Homeಮುಖಪುಟದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಮೇಲಿವೆ 23 ಗಂಭೀರ ಪ್ರಕರಣಗಳು..

ದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಮೇಲಿವೆ 23 ಗಂಭೀರ ಪ್ರಕರಣಗಳು..

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ರಾಜ್ಯದ ಹೆಮ್ಮೆ ದೊರೆಸ್ವಾಮಿಯವರು ನಿತ್ಯ ನಿರಂತರ ಹೋರಾಟಗಾರರು. ಭ್ರಷ್ಟಾಚಾರದ ವಿರುದ್ಧ, ಬಡವರ ಪರವಾಗಿ ಕಳೆದ ಹಲವು ದಶಕಗಳಿಂದ ರಾಜ್ಯದ ಹತ್ತಾರು ಪ್ರಮುಖ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಯುವ ಸಮಾಜಕ್ಕೆ ದಾರಿದೀಪವಾದವರು ದೊರೆಸ್ವಾಮಿಯವರು.

ಆದರೆ, ಅವರು ಕೇಂದ್ರ ಸರ್ಕಾರದ ಸಿಎಎ ಕಾನೂನನ್ನು ವಿರೋಧಿಸಿದರು ಎಂಬ ಏಕೈಕ ಕಾರಣಕ್ಕೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಇಂದು ದೊರೆಸ್ವಾಮಿ ಅವರನ್ನು ಪಾಕಿಸ್ತಾನದ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಹೀಗೆಳೆಯುವ ಮೂಲಕ ಅವಮಾನಿಸಿದ್ದಾರೆ.

ಯತ್ನಾಳ್‌ನವರ ಕೀಳುಮಟ್ಟದ ಹೇಳಿಕೆಗೆ ರಾಜ್ಯದ್ಯಾಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಲವು ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿಗಳು ಪ್ರತಿಭಟನೆಗಳು ಆರಂಭವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಯತ್ನಾಳ್‌ರವರ ಬಗೆಗೆ ಆಕ್ರೋಶ ತೀವ್ರವಾಗಿದೆ. ಇಂತಹ ಸಂದರ್ಭದಲ್ಲಿ ದೊರೆಸ್ವಾಮಿಯವರನ್ನು ನಿಂದಿಸಿದ ಯತ್ನಾಳ್‌ ಮೇಲೆ ಎಂತೆಂಥ ಕ್ರಿಮಿನಲ್‌ ಪ್ರಕರಣಗಳಿವೆ ಎಂಬ ಸಂದೇಶವೊಂದು ವೈರಲ್‌ ಆಗಿದೆ. ಅದರ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಅದು ಸತ್ಯವೆಂದು ತಿಳಿದುಬಂದಿದ್ದು ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಯತ್ನಾಳ್‌ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಯೋಗ್ಯತಾ ಪಟ್ಟಿ (ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳ ಪಟ್ಟಿ) ಲಭ್ಯವಾಗಿದೆ.

(1) ಮೋಸ ಮತ್ತು ಆಸ್ತಿಯ ಅಪ್ರಾಮಾಣಿಕ ವಿತರಣೆಗೆ ಸಂಬಂಧಿಸಿದಂತೆ IPC Section-420 ಅಂದರೆ ಚೀಟಿಂಗ್ ಅಡಿಯಲ್ಲಿ 2 ಪ್ರಕರಣ ದಾಖಲಾಗಿದೆ.

(2) ಭದ್ರತಾ ಠೇವಣಿ ಸೇರಿದಂತೆ ಇತರೆ ವಿಚಾರಗಳಲ್ಲಿ ಮೋಸ ಎಸಗಿದ್ದಕ್ಕಾಗಿ IPC Section -467ರ ಅಡಿಯಲ್ಲಿ 2 ಪ್ರಕರಣ ದಾಖಲಿಸಲಾಗಿದೆ.

(3) ನಕಲಿ ಕರೆನ್ಸಿ ನೋಟುಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ IPC Section -489 C ಅಡಿಯಲ್ಲಿ 2 ಪ್ರಕರಣಗಳನ್ನು ದಾಖಲಿಸಲಾಗಿದೆ

(4) ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಅಥವಾ ಸಾಧನಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದಂತೆ IPC Section -324ರ ಅಡಿಯಲ್ಲಿ 1 ಪ್ರಕರಣ ದಾಖಲಿಸಲಾಗಿದೆ.

(5) ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ IPC Section-506ರ ಅಡಿಯಲ್ಲಿ 1 ಪ್ರಕರಣವನ್ನು ದಾಖಲಿಸಲಾಗಿದೆ.

(6) ಪ್ರತಿಕ್ರಿಯಾತ್ಮಕವಾಗಿ ಪ್ರಚೋದನೆ ಮಾಡಿದ್ದರೆ ನೀಡಲಾಗುವ ಶಿಕ್ಷೆಗೆ ಸಂಬಂಧಿಸಿದ IPC Section-109ರ ಅಡಿಯಲ್ಲಿ 3 ಪ್ರಕರಣಗಳನ್ನು ದಾಖಲು

(7) ನಕಲಿ ದಾಖಲೆಯನ್ನು ಸೃಷ್ಟಿಸಿ ನೈಜವಾಗಿ ಬಳಸಿದ್ದಕ್ಕಾಗಿ IPC Section-471ರ ಅಡಿಯಲ್ಲಿ 2 ಪ್ರಕರಣ ದಾಖಲಾಗಿದೆ.

(8) ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ IPC Section-323ರ ಅಡಿಯಲ್ಲಿ 2 ಪ್ರಕರಣ ದಾಖಲಾಗಿವೆ.

