Homeಮುಖಪುಟರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

ರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

- Advertisement -
- Advertisement -

ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಕೊಡಿಸುವ ಆಮಿಷವೊಡ್ಡಿ ಏಜೆಂಟ್‌ಗಳು ಭಾರತದಿಂದ 100ಕ್ಕೂ ಅಧಿಕ ಮಂದಿಯನ್ನು ರಷ್ಯಾಗೆ ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಗುಜರಾತ್‌ ನಿವಾಸಿಯೋರ್ವ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ಡೊನೆಟ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿರುವ ಸುದ್ದಿ ಬಹಿರಂಗವಾಗಿದೆ.

ಗುಜರಾತ್‌ ರಾಜ್ಯದ ಸೂರತ್‌ ನಿವಾಸಿ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಮೃತರು. ರಷ್ಯಾದ ಕಟ್ಟಡದಲ್ಲಿ ಸೆಕ್ಯೂರಿಟಿ ಕೆಲಸಕ್ಕೆಂದು ಸಳ್ಳು ಹೇಳಿ ಇವರನ್ನು ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಡಿಸೆಂಬರ್ 2023ರಿಂದ ರಷ್ಯಾದಲ್ಲಿದ್ದರು. ಸಾವಿನ ಬಗ್ಗೆ ನಮಗೆ ಮಾಹಿತಿ ನೀಡಲಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಮಂಗುಕಿಯಾ ಅವರ ತಂದೆಯ ಪರವಾಗಿ ಏಜೆಂಟರೊಬ್ಬರು ಈ ತಿಂಗಳ ಆರಂಭದಲ್ಲಿ ಭಾರತೀಯ ದೂತಾವಾಸಕ್ಕೆ ಪತ್ರ ಬರೆದು ಆತನನ್ನು ಮನೆಗೆ ಕರೆತರಲು ಸಹಾಯವನ್ನು ಕೇಳಿದ್ದರು ಎಂದು ಹಿಂದೂ ವರದಿ ಮಾಡಿತ್ತು. ಫೆಬ್ರವರಿ 2ರಂದು ಮಂಗುಕಿಯಾ ಅವರ ತಂದೆಯ ಪರವಾಗಿ ಭಾರತೀಯ ಕಾನ್ಸುಲೇಟ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ಉಲ್ಲೇಖಿಸಿ ಅವರ ಮಗನ ಮರಳಲು ವ್ಯವಸ್ಥೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ರಷ್ಯಾದ ಸೈನ್ಯದೊಂದಿಗೆ ಕೆಲಸ ಮಾಡುವ ಭಾರತೀಯರನ್ನು ಬಿಡುಗಡೆಗಾಗಿ ರಷ್ಯಾದ ಅಧಿಕಾರಿಗಳನ್ನು ಸಂಪರ್ಕಿಸಿರುವುದಾಗಿ ಕೇಂದ್ರ ಸರ್ಕಾರ ಈ ಮೊದಲು ಹೇಳಿತ್ತು.

100ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ರಷ್ಯಾದ ಸೇನೆಯು ಭದ್ರತಾ ಸಹಾಯಕರನ್ನಾಗಿ ನೇಮಿಸಿಕೊಂಡಿದೆ ಮತ್ತು ಅವರಲ್ಲಿ ಕೆಲವರು ಅವರನ್ನು ಯುದ್ಧ ವಲಯಕ್ಕೆ ಕಳುಹಿಸುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ ರಷ್ಯಾದ ಪಡೆಗಳೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕರ್ನಾಟಕದ ಗುಲ್ಬರ್ಗದ ನಿವಾಸಿ ಸಮೀರ್ ಅಹ್ಮದ್ ಈ ಕುರಿತು ಮಾತನಾಡಿದ್ದು, ಮಂಗುಕಿಯಾ ಹೆಮಿಲ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಡ್ರೋನ್ ನಮ್ಮ ಮೇಲೆ ಸುತ್ತಾಡುವುದನ್ನು ನಾವು ನೋಡಿದ್ದೇವೆ. ನಾವು ಕಂದಕವನ್ನು ಅಗೆಯುತ್ತಿದ್ದೆವು. ಇದ್ದಕ್ಕಿದ್ದಂತೆ ನಮಗೆ ಏನೋ ಶಬ್ದ ಕೇಳಿಸಿತು. ನಾನು ಮತ್ತು ಇತರ ಇಬ್ಬರು ಭಾರತೀಯರು, ಇತರ ರಷ್ಯಾದ ಸೈನಿಕರು ಕಂದಕದಲ್ಲಿ ಅಡಗಿಕೊಂಡೆವು. ಕ್ಷಿಪಣಿಗಳು ಹೊಡೆದವು ಮತ್ತು ಭೂಮಿಯು ನಡುಗಿತು. ಸ್ವಲ್ಪ ಸಮಯದ ನಂತರ ನಾವು ಹೊರಬಂದಾಗ, ಹೆಮಿಲ್ ಮೃತಪಟ್ಟಿರುವುದನ್ನು ಕಂಡುಕೊಂಡೆವು. ಅವರ ಶವವನ್ನು ಟ್ರಕ್‌ಗೆ ಹಾಕಿದ್ದು ನಾನೇ ಎಂದು ಸಮೀರ್‌ ಅಹ್ಮದ್‌ ಹೇಳಿದ್ದಾರೆ.

