Homeಮುಖಪುಟದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಮೇಲಿವೆ 23 ಗಂಭೀರ ಪ್ರಕರಣಗಳು..

ದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಮೇಲಿವೆ 23 ಗಂಭೀರ ಪ್ರಕರಣಗಳು..

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ರಾಜ್ಯದ ಹೆಮ್ಮೆ ದೊರೆಸ್ವಾಮಿಯವರು ನಿತ್ಯ ನಿರಂತರ ಹೋರಾಟಗಾರರು. ಭ್ರಷ್ಟಾಚಾರದ ವಿರುದ್ಧ, ಬಡವರ ಪರವಾಗಿ ಕಳೆದ ಹಲವು ದಶಕಗಳಿಂದ ರಾಜ್ಯದ ಹತ್ತಾರು ಪ್ರಮುಖ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಯುವ ಸಮಾಜಕ್ಕೆ ದಾರಿದೀಪವಾದವರು ದೊರೆಸ್ವಾಮಿಯವರು.

ಆದರೆ, ಅವರು ಕೇಂದ್ರ ಸರ್ಕಾರದ ಸಿಎಎ ಕಾನೂನನ್ನು ವಿರೋಧಿಸಿದರು ಎಂಬ ಏಕೈಕ ಕಾರಣಕ್ಕೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಇಂದು ದೊರೆಸ್ವಾಮಿ ಅವರನ್ನು ಪಾಕಿಸ್ತಾನದ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಹೀಗೆಳೆಯುವ ಮೂಲಕ ಅವಮಾನಿಸಿದ್ದಾರೆ.

ಯತ್ನಾಳ್‌ನವರ ಕೀಳುಮಟ್ಟದ ಹೇಳಿಕೆಗೆ ರಾಜ್ಯದ್ಯಾಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಲವು ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿಗಳು ಪ್ರತಿಭಟನೆಗಳು ಆರಂಭವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಯತ್ನಾಳ್‌ರವರ ಬಗೆಗೆ ಆಕ್ರೋಶ ತೀವ್ರವಾಗಿದೆ. ಇಂತಹ ಸಂದರ್ಭದಲ್ಲಿ ದೊರೆಸ್ವಾಮಿಯವರನ್ನು ನಿಂದಿಸಿದ ಯತ್ನಾಳ್‌ ಮೇಲೆ ಎಂತೆಂಥ ಕ್ರಿಮಿನಲ್‌ ಪ್ರಕರಣಗಳಿವೆ ಎಂಬ ಸಂದೇಶವೊಂದು ವೈರಲ್‌ ಆಗಿದೆ. ಅದರ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಅದು ಸತ್ಯವೆಂದು ತಿಳಿದುಬಂದಿದ್ದು ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಯತ್ನಾಳ್‌ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಯೋಗ್ಯತಾ ಪಟ್ಟಿ (ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳ ಪಟ್ಟಿ) ಲಭ್ಯವಾಗಿದೆ.

(1) ಮೋಸ ಮತ್ತು ಆಸ್ತಿಯ ಅಪ್ರಾಮಾಣಿಕ ವಿತರಣೆಗೆ ಸಂಬಂಧಿಸಿದಂತೆ IPC Section-420 ಅಂದರೆ ಚೀಟಿಂಗ್ ಅಡಿಯಲ್ಲಿ 2 ಪ್ರಕರಣ ದಾಖಲಾಗಿದೆ.

(2) ಭದ್ರತಾ ಠೇವಣಿ ಸೇರಿದಂತೆ ಇತರೆ ವಿಚಾರಗಳಲ್ಲಿ ಮೋಸ ಎಸಗಿದ್ದಕ್ಕಾಗಿ IPC Section -467ರ ಅಡಿಯಲ್ಲಿ 2 ಪ್ರಕರಣ ದಾಖಲಿಸಲಾಗಿದೆ.

(3) ನಕಲಿ ಕರೆನ್ಸಿ ನೋಟುಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ IPC Section -489 C ಅಡಿಯಲ್ಲಿ 2 ಪ್ರಕರಣಗಳನ್ನು ದಾಖಲಿಸಲಾಗಿದೆ

(4) ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಅಥವಾ ಸಾಧನಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದಂತೆ IPC Section -324ರ ಅಡಿಯಲ್ಲಿ 1 ಪ್ರಕರಣ ದಾಖಲಿಸಲಾಗಿದೆ.

(5) ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ IPC Section-506ರ ಅಡಿಯಲ್ಲಿ 1 ಪ್ರಕರಣವನ್ನು ದಾಖಲಿಸಲಾಗಿದೆ.

(6) ಪ್ರತಿಕ್ರಿಯಾತ್ಮಕವಾಗಿ ಪ್ರಚೋದನೆ ಮಾಡಿದ್ದರೆ ನೀಡಲಾಗುವ ಶಿಕ್ಷೆಗೆ ಸಂಬಂಧಿಸಿದ IPC Section-109ರ ಅಡಿಯಲ್ಲಿ 3 ಪ್ರಕರಣಗಳನ್ನು ದಾಖಲು

(7) ನಕಲಿ ದಾಖಲೆಯನ್ನು ಸೃಷ್ಟಿಸಿ ನೈಜವಾಗಿ ಬಳಸಿದ್ದಕ್ಕಾಗಿ IPC Section-471ರ ಅಡಿಯಲ್ಲಿ 2 ಪ್ರಕರಣ ದಾಖಲಾಗಿದೆ.

(8) ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ IPC Section-323ರ ಅಡಿಯಲ್ಲಿ 2 ಪ್ರಕರಣ ದಾಖಲಾಗಿವೆ.

