Homeಮುಖಪುಟದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರು ಹುದ್ದೆಯಿಂದ ವಜಾ!

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರು ಹುದ್ದೆಯಿಂದ ವಜಾ!

- Advertisement -
- Advertisement -

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಹುದ್ದೆಯಿಂದ ವಜಾಗೊಳಿಸಿದ್ದಾರೆ. ಈ ಹಿಂದೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದ ಎಎಪಿಯ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಅವರು ನಿಯಮ ಮೀರಿ ಹೆಚ್ಚುವರಿ ನೌಕರರನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೊರಡಿಸಿದ ಆದೇಶದಲ್ಲಿ, ದೆಹಲಿ ಮಹಿಳಾ ಆಯೋಗದ ಕಾಯ್ದೆಯ ಪ್ರಕಾರ, ಆಯೋಗಕ್ಕೆ 40 ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳಲು ಮಾತ್ರ ಅವಕಾಶವಿದೆ. ಆದರೆ, ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆಯಿಲ್ಲದೆ 223 ಹೊಸ ಹುದ್ದೆಗಳನ್ನು ರಚಿಸಲಾಗಿದೆ. ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುವ ಅಧಿಕಾರ ಆಯೋಗಕ್ಕೆ ಇಲ್ಲ. 2017ರ ಫೆಬ್ರವರಿಯಲ್ಲಿ ಅಂದಿನ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಿದ ತನಿಖಾ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ, ನೇಮಕಾತಿಗೂ ಮುನ್ನ ಅಗತ್ಯ ಹುದ್ದೆಗಳ ಮೌಲ್ಯಮಾಪನ ನಡೆಸಿಲ್ಲ. ಹಣಕಾಸು ಇಲಾಖೆಯ ಅನುಮೋದನೆಯಿಲ್ಲದೆ ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಉಂಟುಮಾಡುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಆಯೋಗಕ್ಕೆ ತಿಳಿಸಲಾಗಿದೆ ಎಂದು ಹೇಳಲಾಗಿದೆ.

ನೇಮಕಾತಿಗಳನ್ನು ನಿಗದಿತ ಕಾರ್ಯವಿಧಾನಗಳ ಪ್ರಕಾರ ಮಾಡಿಲ್ಲ. ಆಯೋಗದ ಸಿಬ್ಬಂದಿಗೆ ವೇತನ ಮತ್ತು ಭತ್ಯೆ ನಿಗದಿಪಡಿಸುವಾಗಲೂ ಕಾರ್ಯವಿಧಾನಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯ ಅನುಮೋದನೆ ಪಡೆಯುವಂತೆ ಸ್ವಾತಿ ಮಲಿವಾಲ್ ಅವರಿಗೆ ಪದೇ ಪದೇ ಸಲಹೆ ನೀಡಲಾಗಿತ್ತು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಎಎಪಿ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಪಾದಿತ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧಿತರಾಗಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಎಎಪಿಯಿಂದ ರಾಜ್ಯಸಭೆ ಸದಸ್ಯೆಯಾಗಿ ನಾಮ ನಿರ್ದೇಶನಗೊಳ್ಳುವ ಮುನ್ನ ಒಂಬತ್ತು ವರ್ಷಗಳ ಕಾಲ ಸ್ವಾತಿ ಮಲಿವಾಲ್ ಅವರು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥರಾಗಿದ್ದರು. ಸದ್ಯ ಸಮಿತಿಯ ಅಧ್ಯಕ್ಷರ ಹುದ್ದೆ ಖಾಲಿ ಇದೆ.

ಗವರ್ನರ್ ಕಚೇರಿಯ ಆದೇಶದಲ್ಲಿ ಉಲ್ಲೇಖಿಸಲಾದ ಆರೋಪಗಳಿಗೆ ಸಂಬಂಧಿಸಿದಂತೆ ಎಎಪಿ ಮತ್ತು ಸ್ವಾತಿ ಮಲಿವಾಲ್ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ. ಸಿಬ್ಬಂದಿಯನ್ನು ಹುದ್ದೆಯಿಂದ ವಜಾಗೊಳಿಸುವ ಆದೇಶ ಎಎಪಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಹೊಸ ತಿಕ್ಕಾಟಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳಿವೆ.

ಲೆಫ್ಟಿನೆಂಟ್ ಗವರ್ನರ್ ಕಚೇರಿಯು ತನ್ನ ಆಡಳಿತದ ಕ್ರಮಗಳನ್ನು ತಡೆಯುತ್ತಿದೆ. ಗವರ್ನರ್ ಕೇಂದ್ರದ ನೇಮಕವಾಗಿದ್ದು, ನಮಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ : ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...