Homeಮುಖಪುಟದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರು ಹುದ್ದೆಯಿಂದ ವಜಾ!

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರು ಹುದ್ದೆಯಿಂದ ವಜಾ!

- Advertisement -
- Advertisement -

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಹುದ್ದೆಯಿಂದ ವಜಾಗೊಳಿಸಿದ್ದಾರೆ. ಈ ಹಿಂದೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದ ಎಎಪಿಯ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಅವರು ನಿಯಮ ಮೀರಿ ಹೆಚ್ಚುವರಿ ನೌಕರರನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೊರಡಿಸಿದ ಆದೇಶದಲ್ಲಿ, ದೆಹಲಿ ಮಹಿಳಾ ಆಯೋಗದ ಕಾಯ್ದೆಯ ಪ್ರಕಾರ, ಆಯೋಗಕ್ಕೆ 40 ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳಲು ಮಾತ್ರ ಅವಕಾಶವಿದೆ. ಆದರೆ, ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆಯಿಲ್ಲದೆ 223 ಹೊಸ ಹುದ್ದೆಗಳನ್ನು ರಚಿಸಲಾಗಿದೆ. ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುವ ಅಧಿಕಾರ ಆಯೋಗಕ್ಕೆ ಇಲ್ಲ. 2017ರ ಫೆಬ್ರವರಿಯಲ್ಲಿ ಅಂದಿನ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಿದ ತನಿಖಾ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ, ನೇಮಕಾತಿಗೂ ಮುನ್ನ ಅಗತ್ಯ ಹುದ್ದೆಗಳ ಮೌಲ್ಯಮಾಪನ ನಡೆಸಿಲ್ಲ. ಹಣಕಾಸು ಇಲಾಖೆಯ ಅನುಮೋದನೆಯಿಲ್ಲದೆ ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಉಂಟುಮಾಡುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಆಯೋಗಕ್ಕೆ ತಿಳಿಸಲಾಗಿದೆ ಎಂದು ಹೇಳಲಾಗಿದೆ.

ನೇಮಕಾತಿಗಳನ್ನು ನಿಗದಿತ ಕಾರ್ಯವಿಧಾನಗಳ ಪ್ರಕಾರ ಮಾಡಿಲ್ಲ. ಆಯೋಗದ ಸಿಬ್ಬಂದಿಗೆ ವೇತನ ಮತ್ತು ಭತ್ಯೆ ನಿಗದಿಪಡಿಸುವಾಗಲೂ ಕಾರ್ಯವಿಧಾನಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯ ಅನುಮೋದನೆ ಪಡೆಯುವಂತೆ ಸ್ವಾತಿ ಮಲಿವಾಲ್ ಅವರಿಗೆ ಪದೇ ಪದೇ ಸಲಹೆ ನೀಡಲಾಗಿತ್ತು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಎಎಪಿ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಪಾದಿತ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧಿತರಾಗಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಎಎಪಿಯಿಂದ ರಾಜ್ಯಸಭೆ ಸದಸ್ಯೆಯಾಗಿ ನಾಮ ನಿರ್ದೇಶನಗೊಳ್ಳುವ ಮುನ್ನ ಒಂಬತ್ತು ವರ್ಷಗಳ ಕಾಲ ಸ್ವಾತಿ ಮಲಿವಾಲ್ ಅವರು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥರಾಗಿದ್ದರು. ಸದ್ಯ ಸಮಿತಿಯ ಅಧ್ಯಕ್ಷರ ಹುದ್ದೆ ಖಾಲಿ ಇದೆ.

ಗವರ್ನರ್ ಕಚೇರಿಯ ಆದೇಶದಲ್ಲಿ ಉಲ್ಲೇಖಿಸಲಾದ ಆರೋಪಗಳಿಗೆ ಸಂಬಂಧಿಸಿದಂತೆ ಎಎಪಿ ಮತ್ತು ಸ್ವಾತಿ ಮಲಿವಾಲ್ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ. ಸಿಬ್ಬಂದಿಯನ್ನು ಹುದ್ದೆಯಿಂದ ವಜಾಗೊಳಿಸುವ ಆದೇಶ ಎಎಪಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಹೊಸ ತಿಕ್ಕಾಟಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳಿವೆ.

ಲೆಫ್ಟಿನೆಂಟ್ ಗವರ್ನರ್ ಕಚೇರಿಯು ತನ್ನ ಆಡಳಿತದ ಕ್ರಮಗಳನ್ನು ತಡೆಯುತ್ತಿದೆ. ಗವರ್ನರ್ ಕೇಂದ್ರದ ನೇಮಕವಾಗಿದ್ದು, ನಮಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ : ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...