Homeಮುಖಪುಟಒಡಿಸ್ಸಾ ಭೀಕರ ರೈಲು ದುರಂತಕ್ಕೆ 233 ಮಂದಿ ಸಾವು, 900ಕ್ಕೂ ಅಧಿಕ ಮಂದಿಗೆ ಗಾಯ: ಮೂರು...

ಒಡಿಸ್ಸಾ ಭೀಕರ ರೈಲು ದುರಂತಕ್ಕೆ 233 ಮಂದಿ ಸಾವು, 900ಕ್ಕೂ ಅಧಿಕ ಮಂದಿಗೆ ಗಾಯ: ಮೂರು ರೈಲುಗಳು ಹಳಿತಪ್ಪಿದ್ದು ಹೇಗೆ?

- Advertisement -
- Advertisement -

ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 233 ಮಂದಿ ಮೃತಪಟ್ಟು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ತಮ್ಮದಲ್ಲದ ತಪ್ಪಿಗೆ ಸಾವನಪ್ಪಿದ ಈ ಜನರ ಕುಟುಂಬಸ್ಥರು ದುಃಖದ ಮಡುವಿನಲ್ಲಿ ಮುಳುಗಿದ್ದಾರೆ.

ನಿನ್ನೆ ಸಂಜೆ 7 ಗಂಟೆ ಹೊತ್ತಿನಲ್ಲಿ ಒಡಿಶಾದ ಬಾಲಸೋರ್ ಬಳಿಯ ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲುಗಳು ಹಳಿ ತಪ್ಪಿದ ಪರಿಣಾಮ ಭಾರೀ ಅಪಘಾತ ಸಂಭವಿಸಿದೆ. ಟ್ರೈನ್‌ಗಳು ಡಿಕ್ಕಿ ಹೊಡೆದ ಪರಿಣಾಮ ರೈಲಿನ 3 ಸ್ಲೀಪರ್ ಕೋಚ್‌ಗಳನ್ನ ಹೊರತುಪಡಿಸಿ ಉಳಿದ 18 ಬೋಗಿಗಳು ಹಳಿ ತಪ್ಪಿ ಮತ್ತೊಂದು ಹಳಿಯ ಮೇಲೆ ಬಿದ್ದಿವೆ.

ಮೂರು ರೈಲುಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದು ಹೇಗೆ

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹೌರಾಗೆ ತೆರಳುತ್ತಿದ್ದಾಗ ಹಲವಾರು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದವು.

ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಚೆನ್ನೈಗೆ ತೆರಳುತ್ತಿದ್ದಾಗ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದಿದೆ.

ಹಳಿತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ನ 10-12 ಬೋಗಿಗಳು ನಂತರ ಗೂಡ್ಸ್ ರೈಲಿನ ವ್ಯಾಗನ್‌ಗಳಿಗೆ ಡಿಕ್ಕಿ ಹೊಡೆದವು. ಹಾಗಾಗಿ ಭೀಕರ ದುರಂತ ಸಂಭವಿಸಿದೆ.

ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಕೋರಮಂಡಲ್‌ ಎಕ್ಸ್‌ಪ್ರೆಸ್ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಕೋಲ್ಕತ್ತಾ ಬಳಿಯ ಶಾಲಿಮಾರ್ ನಿಲ್ದಾಣದಿಂದ ಚೆನ್ನೈ ಸೆಂಟ್ರಲ್ ನಿಲ್ದಾಣಕ್ಕೆ ಈ ರೈಲು ತೆರಳುತ್ತಿದ್ದಾಗ ಬಹನಾಗಾ ಬಜಾರ್ ನಿಲ್ದಾಣದ ಬಳಿ ರಾತ್ರಿ 7.20ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಗಾಯಗೊಂಡ ಪ್ರಯಾಣಿಕರನ್ನು ಬಾಲಸೋರ್ ವೈದ್ಯಕೀಯ ಕಾಲೇಜು, ಸೊರೊದಲ್ಲಿನ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಗೋಪಾಲಪುರ, ಖಾಂತಪಾದದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ಯಲಾಗುತ್ತಿದೆ.

