಕಗಳ, ಸಂಶೋಧನೆಗಳ, ವರದಿಗಳ ಬೃಹತ್ ಗ್ರಂಥಾಲಯ ಹೊಂದಿರುವ ALF ಇದುವರೆಗೆ 85ಕ್ಕೂ ಹೆಚ್ಚು ಸಾಮಾಜಿಕ-ರಾಜಕೀಯ ವಿಷಯಗಳ ಕುರಿತು ಚರ್ಚೆ ಸಂವಾದಗಳನ್ನು ಏರ್ಪಡಿಸಿದೆ. ಹತ್ತಾರು ಪ್ರಚಾರಾಂದೋಲನಗಳನ್ನು ನಡೆಸಿದೆ. ನೂರಾರು ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದೆ. ಸಹಸ್ರಾರು ಶೋಷಿತ ಜನರಿಗೆ ಕಾನೂನು ನೆರವು ನೀಡಿದ ಹೆಗ್ಗಳಿಕೆ ಹೊಂದಿದೆ.

ಸಲಿಂಗ ಪ್ರೇಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ವಿರುದ್ಧ ನಿರಂತರ ಪ್ರಚಾರಾಂದೋಲನವನ್ನು ALF ನಡೆಸಿದೆ. ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದೆ. ಅಲ್ಲದೆ ಆ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಎಎಲ್‌ಎಫ್ ಆರಂಭದಿಂದಲೂ ಸ್ಲಂ ನಿವಾಸಿಗಳ ಹಕ್ಕುಗಳ ಪರವಾಗಿ ಕೆಲಸ ಮಾಡಿದೆ. ಅಕ್ರಮವಾಗಿ ಸ್ಲಂ ತೆರವು ಕಾರ್ಯಾಚರಣೆಗಳ ಸಂದರ್ಭದಲ್ಲಿ, ಇತರ ಸಮಸ್ಯೆಗಳಾದಾಗ ಅವರಿಗೆ ಕಾನೂನಿನ ನೆರವು ನೀಡಿದೆ.

ಅಲ್ಲದೆ ಮಹಿಳೆಯರ ಕಾನೂನು ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಆಂತರೀಕ ದೂರು ಸಮಿತಿಗಳ ಭಾಗವಾಗಿರುವ ಎಎಲ್ಎಫ್ ಅದರ ಬಗ್ಗೆ ತರಬೇತಿ ಶಿಬಿರಗಳನ್ನು ನಡೆಸಿದೆ. ಬಾಲ್ಯವಿವಾಹದ ವಿರುದ್ಧ ಅಭಿಯಾನ ನಡೆಸಿದೆ.

ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಸೇರಿದಂತೆ ಅವರ ಹಕ್ಕುಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಸಮಯದಲ್ಲಿ ಅವರು ಅನುಭವಿಸಿದ ಸಂಕಷ್ಟಗಳ ಕುರಿತು ಸಂಶೋಧನೆ ನಡೆಸಿ ಹಲವು ವರದಿಗಳನ್ನು ಹೊರತಂದಿದೆ.

ಸ್ಲಂ ಸಮುದಾಯಗಳ ಮತ್ತು ವಲಸೆ ಕಾರ್ಮಿಕರ ಹಕ್ಕುಗಳು, ಸಂವಿಧಾನದ ಅರಿವು, ಲಿಂಗ ಆಧಾರಿತ ಹಿಂಸೆ ಮತ್ತು ತಾರತಮ್ಯ, ದೌರ್ಜನ್ಯಗಳಲ್ಲಿನ ಸಂತ್ರಸ್ತರಿಗೆ ನ್ಯಾಯ, ಬೀದಿಬದಿ ವ್ಯಾಪಾರಿಗಳ ಹಕ್ಕುಗಳ ಕುರಿತು ಕಾರ್ಯಾಗಾರಗಳನ್ನು ALF ಹಮ್ಮಿಕೊಂಡಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲಿ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಕೋಮುಗಲಭೆಗಳ ಸಂತ್ರಸ್ತರ ಹಕ್ಕುಗಳಿಗಾಗಿ ಎಎಲ್‌ಎಫ್ ಕೆಲಸ ಮಾಡಿದೆ.

