Homeಮುಖಪುಟಒಡಿಸ್ಸಾ ಭೀಕರ ರೈಲು ದುರಂತಕ್ಕೆ 233 ಮಂದಿ ಸಾವು, 900ಕ್ಕೂ ಅಧಿಕ ಮಂದಿಗೆ ಗಾಯ: ಮೂರು...

ಒಡಿಸ್ಸಾ ಭೀಕರ ರೈಲು ದುರಂತಕ್ಕೆ 233 ಮಂದಿ ಸಾವು, 900ಕ್ಕೂ ಅಧಿಕ ಮಂದಿಗೆ ಗಾಯ: ಮೂರು ರೈಲುಗಳು ಹಳಿತಪ್ಪಿದ್ದು ಹೇಗೆ?

- Advertisement -
- Advertisement -

ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 233 ಮಂದಿ ಮೃತಪಟ್ಟು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ತಮ್ಮದಲ್ಲದ ತಪ್ಪಿಗೆ ಸಾವನಪ್ಪಿದ ಈ ಜನರ ಕುಟುಂಬಸ್ಥರು ದುಃಖದ ಮಡುವಿನಲ್ಲಿ ಮುಳುಗಿದ್ದಾರೆ.

ನಿನ್ನೆ ಸಂಜೆ 7 ಗಂಟೆ ಹೊತ್ತಿನಲ್ಲಿ ಒಡಿಶಾದ ಬಾಲಸೋರ್ ಬಳಿಯ ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲುಗಳು ಹಳಿ ತಪ್ಪಿದ ಪರಿಣಾಮ ಭಾರೀ ಅಪಘಾತ ಸಂಭವಿಸಿದೆ. ಟ್ರೈನ್‌ಗಳು ಡಿಕ್ಕಿ ಹೊಡೆದ ಪರಿಣಾಮ ರೈಲಿನ 3 ಸ್ಲೀಪರ್ ಕೋಚ್‌ಗಳನ್ನ ಹೊರತುಪಡಿಸಿ ಉಳಿದ 18 ಬೋಗಿಗಳು ಹಳಿ ತಪ್ಪಿ ಮತ್ತೊಂದು ಹಳಿಯ ಮೇಲೆ ಬಿದ್ದಿವೆ.

ಮೂರು ರೈಲುಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದು ಹೇಗೆ

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹೌರಾಗೆ ತೆರಳುತ್ತಿದ್ದಾಗ ಹಲವಾರು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದವು.

ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಚೆನ್ನೈಗೆ ತೆರಳುತ್ತಿದ್ದಾಗ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದಿದೆ.

ಹಳಿತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ನ 10-12 ಬೋಗಿಗಳು ನಂತರ ಗೂಡ್ಸ್ ರೈಲಿನ ವ್ಯಾಗನ್‌ಗಳಿಗೆ ಡಿಕ್ಕಿ ಹೊಡೆದವು. ಹಾಗಾಗಿ ಭೀಕರ ದುರಂತ ಸಂಭವಿಸಿದೆ.

ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಕೋರಮಂಡಲ್‌ ಎಕ್ಸ್‌ಪ್ರೆಸ್ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಕೋಲ್ಕತ್ತಾ ಬಳಿಯ ಶಾಲಿಮಾರ್ ನಿಲ್ದಾಣದಿಂದ ಚೆನ್ನೈ ಸೆಂಟ್ರಲ್ ನಿಲ್ದಾಣಕ್ಕೆ ಈ ರೈಲು ತೆರಳುತ್ತಿದ್ದಾಗ ಬಹನಾಗಾ ಬಜಾರ್ ನಿಲ್ದಾಣದ ಬಳಿ ರಾತ್ರಿ 7.20ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಗಾಯಗೊಂಡ ಪ್ರಯಾಣಿಕರನ್ನು ಬಾಲಸೋರ್ ವೈದ್ಯಕೀಯ ಕಾಲೇಜು, ಸೊರೊದಲ್ಲಿನ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಗೋಪಾಲಪುರ, ಖಾಂತಪಾದದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ಯಲಾಗುತ್ತಿದೆ.