(9) ಅಪರಾಧ ಪ್ರಕರಣ ನಡೆದಾಗ ಅಬೆಟ್ಟರ್ಗೆ ಸಂಬಂಧಿಸಿದಂತೆ IPC Section -114ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(10) ಕ್ರಿಮಿನಲ್ ಪಿತೂರಿಯ ಶಿಕ್ಷೆಗೆ ಸಂಬಂಧಿಸಿದ IPC Section -120B ಅಡಿಯಲ್ಲಿ 2 ಪ್ರಕರಣ ದಾಖಲಾಗಿವೆ.

(11) ವಿಧಾನಸಭೆಯಲ್ಲಿ ಪ್ರತಿಯೊಬ್ಬ ಸದಸ್ಯರು ಎದುರಿಸಬೇಕಾದ ವಿಚಾರಣೆಯ ಸಂದರ್ಭದಲ್ಲಿ ಮಾಡಿರುವ ಅಪರಾಧಕ್ಕೆ IPC Section -149ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(12) ಕೃತ್ಯದ ಉದ್ದೇಶಕ್ಕಾಗಿ ಸುಳ್ಳು ವ್ಯಕ್ತಿತ್ವವನ್ನು ಸೃಷ್ಟಿಸಿದ್ದಕ್ಕಾಗಿ IPC Section-205ರ ಅಡಿಯಲ್ಲಿ 2 ಪ್ರರಕಣಗಳು ದಾಖಲಾಗಿವೆ.

(13) ಆಸ್ತಿಯನ್ನು ವಶಪಡಿಸಿಕೊಳ್ಳುವ ವಿಚಾರದಲ್ಲಿ ವಂಚನೆ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ IPC Section -207ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(14) ವರ್ಗವಣೆ ಪತ್ರದಲ್ಲಿ ಮೋಸ ಅಥವಾ ಅಪ್ರಾಮಾಣಿಕತೆ ತೋರಿಸಿದ ಆರೋಪಕ್ಕೆ ಸಂಬಂಧಿಸಿದಂತೆ IPC Section -423ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(15) ಟ್ರೇಡ್ ಮಾರ್ಕ್ಗಳಿಗೆ ಸಂಬಂಧಿಸಿದಂತೆ IPC Section -478ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(16) ಮಾನಹಾನಿ ಶಿಕ್ಷೆಗೆ ಸಂಬಂಧಿಸಿದಂತೆ IPC Section – 500ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(17) ಪ್ರಚೋದನೆಯ ಮೇಲೆ ಸ್ವಯಂಪ್ರೇರಿತವಾಗಿ ತೀವ್ರವಾದ ನೋವನ್ನುಂಟುಮಾಡುವ IPC Section -335ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(18) ಶಾಂತಿಯನ್ನು ಉಲ್ಲಂಘಿಸಲು ಮತ್ತು ಉದ್ದೇಶಪೂರ್ವಕವಾಗಿ ಪ್ರಚೋಧಿಸುವಂತ ಭಾಷಣ ಮಾಡಿದ್ದಕ್ಕೆ ಸಂಬಂಧಿಸಿದಂತೆ IPC Section -504ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(19) ಕಾನೂನು ಬಾಹೀರವಾಗಿ ವಿಧಾನಸಭೆ ಸದಸ್ಯರಾಗಿರುವುದಕ್ಕೆ ಸಂಬಂಧಿಸಿದಂತೆ IPC Section -143ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(20) ಉದ್ದೇಶಪೂರ್ವಕವಾಗಿ ಗಲಭೆ ಸೃಷ್ಟಿಗೆ ಸಂಬಂಧಿಸಿದಂತೆ IPC Section -147ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(21) ಇತರರ ಜೀವಕ್ಕೆ ಅಪಾಯವನ್ನುಂಟು ಮಾಡುವ ಕ್ರಿಯೆಗೆ ಸಂಬಂಧಿಸಿದ IPC Section -336 ಅಡಿಯಲ್ಲಿ 1 ಪ್ರಕರಣ

(22) ಇತರರ ವೈಯಕ್ತಿಕ ಸುರಕ್ಷತೆಗೆ ಅಥವಾ ಜೀವಕ್ಕೆ ಅಪಾಯಕಾರಿಯಾದ ಕೃತ್ಯದಿಂದ ಅವರಿಗೆ ನೋವನ್ನುಂಟುಮಾಡುವುದಕ್ಕೆ ಸಂಬಂಧಿಸಿದಂತೆ IPC Section -337ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(23) ಮಾನಹಾನಿಗೆ ಸಂಬಂಧಿಸಿದಂತೆ IPC Section -499ರ ಅಡಿಯಲ್ಲಿ ಒಂದು ಪ್ರಕರಣ.

ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 489 C ಐಪಿಸಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. 489 C ಸೆಕ್ಷನ್ ಅಸಲಿ ಎಂದು…

Posted by Dinesh Kumar Dinoo on Tuesday, February 25, 2020

ಇವಿಷ್ಟು ಯತ್ನಾಳ್‌ ಮೇಲಿರುವ ಪ್ರಕರಣಗಳು. ಇಷ್ಟು ಗಂಭೀರ ಪ್ರಕರಣಗಳನ್ನಿಟ್ಟುಕೊಂಡು ಇನ್ನೊಬ್ಬರ ಮೇಲೆ ಹೇಗೆ ಆರೋಪ ಮಾಡುತ್ತಾರೆ ಎಂದು ಜಾಲತಾಣಿಗರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ದೊರೆಸ್ವಾಮಿಯವರ ಮೇಲಿನ ಯತ್ನಾಳ್ ಹೇಳಿಕೆ ಖಂಡಿಸಿ ಇಂದು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...