ಹಿಜಾಬ್ ವಿವಾದ ತಲೆತೋರಿದಾಗ ಎಎಲ್‌ಎಫ್ ಸಕ್ರಿಯ ಮಧ್ಯಪ್ರವೇಶ ಮಾಡಿದೆ. ಈ ವಿವಾದದಿಂದ ಉಂಟಾದ ಹೆಣ್ಣುಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಸಲ್ಲಿಸಿದೆ. ಹಿಜಾಬ್ ಅನ್ನು ಕೇವಲ ಧಾರ್ಮಿಕ ಸಮಸ್ಯೆಯಾಗಿ ಪರಿಗಣಿಸದೆ ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕು ಎಂದು ವಾದಿಸಿದೆ.

ಜನಚಳವಳಿಗಳಿಗೆ ಕಾನೂನು ನೆರವು ನೀಡುವುದಕ್ಕೆ ನಮ್ಮ ಆದ್ಯತೆ- ವಿನಯ್ ಶ್ರೀನಿವಾಸ್

ಸಂವಿಧಾನವು ನಮ್ಮ ದೇಶ ಹೇಗಿರಬೇಕೆಂಬ ಕನಸು ಮತ್ತು ಅದನ್ನು ಸಾಧಿಸುವ ದಾರಿಯಾಗಿದೆ. ಆದರೆ ಅದು ಹೆಚ್ಚಾಗಿ ಕೋರ್ಟುಗಳು ಮತ್ತು ವಕೀಲರ ಕೈಯಲ್ಲಿ ಸಿಕ್ಕಿಕೊಂಡಿದೆ ಹೊರತು ಜನಸಾಮಾನ್ಯರಿಗೆ ಅದರ ಮಹತ್ವ ಮತ್ತು ಮೌಲ್ಯಗಳ ಅರಿವಿಲ್ಲ. ಹಾಗಿದ್ದಾಗ ಅವರು ತಮ್ಮ ಹಕ್ಕುಗಳನ್ನು ಚಲಾಯಿಸಲು, ಸಂವಿಧಾನವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಎಎಲ್‌ಎಫ್ ಸಂವಿಧಾನ ಅರಿವು ಪ್ರಚಾರಾಂದೋಲವನ್ನು ಹಮ್ಮಿಕೊಂಡಿದೆ ಮತ್ತು ಸಂವಿಧಾನ ಪೀಠಿಕೆ ಪುಸ್ತಕವನ್ನು ಹೊರತಂದಿದೆ ಎನ್ನುತ್ತಾರೆ ವಕೀಲರಾದ ವಿನಯ್ ಕೂರಗಾಯಲ ಶ್ರೀನಿವಾಸರವರು.

2014ರಲ್ಲಿ ಬೀದಿ ವ್ಯಾಪಾರಿಗಳ ಕುರಿತು ಕಾನೂನು ಬಂದಿತು. ಅದಕ್ಕೂ ಮುಂಚೆಯೇ ಮಸೂದೆಯನ್ನು ಹೇಗೆ ಬಲಪಡಿಸಬಹುದು ಎಂಬುದಕ್ಕೆ ನಮ್ಮ ಒಳನೋಟಗಳನ್ನು ನೀಡಿದ್ದೆವು. ಕಾನೂನು ಬಂದರೂ ಸಹ ಬೀದಿ ವ್ಯಾಪಾರಿಗಳಿಗೆ ಅದರ ಅರಿವಿರಲಿಲ್ಲ ಮತ್ತು ಅದು ಓದಲು ಕಷ್ಟವಿತ್ತು. ಆಗ ಎಎಲ್‌ಎಫ್‌ ಬೀದಿ ವ್ಯಾಪಾರಿಗಳ ಪರ ನಿಂತು ಕಾನೂನು ಅರಿವು ಶಿಬಿರಗಳನ್ನು ನಡೆಸಿದೆವು. ಅದೇ ರೀತಿ ಹಲವಾರು ಸಮುದಾಯಗಳಿಗೆ ತಮ್ಮನ್ನು ರಕ್ಷಿಸುವ ಕಾನೂನುಗಳ ಬಗ್ಗೆ ಅರಿವಿಲ್ಲ. ಇದ್ದರೂ ಅವನ್ನು ಜಾರಿಗೊಳಿಸಲು ಸಾಧ್ಯವಿಲ್ಲದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎನ್ನುತ್ತಾರೆ.