ಮಂಗುಕಿಯಾ ಹೆಮಿಲ್ ದೇಹದ ಮೇಲಿನ ಗಾಯಗಳು ಮತ್ತು ಆತನ ರಕ್ತ ಸಿಕ್ತ ದೇಹಗಳನ್ನು ತೋರಿಸುವ ಪೋಟೋವನ್ನು ಇನ್ನೋರ್ವ ಭಾರತೀಯ ಸಿಬ್ಬಂದಿ ಹಂಚಿಕೊಂಡಿದ್ದಾರೆ. ಫೆಬ್ರವರಿ 21ರಂದು ದಾಳಿಗೆ ಒಳಗಾದ ಗುಂಪಿನಲ್ಲಿ ಮೃತ ಹೆಮಿಲ್ ಸೇರಿದಂತೆ ನಾಲ್ವರು ಭಾರತೀಯರು ಇದ್ದರು. ಹೆಮಿಲ್ ರಷ್ಯಾದ ಮಿಲಿಟರಿ ಕಮಾಂಡರ್‌ಗೆ ತುಂಬಾ ಹತ್ತಿರವಾಗಿದ್ದರು ಮತ್ತು ಅವರ ನಂಬಿಕಸ್ಥರಲ್ಲಿ ಹೆಮಿಲ್‌ ಕೂಡ ಇದ್ದರು. ಕಂದಕ ಅಗೆಯುತ್ತಿದ್ದಾಗ ವಾಯುದಾಳಿ ನಡೆದಿದೆ. ಕೊಲ್ಲಲ್ಪಟ್ಟವರಲ್ಲಿ ಒಬ್ಬ ನೇಪಾಳೀಯನೂ ಇದ್ದಾನೆ ಎಂದು ಮತ್ತೊಬ್ಬ ಭಾರತೀಯ ಸಿಬ್ಬಂದಿ ಹೇಳಿದ್ದಾರೆ.

ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಬಗ್ಗೆ ಮನವಿಯನ್ನು ಮಾಡಿದ್ದರೂ ನಮ್ಮ ಮನವಿಯನ್ನು ಪರಿಗಣಿಸಲಾಗಿಲ್ಲ  ಎಂದು ಭಾರತೀಯ ಪ್ರಜೆಗಳು ಆರೋಪಿಸಿದ್ದರು. ನಾವು ಭಾರತದಿಂದ ಒಟ್ಟಿಗೆ ಬಂದಿದ್ದೇವೆ. ಹೆಮಿಲ್ ನನ್ನ ಮುಂದೆ ಸತ್ತು ಬಿದ್ದಿದ್ದಾರೆ. ಅವರು ನಮ್ಮನ್ನು ಗಡಿಗೆ ಕಳುಹಿಸುತ್ತಾರೆ ಮತ್ತು ನಮ್ಮನ್ನು ಕೂಡ ಹತ್ಯೆ ಮಾಡಲಾಗುತ್ತದೆ ಎಂದು ನಾವು ಹೆದರುತ್ತೇವೆ. ನಮ್ಮನ್ನು ಬಿಡುಗಡೆ ಮಾಡಲು ನಾವು ರಷ್ಯಾದ ಕಮಾಂಡರ್‌ನ್ನು ಕೇಳಿದಾಗ, ನಾವು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ ಎಂದು ಅವರು ಹೇಳುತ್ತಾರೆ. ದಯವಿಟ್ಟು ನಮ್ಮನ್ನು ಉಳಿಸಿ ಎಂದು ಸಮೀರ್ ಅಹ್ಮದ್ ಮನವಿಯನ್ನು ಮಾಡಿದ್ದಾರೆ.

ನಮ್ಮನ್ನು ಸೇನೆಯ ಭದ್ರತಾ ಸಹಾಯಕರಾಗಿ ನೇಮಿಸಲಾಗಿದೆ ಆದರೆ ಅವರು ರಷ್ಯಾ-ಉಕ್ರೇನ್ ಗಡಿಯಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ನಮ್ಮ ಸುರಕ್ಷತೆ ಮತ್ತು ಭದ್ರತೆಗಾಗಿ ನಾವು ಭಯಪಡುತ್ತೇವೆ. ಪದೇ ಪದೇ ಮನವಿ ಮಾಡಿದರೂ ಸರ್ಕಾರ ನಮ್ಮನ್ನು ರಕ್ಷಿಸಲು ಏನನ್ನೂ ಮಾಡುತ್ತಿಲ್ಲ ಎಂದು ಭಾರತೀಯ ಸಿಬ್ಬಂದಿಗಳು ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...