ವಿಶೇಷ ಪರಿಹಾರ ಆಯುಕ್ತರ (ಎಸ್‌ಆರ್‌ಸಿ) ಕಚೇರಿಯು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಅಗ್ನಿಶಾಮಕ ದಳವನ್ನು ನಿಯೋಜಿಸಿದ್ದಾರೆ. ಎಸ್‌ಆರ್‌ಸಿಯ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.

ಒಡಿಶಾ ಸರ್ಕಾರವು ಕಾರ್ಯಾಚರಣೆಗೆ ಸಹಾಯ ಮಾಡಲು ಅಪಘಾತ ಸ್ಥಳದಲ್ಲಿ ಜನರೇಟರ್ ಮತ್ತು ಲೈಟ್‌ ವ್ಯವಸ್ಥೆ ಮಾಡಿದೆ.

ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಐದು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ ಎಂದು ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಒಡಿಶಾ ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಹೆಚ್ಚುವರಿ ನಿರ್ದೇಶನಾಲಯ ಕೂಡ 15 ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಿದೆ.

ರೈಲ್ವೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರ ನಿನ್ನೆ ರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕು. ಘಟನೆಯ ಮೂಲ ಕಾರಣವನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ಘೋಷಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಮುಂಜಾನೆ ಹೇಳಿದ್ದಾರೆ.

ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು, ಅಪಘಾತ ಸ್ಥಳಕ್ಕೆ ತುರ್ತಾಗಿ ಭೇಟಿ ನೀಡಲು ಮತ್ತು ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಎಸ್‌ಆರ್‌ಸಿಗೆ ತಿಳಿಸಲು ಬಾಲಸೋರ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸೂಚಿಸಲಾಗಿದೆ.

ಕೋರಮಂಡಲ್ ಎಕ್ಸ್‌ಪ್ರೆಸ್‌ ಎಂಜಿನ್, ಗೂಡ್ಸ್ ರೈಲಿನ ಮೇಲೆ ಹತ್ತಿರುವುದನ್ನು ಘಟನೆಯ ದೃಶ್ಯಾವಳಿಗಳು ತೋರಿಸಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಎರಡೂ ರೈಲುಗಳು ಒಂದೇ ರೈಲು ಹಳಿಯಲ್ಲಿದ್ದವು. ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

ಸಹಾಯವಾಣಿ ಸಂಖ್ಯೆ 06782262286 ತೆರೆಯಲಾಗಿದ್ದು, ತುರ್ತು ಸೇವೆ ಒದಗಿಸಲಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರತಿಕ್ರಿಯಿಸಿದ್ದು, “ಘಟನೆ ತಿಳಿದು ಆಘಾತವಾಗಿದೆ. ಪಶ್ಚಿಮ ಬಂಗಾಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಶಾಲಿಮಾರ್-ಕೊರಮಂಡಲ್‌ ಎಕ್ಸ್‌ಪ್ರೆಸ್ ಇಂದು ಸಂಜೆ ಬಾಲಸೋರ್ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಜನರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಆಘಾತವಾಯಿತು” ಎಂದಿದ್ದಾರೆ.

“ನಮ್ಮ ಜನರ ಸಲುವಾಗಿ ನಾವು ಒಡಿಶಾ ಸರ್ಕಾರ ಮತ್ತು ಆಗ್ನೇಯ ರೈಲ್ವೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ನಮ್ಮ ತುರ್ತು ನಿಯಂತ್ರಣ ಕೊಠಡಿಯನ್ನು (033- 22143526/ 22535185) ಸಕ್ರಿಯಗೊಳಿಸಲಾಗಿದೆ. ಒಡಿಶಾ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಹಕರಿಸಲು, ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ನಾವು 5- 6 ಸದಸ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದೇವೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ” ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...