ಬಹಳಷ್ಟು ಜನರಿಗೆ ದೂರು ಹೇಗೆ ಬರೆಯಬೇಕು ಎಂಬುದು ಗೊತ್ತಿಲ್ಲ. ಹಾಗಾಗಿ ಸಣ್ಣ ಸಣ್ಣ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸುವುದು, ಕಾರ್ಯಾಗಾರ ಮಾಡುವುದನ್ನು ಮಾಡುತ್ತಾ ಬಂದಿದ್ದೇವೆ. ಅಲ್ಲದೆ 2014ರ ನಂತರ ಬೆಂಗಳೂರಿನ ಮಾಸ್ಟರ್ ಪ್ಲಾನ್ ನವೀಕರಣಗೊಂಡಿಲ್ಲ. ಅದು ನವೀಕರಿಸುವ ಸಂದರ್ಭದಲ್ಲಿ ನಾವು ಹಲವು ಗುಂಪುಗಳ ಜೊತೆ ಸೇರಿಕೊಂಡು ಬೆಂಗಳೂರಿನ ಮಾಸ್ಟರ್ ಪ್ಲಾನ್ ಅನ್ನು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಹೇಗೆ ನೋಡಬೇಕು ಎಂಬ ವರದಿಯನ್ನು ಸಹ ನೀಡಿದ್ದೇವೆ ಎಂದರು.

ಯುವಜನರ ಜೊತೆ ಕೆಲಸ ಮಾಡಲು ಹಲವು ಸಂಸ್ಥೆಗಳ ಜೊತೆ ಸೇರಿ ಸಂವಿಧಾನ ಸಾಕ್ಷರತೆ, ಕ್ರಿಮಿನಲ್ ಜಸ್ಟೀಸ್, ಮೀಡಿಯಾ ಕ್ರಿಟಿಕ್ ಸೇರಿದಂತೆ ಹಲವು ಕೋರ್ಸ್‌ಗಳನ್ನು ಅಭಿವೃದ್ದಿಪಡಿಸಿದ್ದೇವೆ. ಮಹಿಳಾ ಚಳವಳಿ- ದಲಿತ ಚಳವಳಿ- ಕಾರ್ಮಿಕ ಚಳವಳಿ ಚಳವಳಿಗಳ ಆಂತರಿಕ ಅನುಸಂಧಾನದ ಚಳವಳಿಗಳ ಅಂತರ್‌ಸಂಬಂಧಗಳ ಬಗ್ಗೆ ಚರ್ಚಾಸರಣಿ ಆರಂಭವಾಗಿದೆ ಎಂದರು.

ತಾರತಮ್ಯದ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಭಾರತದಲ್ಲಿ ತಾರತಮ್ಯ ಎದುರಿಸಲು ಇರುವ ಕಾನೂನುಗಳಿವೆ, ಅವು ಹೇಗೆ ಕೆಲಸ ಮಾಡುತ್ತಿವೆ, ಕಾನೂನನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಕೆಲಸ ಮಾಡುತ್ತಿದ್ದೇವೆ. ಒಟ್ಟಿನಲ್ಲಿ ಬೇರೆ ಬೇರೆ ಜನಚಳವಳಿಗಳಿಗೆ, ಕಾನೂನು ನೆರವು ಕೊಡುವುದು ಹೇಗೆ ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ವಿನಯ್ ಶ್ರೀನಿವಾಸ್.

ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...