ವಿಶೇಷ ಪರಿಹಾರ ಆಯುಕ್ತರ (ಎಸ್‌ಆರ್‌ಸಿ) ಕಚೇರಿಯು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಅಗ್ನಿಶಾಮಕ ದಳವನ್ನು ನಿಯೋಜಿಸಿದ್ದಾರೆ. ಎಸ್‌ಆರ್‌ಸಿಯ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.

ಒಡಿಶಾ ಸರ್ಕಾರವು ಕಾರ್ಯಾಚರಣೆಗೆ ಸಹಾಯ ಮಾಡಲು ಅಪಘಾತ ಸ್ಥಳದಲ್ಲಿ ಜನರೇಟರ್ ಮತ್ತು ಲೈಟ್‌ ವ್ಯವಸ್ಥೆ ಮಾಡಿದೆ.

ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಐದು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ ಎಂದು ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಒಡಿಶಾ ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಹೆಚ್ಚುವರಿ ನಿರ್ದೇಶನಾಲಯ ಕೂಡ 15 ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಿದೆ.

ರೈಲ್ವೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರ ನಿನ್ನೆ ರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕು. ಘಟನೆಯ ಮೂಲ ಕಾರಣವನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ಘೋಷಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಮುಂಜಾನೆ ಹೇಳಿದ್ದಾರೆ.

ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು, ಅಪಘಾತ ಸ್ಥಳಕ್ಕೆ ತುರ್ತಾಗಿ ಭೇಟಿ ನೀಡಲು ಮತ್ತು ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಎಸ್‌ಆರ್‌ಸಿಗೆ ತಿಳಿಸಲು ಬಾಲಸೋರ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸೂಚಿಸಲಾಗಿದೆ.

ಕೋರಮಂಡಲ್ ಎಕ್ಸ್‌ಪ್ರೆಸ್‌ ಎಂಜಿನ್, ಗೂಡ್ಸ್ ರೈಲಿನ ಮೇಲೆ ಹತ್ತಿರುವುದನ್ನು ಘಟನೆಯ ದೃಶ್ಯಾವಳಿಗಳು ತೋರಿಸಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಎರಡೂ ರೈಲುಗಳು ಒಂದೇ ರೈಲು ಹಳಿಯಲ್ಲಿದ್ದವು. ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

ಸಹಾಯವಾಣಿ ಸಂಖ್ಯೆ 06782262286 ತೆರೆಯಲಾಗಿದ್ದು, ತುರ್ತು ಸೇವೆ ಒದಗಿಸಲಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರತಿಕ್ರಿಯಿಸಿದ್ದು, “ಘಟನೆ ತಿಳಿದು ಆಘಾತವಾಗಿದೆ. ಪಶ್ಚಿಮ ಬಂಗಾಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಶಾಲಿಮಾರ್-ಕೊರಮಂಡಲ್‌ ಎಕ್ಸ್‌ಪ್ರೆಸ್ ಇಂದು ಸಂಜೆ ಬಾಲಸೋರ್ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಜನರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಆಘಾತವಾಯಿತು” ಎಂದಿದ್ದಾರೆ.

“ನಮ್ಮ ಜನರ ಸಲುವಾಗಿ ನಾವು ಒಡಿಶಾ ಸರ್ಕಾರ ಮತ್ತು ಆಗ್ನೇಯ ರೈಲ್ವೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ನಮ್ಮ ತುರ್ತು ನಿಯಂತ್ರಣ ಕೊಠಡಿಯನ್ನು (033- 22143526/ 22535185) ಸಕ್ರಿಯಗೊಳಿಸಲಾಗಿದೆ. ಒಡಿಶಾ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಹಕರಿಸಲು, ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ನಾವು 5- 6 ಸದಸ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದೇವೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ” ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...