Homeಮುಖಪುಟರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

ರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

- Advertisement -
- Advertisement -

ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಕೊಡಿಸುವ ಆಮಿಷವೊಡ್ಡಿ ಏಜೆಂಟ್‌ಗಳು ಭಾರತದಿಂದ 100ಕ್ಕೂ ಅಧಿಕ ಮಂದಿಯನ್ನು ರಷ್ಯಾಗೆ ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಗುಜರಾತ್‌ ನಿವಾಸಿಯೋರ್ವ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ಡೊನೆಟ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿರುವ ಸುದ್ದಿ ಬಹಿರಂಗವಾಗಿದೆ.

ಗುಜರಾತ್‌ ರಾಜ್ಯದ ಸೂರತ್‌ ನಿವಾಸಿ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಮೃತರು. ರಷ್ಯಾದ ಕಟ್ಟಡದಲ್ಲಿ ಸೆಕ್ಯೂರಿಟಿ ಕೆಲಸಕ್ಕೆಂದು ಸಳ್ಳು ಹೇಳಿ ಇವರನ್ನು ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಡಿಸೆಂಬರ್ 2023ರಿಂದ ರಷ್ಯಾದಲ್ಲಿದ್ದರು. ಸಾವಿನ ಬಗ್ಗೆ ನಮಗೆ ಮಾಹಿತಿ ನೀಡಲಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಮಂಗುಕಿಯಾ ಅವರ ತಂದೆಯ ಪರವಾಗಿ ಏಜೆಂಟರೊಬ್ಬರು ಈ ತಿಂಗಳ ಆರಂಭದಲ್ಲಿ ಭಾರತೀಯ ದೂತಾವಾಸಕ್ಕೆ ಪತ್ರ ಬರೆದು ಆತನನ್ನು ಮನೆಗೆ ಕರೆತರಲು ಸಹಾಯವನ್ನು ಕೇಳಿದ್ದರು ಎಂದು ಹಿಂದೂ ವರದಿ ಮಾಡಿತ್ತು. ಫೆಬ್ರವರಿ 2ರಂದು ಮಂಗುಕಿಯಾ ಅವರ ತಂದೆಯ ಪರವಾಗಿ ಭಾರತೀಯ ಕಾನ್ಸುಲೇಟ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ಉಲ್ಲೇಖಿಸಿ ಅವರ ಮಗನ ಮರಳಲು ವ್ಯವಸ್ಥೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ರಷ್ಯಾದ ಸೈನ್ಯದೊಂದಿಗೆ ಕೆಲಸ ಮಾಡುವ ಭಾರತೀಯರನ್ನು ಬಿಡುಗಡೆಗಾಗಿ ರಷ್ಯಾದ ಅಧಿಕಾರಿಗಳನ್ನು ಸಂಪರ್ಕಿಸಿರುವುದಾಗಿ ಕೇಂದ್ರ ಸರ್ಕಾರ ಈ ಮೊದಲು ಹೇಳಿತ್ತು.

100ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ರಷ್ಯಾದ ಸೇನೆಯು ಭದ್ರತಾ ಸಹಾಯಕರನ್ನಾಗಿ ನೇಮಿಸಿಕೊಂಡಿದೆ ಮತ್ತು ಅವರಲ್ಲಿ ಕೆಲವರು ಅವರನ್ನು ಯುದ್ಧ ವಲಯಕ್ಕೆ ಕಳುಹಿಸುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ ರಷ್ಯಾದ ಪಡೆಗಳೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕರ್ನಾಟಕದ ಗುಲ್ಬರ್ಗದ ನಿವಾಸಿ ಸಮೀರ್ ಅಹ್ಮದ್ ಈ ಕುರಿತು ಮಾತನಾಡಿದ್ದು, ಮಂಗುಕಿಯಾ ಹೆಮಿಲ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಡ್ರೋನ್ ನಮ್ಮ ಮೇಲೆ ಸುತ್ತಾಡುವುದನ್ನು ನಾವು ನೋಡಿದ್ದೇವೆ. ನಾವು ಕಂದಕವನ್ನು ಅಗೆಯುತ್ತಿದ್ದೆವು. ಇದ್ದಕ್ಕಿದ್ದಂತೆ ನಮಗೆ ಏನೋ ಶಬ್ದ ಕೇಳಿಸಿತು. ನಾನು ಮತ್ತು ಇತರ ಇಬ್ಬರು ಭಾರತೀಯರು, ಇತರ ರಷ್ಯಾದ ಸೈನಿಕರು ಕಂದಕದಲ್ಲಿ ಅಡಗಿಕೊಂಡೆವು. ಕ್ಷಿಪಣಿಗಳು ಹೊಡೆದವು ಮತ್ತು ಭೂಮಿಯು ನಡುಗಿತು. ಸ್ವಲ್ಪ ಸಮಯದ ನಂತರ ನಾವು ಹೊರಬಂದಾಗ, ಹೆಮಿಲ್ ಮೃತಪಟ್ಟಿರುವುದನ್ನು ಕಂಡುಕೊಂಡೆವು. ಅವರ ಶವವನ್ನು ಟ್ರಕ್‌ಗೆ ಹಾಕಿದ್ದು ನಾನೇ ಎಂದು ಸಮೀರ್‌ ಅಹ್ಮದ್‌ ಹೇಳಿದ್ದಾರೆ.