(9) ಅಪರಾಧ ಪ್ರಕರಣ ನಡೆದಾಗ ಅಬೆಟ್ಟರ್ಗೆ ಸಂಬಂಧಿಸಿದಂತೆ IPC Section -114ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(10) ಕ್ರಿಮಿನಲ್ ಪಿತೂರಿಯ ಶಿಕ್ಷೆಗೆ ಸಂಬಂಧಿಸಿದ IPC Section -120B ಅಡಿಯಲ್ಲಿ 2 ಪ್ರಕರಣ ದಾಖಲಾಗಿವೆ.

(11) ವಿಧಾನಸಭೆಯಲ್ಲಿ ಪ್ರತಿಯೊಬ್ಬ ಸದಸ್ಯರು ಎದುರಿಸಬೇಕಾದ ವಿಚಾರಣೆಯ ಸಂದರ್ಭದಲ್ಲಿ ಮಾಡಿರುವ ಅಪರಾಧಕ್ಕೆ IPC Section -149ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(12) ಕೃತ್ಯದ ಉದ್ದೇಶಕ್ಕಾಗಿ ಸುಳ್ಳು ವ್ಯಕ್ತಿತ್ವವನ್ನು ಸೃಷ್ಟಿಸಿದ್ದಕ್ಕಾಗಿ IPC Section-205ರ ಅಡಿಯಲ್ಲಿ 2 ಪ್ರರಕಣಗಳು ದಾಖಲಾಗಿವೆ.

(13) ಆಸ್ತಿಯನ್ನು ವಶಪಡಿಸಿಕೊಳ್ಳುವ ವಿಚಾರದಲ್ಲಿ ವಂಚನೆ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ IPC Section -207ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(14) ವರ್ಗವಣೆ ಪತ್ರದಲ್ಲಿ ಮೋಸ ಅಥವಾ ಅಪ್ರಾಮಾಣಿಕತೆ ತೋರಿಸಿದ ಆರೋಪಕ್ಕೆ ಸಂಬಂಧಿಸಿದಂತೆ IPC Section -423ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(15) ಟ್ರೇಡ್ ಮಾರ್ಕ್ಗಳಿಗೆ ಸಂಬಂಧಿಸಿದಂತೆ IPC Section -478ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(16) ಮಾನಹಾನಿ ಶಿಕ್ಷೆಗೆ ಸಂಬಂಧಿಸಿದಂತೆ IPC Section – 500ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(17) ಪ್ರಚೋದನೆಯ ಮೇಲೆ ಸ್ವಯಂಪ್ರೇರಿತವಾಗಿ ತೀವ್ರವಾದ ನೋವನ್ನುಂಟುಮಾಡುವ IPC Section -335ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(18) ಶಾಂತಿಯನ್ನು ಉಲ್ಲಂಘಿಸಲು ಮತ್ತು ಉದ್ದೇಶಪೂರ್ವಕವಾಗಿ ಪ್ರಚೋಧಿಸುವಂತ ಭಾಷಣ ಮಾಡಿದ್ದಕ್ಕೆ ಸಂಬಂಧಿಸಿದಂತೆ IPC Section -504ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(19) ಕಾನೂನು ಬಾಹೀರವಾಗಿ ವಿಧಾನಸಭೆ ಸದಸ್ಯರಾಗಿರುವುದಕ್ಕೆ ಸಂಬಂಧಿಸಿದಂತೆ IPC Section -143ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(20) ಉದ್ದೇಶಪೂರ್ವಕವಾಗಿ ಗಲಭೆ ಸೃಷ್ಟಿಗೆ ಸಂಬಂಧಿಸಿದಂತೆ IPC Section -147ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(21) ಇತರರ ಜೀವಕ್ಕೆ ಅಪಾಯವನ್ನುಂಟು ಮಾಡುವ ಕ್ರಿಯೆಗೆ ಸಂಬಂಧಿಸಿದ IPC Section -336 ಅಡಿಯಲ್ಲಿ 1 ಪ್ರಕರಣ

(22) ಇತರರ ವೈಯಕ್ತಿಕ ಸುರಕ್ಷತೆಗೆ ಅಥವಾ ಜೀವಕ್ಕೆ ಅಪಾಯಕಾರಿಯಾದ ಕೃತ್ಯದಿಂದ ಅವರಿಗೆ ನೋವನ್ನುಂಟುಮಾಡುವುದಕ್ಕೆ ಸಂಬಂಧಿಸಿದಂತೆ IPC Section -337ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(23) ಮಾನಹಾನಿಗೆ ಸಂಬಂಧಿಸಿದಂತೆ IPC Section -499ರ ಅಡಿಯಲ್ಲಿ ಒಂದು ಪ್ರಕರಣ.

ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 489 C ಐಪಿಸಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. 489 C ಸೆಕ್ಷನ್ ಅಸಲಿ ಎಂದು…

Posted by Dinesh Kumar Dinoo on Tuesday, February 25, 2020

ಇವಿಷ್ಟು ಯತ್ನಾಳ್‌ ಮೇಲಿರುವ ಪ್ರಕರಣಗಳು. ಇಷ್ಟು ಗಂಭೀರ ಪ್ರಕರಣಗಳನ್ನಿಟ್ಟುಕೊಂಡು ಇನ್ನೊಬ್ಬರ ಮೇಲೆ ಹೇಗೆ ಆರೋಪ ಮಾಡುತ್ತಾರೆ ಎಂದು ಜಾಲತಾಣಿಗರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ದೊರೆಸ್ವಾಮಿಯವರ ಮೇಲಿನ ಯತ್ನಾಳ್ ಹೇಳಿಕೆ ಖಂಡಿಸಿ ಇಂದು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...