Homeಮುಖಪುಟರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

ರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

- Advertisement -
- Advertisement -

ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಕೊಡಿಸುವ ಆಮಿಷವೊಡ್ಡಿ ಏಜೆಂಟ್‌ಗಳು ಭಾರತದಿಂದ 100ಕ್ಕೂ ಅಧಿಕ ಮಂದಿಯನ್ನು ರಷ್ಯಾಗೆ ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಗುಜರಾತ್‌ ನಿವಾಸಿಯೋರ್ವ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ಡೊನೆಟ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿರುವ ಸುದ್ದಿ ಬಹಿರಂಗವಾಗಿದೆ.

ಗುಜರಾತ್‌ ರಾಜ್ಯದ ಸೂರತ್‌ ನಿವಾಸಿ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಮೃತರು. ರಷ್ಯಾದ ಕಟ್ಟಡದಲ್ಲಿ ಸೆಕ್ಯೂರಿಟಿ ಕೆಲಸಕ್ಕೆಂದು ಸಳ್ಳು ಹೇಳಿ ಇವರನ್ನು ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಡಿಸೆಂಬರ್ 2023ರಿಂದ ರಷ್ಯಾದಲ್ಲಿದ್ದರು. ಸಾವಿನ ಬಗ್ಗೆ ನಮಗೆ ಮಾಹಿತಿ ನೀಡಲಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಮಂಗುಕಿಯಾ ಅವರ ತಂದೆಯ ಪರವಾಗಿ ಏಜೆಂಟರೊಬ್ಬರು ಈ ತಿಂಗಳ ಆರಂಭದಲ್ಲಿ ಭಾರತೀಯ ದೂತಾವಾಸಕ್ಕೆ ಪತ್ರ ಬರೆದು ಆತನನ್ನು ಮನೆಗೆ ಕರೆತರಲು ಸಹಾಯವನ್ನು ಕೇಳಿದ್ದರು ಎಂದು ಹಿಂದೂ ವರದಿ ಮಾಡಿತ್ತು. ಫೆಬ್ರವರಿ 2ರಂದು ಮಂಗುಕಿಯಾ ಅವರ ತಂದೆಯ ಪರವಾಗಿ ಭಾರತೀಯ ಕಾನ್ಸುಲೇಟ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ಉಲ್ಲೇಖಿಸಿ ಅವರ ಮಗನ ಮರಳಲು ವ್ಯವಸ್ಥೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ರಷ್ಯಾದ ಸೈನ್ಯದೊಂದಿಗೆ ಕೆಲಸ ಮಾಡುವ ಭಾರತೀಯರನ್ನು ಬಿಡುಗಡೆಗಾಗಿ ರಷ್ಯಾದ ಅಧಿಕಾರಿಗಳನ್ನು ಸಂಪರ್ಕಿಸಿರುವುದಾಗಿ ಕೇಂದ್ರ ಸರ್ಕಾರ ಈ ಮೊದಲು ಹೇಳಿತ್ತು.

100ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ರಷ್ಯಾದ ಸೇನೆಯು ಭದ್ರತಾ ಸಹಾಯಕರನ್ನಾಗಿ ನೇಮಿಸಿಕೊಂಡಿದೆ ಮತ್ತು ಅವರಲ್ಲಿ ಕೆಲವರು ಅವರನ್ನು ಯುದ್ಧ ವಲಯಕ್ಕೆ ಕಳುಹಿಸುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ ರಷ್ಯಾದ ಪಡೆಗಳೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕರ್ನಾಟಕದ ಗುಲ್ಬರ್ಗದ ನಿವಾಸಿ ಸಮೀರ್ ಅಹ್ಮದ್ ಈ ಕುರಿತು ಮಾತನಾಡಿದ್ದು, ಮಂಗುಕಿಯಾ ಹೆಮಿಲ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಡ್ರೋನ್ ನಮ್ಮ ಮೇಲೆ ಸುತ್ತಾಡುವುದನ್ನು ನಾವು ನೋಡಿದ್ದೇವೆ. ನಾವು ಕಂದಕವನ್ನು ಅಗೆಯುತ್ತಿದ್ದೆವು. ಇದ್ದಕ್ಕಿದ್ದಂತೆ ನಮಗೆ ಏನೋ ಶಬ್ದ ಕೇಳಿಸಿತು. ನಾನು ಮತ್ತು ಇತರ ಇಬ್ಬರು ಭಾರತೀಯರು, ಇತರ ರಷ್ಯಾದ ಸೈನಿಕರು ಕಂದಕದಲ್ಲಿ ಅಡಗಿಕೊಂಡೆವು. ಕ್ಷಿಪಣಿಗಳು ಹೊಡೆದವು ಮತ್ತು ಭೂಮಿಯು ನಡುಗಿತು. ಸ್ವಲ್ಪ ಸಮಯದ ನಂತರ ನಾವು ಹೊರಬಂದಾಗ, ಹೆಮಿಲ್ ಮೃತಪಟ್ಟಿರುವುದನ್ನು ಕಂಡುಕೊಂಡೆವು. ಅವರ ಶವವನ್ನು ಟ್ರಕ್‌ಗೆ ಹಾಕಿದ್ದು ನಾನೇ ಎಂದು ಸಮೀರ್‌ ಅಹ್ಮದ್‌ ಹೇಳಿದ್ದಾರೆ.

