Homeಮುಖಪುಟಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

- Advertisement -
- Advertisement -

ಬಂಗಾಳ ಬಿಜೆಪಿಯಲ್ಲಿ ಪಕ್ಷಾಂತರದ ಪರ್ವ ಆರಂಭವಾಗಿದೆ. ಒಬ್ಬರ ನಂತರ ಒಬ್ಬರು ಬಿಜೆಪಿ ತೊರೆದು ತಮ್ಮ ಹಳೆಯ ಟಿಎಂಸಿ ಪಕ್ಷ ಸೇರುತ್ತಿದ್ದಾರೆ. ಇದು ಅಲ್ಲಿನ ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿದೆ. ಈ ಕುರಿತು ನಿನ್ನೆ ಪಕ್ಷದ ಶಾಸಕರೊಂದಗೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಬಂಗಾಳ ರಾಜ್ಯಪಾಲರನ್ನು ಭೇಟಿಯಾದರು. ಆದರೆ ಮೂರನೇ ಒಂದು ಭಾಗ ಅಂದರೆ 74 ಶಾಸಕರಲ್ಲಿ 24 ಶಾಸಕರು ಸುವೆಂದು ಅಧಿಕಾರಿಯಿಂದ ದೂರವುಳಿದಿದ್ದು, ರಾಜ್ಯಪಾಲರ ಭೇಟಿಗೆ ಗೈರು ಹಾಜರಾಗಿದ್ದಾರೆ. ಇದು ಬಂಗಾಳ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಮತ್ತೊಮ್ಮೆ ಜಗಜ್ಜಾಹೀರಾಗಿದೆ.

‘ತೋಡ್ನಾ-ಜೋಡ್ನಾ (ಕಳಿಸುವುದು-ಕರೆದುಕೊಳ್ಳುವುದು)’ ಟಿಎಂಸಿಯ ಕೊಳಕು ರಾಜಕೀಯದ ಒಂದು ಭಾಗವಾಗಿದೆ. ಅವರು ಕಳೆದ 10 ವರ್ಷಗಳಿಂದ ಇದನ್ನು ಮಾಡುತ್ತಿದ್ದಾರೆ ಮತ್ತು ಯಾರೂ ಇದನ್ನು ವಿರೋಧಿಸಲಿಲ್ಲ. ಆದರೆ ಇದೀಗ ಇದನ್ನು ವಿರೋಧಿಸಲಾಗುತ್ತಿದೆ ಮತ್ತು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸುವೆಂದು ಅಧಿಕಾರಿ ಹೇಳಿದ್ದಾರೆ.

ನಾನು ಎಲ್ಲ ಶಾಸಕರಿಗೂ ಕರೆ ಮಾಡಿದ್ದೆ. 50 ಶಾಸಕರು ಇಂದು ನಮ್ಮೊಂದಿಗೆ ಸೇರಿದ್ದಾರೆ. ರಾಜ ಭವನದಲ್ಲಿ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಿ ಪಕ್ಷಾಂತರ ವಿರೋಧಿ ಕಾನೂನು ಸೇರಿದಂತೆ ಹಲವು ವಿಷಯಗಳ ಕುರಿತು ಮಾತನಾಡಲಿದ್ದೇವೆ. ಉಳಿದ ಶಾಸಕರನ್ನು ಇಂದು ನಮ್ಮನ್ನು ಸೇರಿಕೊಳ್ಳುತ್ತಾರೆ, ಇಲ್ಲದಿದ್ದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಭೆಗೆ ಹಾಜರಾಗದ 24 ಶಾಸಕರು ಮರಳಿ ಟಿಎಂಸಿಯೆಡೆಗೆ ಮಹಾವಲಸೆ ನಡೆಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡತೊಡಗಿವೆ. ಕೆಲ ಶಾಸಕರು ಬಹಿರಂಗ ಹೇಳಿಕೆಗಳನ್ನು ಸಹ ನೀಡಿರುವುದು ಇದಕ್ಕೆ ಪುಷ್ಠಿ ನೀಡಿದೆ. ಹಲವು ಶಾಸಕರು ಬಿಜೆಪಿಯಲ್ಲಿ ಸುವೆಂದು ಅಧಿಕಾರಿಯ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ ಎನ್ನಲಾಗಿದೆ.

ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ, ಈ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಹಲವರಿಗೆ ಇರಿಸು ಮುರಿಸು ತಂದಿದೆ. ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಾಗಿದೆ. ಚಂಡಮಾರುತದಿಂದಾದ ಹಾನಿ ಪರಿಶೀಲನಾ ಸಭೆಯಲ್ಲಿಯೂ ಮೋದಿ ಸುವೆಂದುಗೆ ಆಹ್ವಾನ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳಿಂದ ಈಗಗಾಲೇ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಪಕ್ಷ ತೊರೆದಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ತನ್ನ ಪುತ್ರನೊಂದಿಗೆ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಅವರು ಹೇಳಿದ್ದರು. ಅವರು ಟಿಎಂಸಿ ಸೇರಿದ ನಂತರ ರಾಜೀಬ್ ಬ್ಯಾನರ್ಜಿ ಮತ್ತು ದೀಪೇಂಡು ಬಿಸ್ವಾಸ್ ಸೇರಿದಂತೆ ಹಲವಾರು ನಾಯಕರು ಇದನ್ನು ಅನುಸರಿಸುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಇದೇ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಈ ಹಿಂದೆ ಪಕ್ಷ ತೊರೆದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅಭಿಯಾನ ಆರಂಭಿಸಿದ್ದಾರೆ. ಕನಿಷ್ಠ 30 ಬಿಜೆಪಿ ಶಾಸಕರೊಂದಿಗೆ ಟಿಎಂಸಿ ಸಂಪರ್ಕದಲ್ಲಿದೆ ಎಂಬ ಮಾತುಗಳು ಕೇಳಿಬಂದಿದ್ದು ಇದು ಬಿಜೆಪಿಗೆ ತಲೆನೋವಾಗಿದೆ. ಹಾಗಾಗಿ ಅವರು ಪಕ್ಷಾಂತರ ನಿಷೇಧ ಕಾಯ್ದೆಯ ಮೊರೆ ಹೋಗಿದ್ದಾರೆ.


ಇದನ್ನೂ ಓದಿ: ಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....