ಮಂಗುಕಿಯಾ ಹೆಮಿಲ್ ದೇಹದ ಮೇಲಿನ ಗಾಯಗಳು ಮತ್ತು ಆತನ ರಕ್ತ ಸಿಕ್ತ ದೇಹಗಳನ್ನು ತೋರಿಸುವ ಪೋಟೋವನ್ನು ಇನ್ನೋರ್ವ ಭಾರತೀಯ ಸಿಬ್ಬಂದಿ ಹಂಚಿಕೊಂಡಿದ್ದಾರೆ. ಫೆಬ್ರವರಿ 21ರಂದು ದಾಳಿಗೆ ಒಳಗಾದ ಗುಂಪಿನಲ್ಲಿ ಮೃತ ಹೆಮಿಲ್ ಸೇರಿದಂತೆ ನಾಲ್ವರು ಭಾರತೀಯರು ಇದ್ದರು. ಹೆಮಿಲ್ ರಷ್ಯಾದ ಮಿಲಿಟರಿ ಕಮಾಂಡರ್‌ಗೆ ತುಂಬಾ ಹತ್ತಿರವಾಗಿದ್ದರು ಮತ್ತು ಅವರ ನಂಬಿಕಸ್ಥರಲ್ಲಿ ಹೆಮಿಲ್‌ ಕೂಡ ಇದ್ದರು. ಕಂದಕ ಅಗೆಯುತ್ತಿದ್ದಾಗ ವಾಯುದಾಳಿ ನಡೆದಿದೆ. ಕೊಲ್ಲಲ್ಪಟ್ಟವರಲ್ಲಿ ಒಬ್ಬ ನೇಪಾಳೀಯನೂ ಇದ್ದಾನೆ ಎಂದು ಮತ್ತೊಬ್ಬ ಭಾರತೀಯ ಸಿಬ್ಬಂದಿ ಹೇಳಿದ್ದಾರೆ.

ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಬಗ್ಗೆ ಮನವಿಯನ್ನು ಮಾಡಿದ್ದರೂ ನಮ್ಮ ಮನವಿಯನ್ನು ಪರಿಗಣಿಸಲಾಗಿಲ್ಲ  ಎಂದು ಭಾರತೀಯ ಪ್ರಜೆಗಳು ಆರೋಪಿಸಿದ್ದರು. ನಾವು ಭಾರತದಿಂದ ಒಟ್ಟಿಗೆ ಬಂದಿದ್ದೇವೆ. ಹೆಮಿಲ್ ನನ್ನ ಮುಂದೆ ಸತ್ತು ಬಿದ್ದಿದ್ದಾರೆ. ಅವರು ನಮ್ಮನ್ನು ಗಡಿಗೆ ಕಳುಹಿಸುತ್ತಾರೆ ಮತ್ತು ನಮ್ಮನ್ನು ಕೂಡ ಹತ್ಯೆ ಮಾಡಲಾಗುತ್ತದೆ ಎಂದು ನಾವು ಹೆದರುತ್ತೇವೆ. ನಮ್ಮನ್ನು ಬಿಡುಗಡೆ ಮಾಡಲು ನಾವು ರಷ್ಯಾದ ಕಮಾಂಡರ್‌ನ್ನು ಕೇಳಿದಾಗ, ನಾವು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ ಎಂದು ಅವರು ಹೇಳುತ್ತಾರೆ. ದಯವಿಟ್ಟು ನಮ್ಮನ್ನು ಉಳಿಸಿ ಎಂದು ಸಮೀರ್ ಅಹ್ಮದ್ ಮನವಿಯನ್ನು ಮಾಡಿದ್ದಾರೆ.

ನಮ್ಮನ್ನು ಸೇನೆಯ ಭದ್ರತಾ ಸಹಾಯಕರಾಗಿ ನೇಮಿಸಲಾಗಿದೆ ಆದರೆ ಅವರು ರಷ್ಯಾ-ಉಕ್ರೇನ್ ಗಡಿಯಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ನಮ್ಮ ಸುರಕ್ಷತೆ ಮತ್ತು ಭದ್ರತೆಗಾಗಿ ನಾವು ಭಯಪಡುತ್ತೇವೆ. ಪದೇ ಪದೇ ಮನವಿ ಮಾಡಿದರೂ ಸರ್ಕಾರ ನಮ್ಮನ್ನು ರಕ್ಷಿಸಲು ಏನನ್ನೂ ಮಾಡುತ್ತಿಲ್ಲ ಎಂದು ಭಾರತೀಯ ಸಿಬ್ಬಂದಿಗಳು ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...