ಮಂಗುಕಿಯಾ ಹೆಮಿಲ್ ದೇಹದ ಮೇಲಿನ ಗಾಯಗಳು ಮತ್ತು ಆತನ ರಕ್ತ ಸಿಕ್ತ ದೇಹಗಳನ್ನು ತೋರಿಸುವ ಪೋಟೋವನ್ನು ಇನ್ನೋರ್ವ ಭಾರತೀಯ ಸಿಬ್ಬಂದಿ ಹಂಚಿಕೊಂಡಿದ್ದಾರೆ. ಫೆಬ್ರವರಿ 21ರಂದು ದಾಳಿಗೆ ಒಳಗಾದ ಗುಂಪಿನಲ್ಲಿ ಮೃತ ಹೆಮಿಲ್ ಸೇರಿದಂತೆ ನಾಲ್ವರು ಭಾರತೀಯರು ಇದ್ದರು. ಹೆಮಿಲ್ ರಷ್ಯಾದ ಮಿಲಿಟರಿ ಕಮಾಂಡರ್‌ಗೆ ತುಂಬಾ ಹತ್ತಿರವಾಗಿದ್ದರು ಮತ್ತು ಅವರ ನಂಬಿಕಸ್ಥರಲ್ಲಿ ಹೆಮಿಲ್‌ ಕೂಡ ಇದ್ದರು. ಕಂದಕ ಅಗೆಯುತ್ತಿದ್ದಾಗ ವಾಯುದಾಳಿ ನಡೆದಿದೆ. ಕೊಲ್ಲಲ್ಪಟ್ಟವರಲ್ಲಿ ಒಬ್ಬ ನೇಪಾಳೀಯನೂ ಇದ್ದಾನೆ ಎಂದು ಮತ್ತೊಬ್ಬ ಭಾರತೀಯ ಸಿಬ್ಬಂದಿ ಹೇಳಿದ್ದಾರೆ.

ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಬಗ್ಗೆ ಮನವಿಯನ್ನು ಮಾಡಿದ್ದರೂ ನಮ್ಮ ಮನವಿಯನ್ನು ಪರಿಗಣಿಸಲಾಗಿಲ್ಲ  ಎಂದು ಭಾರತೀಯ ಪ್ರಜೆಗಳು ಆರೋಪಿಸಿದ್ದರು. ನಾವು ಭಾರತದಿಂದ ಒಟ್ಟಿಗೆ ಬಂದಿದ್ದೇವೆ. ಹೆಮಿಲ್ ನನ್ನ ಮುಂದೆ ಸತ್ತು ಬಿದ್ದಿದ್ದಾರೆ. ಅವರು ನಮ್ಮನ್ನು ಗಡಿಗೆ ಕಳುಹಿಸುತ್ತಾರೆ ಮತ್ತು ನಮ್ಮನ್ನು ಕೂಡ ಹತ್ಯೆ ಮಾಡಲಾಗುತ್ತದೆ ಎಂದು ನಾವು ಹೆದರುತ್ತೇವೆ. ನಮ್ಮನ್ನು ಬಿಡುಗಡೆ ಮಾಡಲು ನಾವು ರಷ್ಯಾದ ಕಮಾಂಡರ್‌ನ್ನು ಕೇಳಿದಾಗ, ನಾವು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ ಎಂದು ಅವರು ಹೇಳುತ್ತಾರೆ. ದಯವಿಟ್ಟು ನಮ್ಮನ್ನು ಉಳಿಸಿ ಎಂದು ಸಮೀರ್ ಅಹ್ಮದ್ ಮನವಿಯನ್ನು ಮಾಡಿದ್ದಾರೆ.

ನಮ್ಮನ್ನು ಸೇನೆಯ ಭದ್ರತಾ ಸಹಾಯಕರಾಗಿ ನೇಮಿಸಲಾಗಿದೆ ಆದರೆ ಅವರು ರಷ್ಯಾ-ಉಕ್ರೇನ್ ಗಡಿಯಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ನಮ್ಮ ಸುರಕ್ಷತೆ ಮತ್ತು ಭದ್ರತೆಗಾಗಿ ನಾವು ಭಯಪಡುತ್ತೇವೆ. ಪದೇ ಪದೇ ಮನವಿ ಮಾಡಿದರೂ ಸರ್ಕಾರ ನಮ್ಮನ್ನು ರಕ್ಷಿಸಲು ಏನನ್ನೂ ಮಾಡುತ್ತಿಲ್ಲ ಎಂದು ಭಾರತೀಯ ಸಿಬ್ಬಂದಿಗಳು ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...