Homeಮುಖಪುಟಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

- Advertisement -
- Advertisement -

ಬಂಗಾಳ ಬಿಜೆಪಿಯಲ್ಲಿ ಪಕ್ಷಾಂತರದ ಪರ್ವ ಆರಂಭವಾಗಿದೆ. ಒಬ್ಬರ ನಂತರ ಒಬ್ಬರು ಬಿಜೆಪಿ ತೊರೆದು ತಮ್ಮ ಹಳೆಯ ಟಿಎಂಸಿ ಪಕ್ಷ ಸೇರುತ್ತಿದ್ದಾರೆ. ಇದು ಅಲ್ಲಿನ ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿದೆ. ಈ ಕುರಿತು ನಿನ್ನೆ ಪಕ್ಷದ ಶಾಸಕರೊಂದಗೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಬಂಗಾಳ ರಾಜ್ಯಪಾಲರನ್ನು ಭೇಟಿಯಾದರು. ಆದರೆ ಮೂರನೇ ಒಂದು ಭಾಗ ಅಂದರೆ 74 ಶಾಸಕರಲ್ಲಿ 24 ಶಾಸಕರು ಸುವೆಂದು ಅಧಿಕಾರಿಯಿಂದ ದೂರವುಳಿದಿದ್ದು, ರಾಜ್ಯಪಾಲರ ಭೇಟಿಗೆ ಗೈರು ಹಾಜರಾಗಿದ್ದಾರೆ. ಇದು ಬಂಗಾಳ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಮತ್ತೊಮ್ಮೆ ಜಗಜ್ಜಾಹೀರಾಗಿದೆ.

‘ತೋಡ್ನಾ-ಜೋಡ್ನಾ (ಕಳಿಸುವುದು-ಕರೆದುಕೊಳ್ಳುವುದು)’ ಟಿಎಂಸಿಯ ಕೊಳಕು ರಾಜಕೀಯದ ಒಂದು ಭಾಗವಾಗಿದೆ. ಅವರು ಕಳೆದ 10 ವರ್ಷಗಳಿಂದ ಇದನ್ನು ಮಾಡುತ್ತಿದ್ದಾರೆ ಮತ್ತು ಯಾರೂ ಇದನ್ನು ವಿರೋಧಿಸಲಿಲ್ಲ. ಆದರೆ ಇದೀಗ ಇದನ್ನು ವಿರೋಧಿಸಲಾಗುತ್ತಿದೆ ಮತ್ತು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸುವೆಂದು ಅಧಿಕಾರಿ ಹೇಳಿದ್ದಾರೆ.

ನಾನು ಎಲ್ಲ ಶಾಸಕರಿಗೂ ಕರೆ ಮಾಡಿದ್ದೆ. 50 ಶಾಸಕರು ಇಂದು ನಮ್ಮೊಂದಿಗೆ ಸೇರಿದ್ದಾರೆ. ರಾಜ ಭವನದಲ್ಲಿ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಿ ಪಕ್ಷಾಂತರ ವಿರೋಧಿ ಕಾನೂನು ಸೇರಿದಂತೆ ಹಲವು ವಿಷಯಗಳ ಕುರಿತು ಮಾತನಾಡಲಿದ್ದೇವೆ. ಉಳಿದ ಶಾಸಕರನ್ನು ಇಂದು ನಮ್ಮನ್ನು ಸೇರಿಕೊಳ್ಳುತ್ತಾರೆ, ಇಲ್ಲದಿದ್ದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಭೆಗೆ ಹಾಜರಾಗದ 24 ಶಾಸಕರು ಮರಳಿ ಟಿಎಂಸಿಯೆಡೆಗೆ ಮಹಾವಲಸೆ ನಡೆಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡತೊಡಗಿವೆ. ಕೆಲ ಶಾಸಕರು ಬಹಿರಂಗ ಹೇಳಿಕೆಗಳನ್ನು ಸಹ ನೀಡಿರುವುದು ಇದಕ್ಕೆ ಪುಷ್ಠಿ ನೀಡಿದೆ. ಹಲವು ಶಾಸಕರು ಬಿಜೆಪಿಯಲ್ಲಿ ಸುವೆಂದು ಅಧಿಕಾರಿಯ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ ಎನ್ನಲಾಗಿದೆ.

ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ, ಈ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಹಲವರಿಗೆ ಇರಿಸು ಮುರಿಸು ತಂದಿದೆ. ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಾಗಿದೆ. ಚಂಡಮಾರುತದಿಂದಾದ ಹಾನಿ ಪರಿಶೀಲನಾ ಸಭೆಯಲ್ಲಿಯೂ ಮೋದಿ ಸುವೆಂದುಗೆ ಆಹ್ವಾನ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳಿಂದ ಈಗಗಾಲೇ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಪಕ್ಷ ತೊರೆದಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ತನ್ನ ಪುತ್ರನೊಂದಿಗೆ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಅವರು ಹೇಳಿದ್ದರು. ಅವರು ಟಿಎಂಸಿ ಸೇರಿದ ನಂತರ ರಾಜೀಬ್ ಬ್ಯಾನರ್ಜಿ ಮತ್ತು ದೀಪೇಂಡು ಬಿಸ್ವಾಸ್ ಸೇರಿದಂತೆ ಹಲವಾರು ನಾಯಕರು ಇದನ್ನು ಅನುಸರಿಸುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಇದೇ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಈ ಹಿಂದೆ ಪಕ್ಷ ತೊರೆದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅಭಿಯಾನ ಆರಂಭಿಸಿದ್ದಾರೆ. ಕನಿಷ್ಠ 30 ಬಿಜೆಪಿ ಶಾಸಕರೊಂದಿಗೆ ಟಿಎಂಸಿ ಸಂಪರ್ಕದಲ್ಲಿದೆ ಎಂಬ ಮಾತುಗಳು ಕೇಳಿಬಂದಿದ್ದು ಇದು ಬಿಜೆಪಿಗೆ ತಲೆನೋವಾಗಿದೆ. ಹಾಗಾಗಿ ಅವರು ಪಕ್ಷಾಂತರ ನಿಷೇಧ ಕಾಯ್ದೆಯ ಮೊರೆ ಹೋಗಿದ್ದಾರೆ.


ಇದನ್ನೂ ಓದಿ: ಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...