Homeಮುಖಪುಟಎಬಿಜಿ ಶಿಪ್‌ಯಾರ್ಡ್ ಮತ್ತು ನಿರ್ದೇಶಕರುಗಳಿಂದ 28 ಬ್ಯಾಂಕ್‌ಗಳಿಗೆ 22,842 ಕೋಟಿ ರೂ. ವಂಚನೆ: ಸಿಬಿಐ

ಎಬಿಜಿ ಶಿಪ್‌ಯಾರ್ಡ್ ಮತ್ತು ನಿರ್ದೇಶಕರುಗಳಿಂದ 28 ಬ್ಯಾಂಕ್‌ಗಳಿಗೆ 22,842 ಕೋಟಿ ರೂ. ವಂಚನೆ: ಸಿಬಿಐ

- Advertisement -
- Advertisement -

28 ಬ್ಯಾಂಕ್‌ಗಳಿಗೆ 22,842 ಕೋಟಿ ರೂ. ವಂಚಿಸಿದ ಅತಿದೊಡ್ಡ ಬ್ಯಾಂಕ್‌‌‌ ವಂಚನೆ ಆರೋಪದ ಮೇಲೆ ಎಬಿಜಿ ಶಿಪ್‌ಯಾರ್ಡ್ ಮತ್ತು ಅದರ ನಿರ್ದೇಶಕರಾದ ರಿಷಿ ಅಗರ್ವಾಲ್, ಸಂತಾನಂ ಮುತ್ತುಸ್ವಾಮಿ ಮತ್ತು ಅಶ್ವಿನಿ ಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು ಶನಿವಾರ ಪ್ರಕರಣ ದಾಖಲಿಸಿದೆ.

ಎಬಿಜಿ ಶಿಪ್‌ಯಾರ್ಡ್ ಲಿಮಿಟೆಡ್ ಎಬಿಜಿ ಗ್ರೂಪ್‌ನ ಪ್ರಮುಖ ಕಂಪನಿಯಾಗಿದ್ದು, ಇದು ಹಡಗು ನಿರ್ಮಾಣ ಮತ್ತು ಹಡಗು ದುರಸ್ತಿಯಲ್ಲಿ ತೊಡಗಿದೆ. ಗುಜರಾತಿನ ದಹೇಜ್ ಮತ್ತು ಸೂರತ್‌ನಲ್ಲಿ ಈ ಹಡಗುಕಟ್ಟೆಗಳಿವೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಪ್ರಕಾರ, ಕಂಪನಿಯು ಬ್ಯಾಂಕ್‌ಗೆ ₹ 2,925 ಕೋಟಿ, ಐಸಿಐಸಿಐ ಬ್ಯಾಂಕ್‌ಗೆ ₹ 7,089 ಕೋಟಿ, ಐಡಿಬಿಐ ಬ್ಯಾಂಕ್‌ಗೆ ₹ 3,634 ಕೋಟಿ, ಬ್ಯಾಂಕ್ ಆಫ್ ಬರೋಡಾಕ್ಕೆ ₹ 1,614 ಕೋಟಿ, ಪಿಎನ್‌ಬಿಗೆ ₹ 1,244 ಮತ್ತು ಐಒಬಿಗೆ ₹ 1,228 ಕೋಟಿ ಬಾಕಿ ಇದೆ. ಬ್ಯಾಂಕ್‌ಗಳು ಬಿಡುಗಡೆ ಮಾಡಿದ ಹಣವನ್ನು ಬಿಡುಗಡೆ ಮಾಡಿದ ಉದ್ದೇಶಗಳಿಗೆ ಬಿಟ್ಟು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ಸಿಬಿಐ ಹೇಳಿದೆ.

ಎಸ್‌ಬಿಐ ಬ್ಯಾಂಕ್ ಈ ಬಗ್ಗೆ ಮೊದಲ ಬಾರಿಗೆ ನವೆಂಬರ್ 8, 2019 ರಂದು ದೂರು ದಾಖಲಿಸಿತ್ತು, ಅದರ ಮೇಲೆ ಸಿಬಿಐ ಮಾರ್ಚ್ 12, 2020 ರಂದು ಕೆಲವು ಸ್ಪಷ್ಟೀಕರಣಗಳನ್ನು ಕೇಳಿತ್ತು.

ಅದೇ ವರ್ಷ ಆಗಸ್ಟ್‌ನಲ್ಲಿ ಎಸ್‌ಬಿಐ ಮತ್ತೇ ಹೊಸ ದೂರನ್ನು ಸಲ್ಲಿಸಿತ್ತು. ಒಂದೂವರೆ ವರ್ಷಗಳ ಕಾಲ “ಪರಿಶೀಲನೆ” ಮಾಡಿದ ನಂತರ, ಫೆಬ್ರವರಿ 7, 2022 ರಂದು ಎಫ್‌ಐಆರ್ ದಾಖಲಿಸುವ ದೂರಿನ ಮೇಲೆ ಸಿಬಿಐ ಕ್ರಮ ಕೈಗೊಂಡಿದೆ. ಕಂಪನಿಯು 28 ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲ ಸೌಲಭ್ಯಗಳನ್ನು ಪಡೆದಿದ್ದು, ಇದರಲ್ಲಿ ಎಸ್‌ಬಿಐ ₹ 2468.51 ಕೋಟಿ ಮಾನ್ಯತೆ ಹೊಂದಿದೆ ಎಂದು ಬ್ಯಾಂಕ್‌ ಹೇಳಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...